ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ಮದ್ಯ ವಶ

ಚುನಾವಣಾಧಿಕಾರಿಗಳು ಅಕ್ರಮ ಮದ್ಯ ಹಂಚುವಿಕೆ ಇನ್ನಿತರೆ ಆಮಿಷಗಳನ್ನೊಡ್ಡಿ ಮತದಾರರನ್ನು ಸೆಳೆಯುವ ಅಭ್ಯರ್ಥಿಗಳ ಬಗ್ಗೆ, ಪಕ್ಷದ ಕಾರ್ಯ ವೈಖರಿ ಬಗ್ಗೆ ನಿಗಾಯಿಟ್ಟಿದ್ದು, ಆದರೂ ಎಲ್ಲರ ಕಣ್ಣು ತಪ್ಪಿಸಿ ಮತದಾರರಿಗೆ ಮದ್ಯ ಹಂಚಿ ಮತ ಕೇಳುವ ಕಾರ್ಯಕ್ಕೆ ಕೆಲವರು ಮುಂದಾಗಿರುವುದು ಕಂಡು ಬಂದಿದೆ. ಈ ನಡುವೆ ಮತದಾರರಿಗೆ ಹಂಚಲು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸಾವಿರಾರು ರೂಪಾಯಿ ಮೌಲ್ಯದ ಮದ್ಯವನ್ನು ಕುಶಾಲನಗರ ಪೊಲೀಸರು ವಶ ಪಡಿಸಿಕೊಂಡು ಓರ್ವನನ್ನು ಬಂಧಿಸಿದ್ದಾರೆ.
ಸಮೀಪದ ಮುಳ್ಳುಸೋಗೆ ಗ್ರಾ.ಪಂ.ಉಪಾಧ್ಯಕ್ಷ ಎಂ.ಎಸ್.ಶಿವಾನಂದ ಎಂಬುವರ ಸಹೋದರ ಎಂ.ಎಸ್. ಕುಮಾರ ಬಂಧಿತ ಆರೋಪಿಯಾಗಿದ್ದಾನೆ. ಈತ ಮತದಾರರಿಗೆ ಹಂಚಲು ಮದ್ಯವನ್ನು ಮನೆಯೊಂದರಲ್ಲಿ ಶೇಖರಿಸಿಟ್ಟಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಸೋಮವಾರಪೇಟೆ ವಿಭಾಗದ ಡಿವೈಎಸ್ಪಿ ಜಯಪ್ರಕಾಶ್ ಅಕ್ಕರಕಿ ನೇತೃತ್ವದಲ್ಲಿ ಸಂಚಾರಿ ಠಾಣಾಧಿಕಾರಿ ನಾಗೇಶ್ ಮತ್ತು ಸಿಬ್ಬಂದಿಗಳು ಮಧ್ಯರಾತ್ರಿಯ ಸಮಯದಲ್ಲಿ ದಾಳಿ ಮಾಡಿ ಹಾರಂಗಿ ರಸ್ತೆಯಲ್ಲಿರುವ ಮನೆಯೊಂದರಲ್ಲಿದ್ದ ಸುಮಾರು 30 ಸಾವಿರ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications