ವಾಜಪೇಯಿ ಅವರಿಗೆ ಭಾರತರತ್ನ ನೀಡಿ : ಬಿಜೆಪಿ

ಭಾರತದಲ್ಲಿ ರಾಜಕೀಯ ಮೌಲ್ಯಗಳು ಕುಸಿದಿದ್ದ ಸಂದರ್ಭದಲ್ಲಿ ಅವುಗಳನ್ನು ಮತ್ತೆ ಮೇಲೆತ್ತುವಲ್ಲಿ ವಾಜಪೇಯಿ ಅವರು ಪಟ್ಟ ಶ್ರಮ ಅಷ್ಟಿಷ್ಟಲ್ಲ. ಅವರನ್ನು ದೇಶ ಎಂದಿಗೂ ಮರೆಯುವುದಿಲ್ಲ. ಹಾಗಾಗಿ ವಾಜಪೇಯಿ ಅವರಿಗೆ ಭಾರತರತ್ನ ಪ್ರಶಸ್ತಿ ನೀಡುವ ವಿಚಾರದಲ್ಲಿ ಎಲ್ಲರೂ ಬೆಂಬಲಿಸಬೇಕು ಎಂದು ಬಿಜೆಪಿ ನಾಯಕ ರಾಜನಾಥ್ ಸಿಂಗ್ ಹೇಳಿದ್ದಾರೆ.
ಈ ಮಧ್ಯೆ ವಾಜಪೇಯಿ ನಿವಾಸಕ್ಕೆ ತೆರಳಿದ ಅಡ್ವಾಣಿ ಸೇರಿದಂತೆ ಬಿಜೆಪಿ ನಾಯಕರು ಶುಭಾಶಯ ಕೋರಿದ್ದಾರೆ. ಕೇರಳ ಪ್ರವಾಸ ಮುಗಿಸಿ ನವದೆಹಲಿಗೆ ಆಗಮಿಸಿದ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ನೇರವಾಗಿ ವಾಜಪೇಯಿ ನಿವಾಸಕ್ಕೆ ಭೇಟಿ ಹೂಗುಚ್ಛ ನೀಡಿ ಶುಭ ಕೋರಿರುವುದು ವಿಶೇಷ.(ಅಟಲ್ ಬಿಹಾರಿ ವಾಜಪೇಯಿ)












Click it and Unblock the Notifications