ಜಿಪಂ ಚುನಾವಣೆ : 12 ಜಿಲ್ಲೆಗಳಲ್ಲಿ ಶಾಂತಿಯುತ ಮತದಾನ

ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ಹಲವಡೆ ಮತದಾನ ಬಹಿಷ್ಕಾರ, ಅಲ್ಲಲ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ, ಮತಪಟ್ಟಿಯಲ್ಲಿ ಹೆಸರು ನಾಪತ್ತೆ, ಮತಗಟ್ಟೆಗೆ ಬೀಗ ಜಡಿದು ಪ್ರತಿಭಟನೆ ಸೇರಿದಂತೆ ಹಲವು ಗೊಂದಲ-ಗೋಜಲುಗಳು, ಲಘು ಲಾಠಿಜಾರ್ಜ್ ನಡುವೆ ಪ್ರಥಮ ಹಂತದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಬಹುತೇಕ ಶಾಂತಿಯುತ- ಇದು ಇಂದಿನ ಮತದಾನದ ಹೈಲೈಟ್ಸ್
ಚುನಾವಣೆ ಎಣ್ಣೆಗೆ ಬಲಿ? : ತುಮಕೂರು ಜಿಲ್ಲೆಯ ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನರಸಿಂಹಯ್ಯ ಎಂಬ ವ್ಯಕ್ತಿ ವಿಪರೀತ ಮದ್ಯಪಾನ ಮಾಡಿ ಸಾವಿಗೀಡಾಗಿದ್ದಾರೆ. ಚುನಾವಣೆಗೆ ಹಂಚಿದ್ದ ಮದ್ಯ ಸೇವಿಸಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಅಧಿಕಾರಿಗಳ ಮಾತ್ರ ವಯಸ್ಸಾಗಿದ್ದರಿಂದ ನರಸಿಂಹಯ್ಯ ಸಾವಿಗೀಡಾಗಿದ್ದಾನೆ ಎಂದು ಹೇಳಿದ್ದಾರೆ. ಚಿಂತಾಮಣಿ ತಾಲ್ಲೂಕಿನ ಗಡಿಗವಾರಹಳ್ಳಿಯಲ್ಲಿ ಮರುಮತದಾನಕ್ಕೆ ಆಗ್ರಹಿಸಿ ಮಾಜಿ ಶಾಸಕ ಕೃಷ್ಣಾರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ. ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ. ಇಬ್ಬರಿಗೆ ಗಾಯ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೂಗ್ಗ, ತಮಕೂರು, ಬೀದರ್, ಬಳ್ಳಾರಿ, ರಾಯಚೂರು, ಯಾದಗಿರಿ ಸೇರಿದಂತೆ 12 ಜಿಲ್ಲೆಗಳ 375 ಸ್ಥಾನಗಳ ಹಾಗೂ 1341 ಸ್ಥಾನಗಳಿಗೆ ನಡೆದ ಚುನಾವಣೆ ಬಹುತೇಕ ಶಾಂತಿಯುತವಾಗಿತ್ತು.
ಒಂದು ಜಿಪಂ ಹಾಗೂ 6 ತಾಪಂ ಸ್ಥಾನಗಳಿಗೆ ಈಗಾಗಲೇ ಅವಿರೋಧ ಆಯ್ಕೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಡಕಮಾರನಹಳ್ಳಿಯಲ್ಲಿ ಶಾಸಕ ನಂದೀಶ್ ರೆಡ್ಡಿ ಕಾಣಿಸಿಕೊಂಡು ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ಜೆಡಿಎಸ್ ಮುಖಂಡ ಇ ಕೃಷ್ಣಪ್ಪ ಮಾಡಿದ ಆರೋಪ ಮಾತಿನ ಚಕಮಕಿಗೆ ಕಾರಣವಾಯಿತು.
ಬಹಿಷ್ಕಾರ : ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ಚಿತ್ರದುರ್ಗ ಜಿಲ್ಲೆ, ಹೊಸದುರ್ಗ ತಾಲ್ಲೂಕಿನ ಕೋಡಿಹಳ್ಳಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದರು. ಅದೇ ರೀತಿ ಯಾದಗಿರಿ ಜಿಲ್ಲೆಯ ಬಪ್ಪರಗಾ ಗ್ರಾಮದಲ್ಲಿ ರಸ್ತೆ ಸರಿ ಇಲ್ಲ ಎಂದು ಆರೋಪಿಸಿ ಮತದಾನಕ್ಕೆ ಅಡ್ಡಿ. ತುರುವೇಕೆರೆ ತಾಲ್ಲೂಕಿನ ದೊಡ್ಡಟ್ಟಿ, ಶಿವಮೂಗ್ಗ ಜಿಲ್ಲೆಯ ಅರೋಂಬಳ್ಳಿ, ಶ್ರೀನಿವಾಸಪುರದ ತಾಲ್ಲೂಕು ಯಲ್ದೂರು, ಲಿಂಗಸೂಗೂರು ತಾಲ್ಲೂಕಿನ ಅನ್ವರಿ ಗ್ರಾಮ, ದೇವದುರ್ಗದ ಮಸ್ಕಲ್, ಡೊಂಬಳ್ಳಿ, ತೀರ್ಥಹಳ್ಳಿ ತಾಲ್ಲೂಕು ಲಿಂಗಾಪುರದಲ್ಲಿ ಮತಯಂತ್ರ ಕೈಕೊಟ್ಟಿದ್ದರಿಂದ ಮತದಾನ ಕೊಂಚ ವಿಳಂಬವಾಗಿತ್ತು.
ಮತ್ತೊಂದು ವಿಶೇಷ ಬಳ್ಳಾರಿಯ ಜಿಲ್ಲಾ ಪಂಚಾಯಿತಿ ಮತಕ್ಷೇತ್ರವೊಂದರಲ್ಲಿ ಜೆಡಿಎಸ್ ಚಿಹ್ನೆ ಸಮಾಜವಾದಿ ಪಕ್ಷದ ಅಭ್ಯರ್ಥಿಗೆ, ಸಮಾಜವಾದಿ ಅಭ್ಯರ್ಥಿಗೆ ಜೆಡಿಎಸ್ ಚಿಹ್ನೆ ಅದಲು ಬದಲಾಗಿದ್ದರಿಂದ ಮತದಾನವನ್ನು ಡಿ 31 ಕ್ಕೆ ಮುಂದೂಡಲಾಗಿದೆ. ಇದನ್ನು ಸ್ವತ ಬಳ್ಳಾರಿ ಜಿಲ್ಲಾಧಿಕಾರಿ ಬಿ ಶಿವಪ್ಪ ಸ್ಪಷ್ಟಪಡಿಸಿದ್ದಾರೆ. (ಜಿಲ್ಲಾ ಪಂಚಾಯತಿ ಚುನಾವಣೆ)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications