ಶುರುವಾದ ಮತದಾನ, ನೀರಸ ಆರಂಭ

ಪ್ರಥಮ ಬಾರಿಗೆ ವಿದ್ಯುನ್ಮಾನ ಮತ ಯಂತ್ರ ಬಳಸಿ ನಡೆಯುತ್ತಿರುವ ಚುನಾವಣೆ ಇದಾಗಿದ್ದು, ಜಿಪಂನ 1549 ಮಂದಿ ಹಾಗೂ ತಾಪಂನ 4762 ಮಂದಿ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆವರೆಗೆ ನಡೆಯಲಿದೆ. 12,880 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಈ ಪೈಕಿ 2651 ಮತಗಟ್ಟೆಗಳನ್ನು ಸೂಕ್ಷ್ಮ ಮತ್ತು 2,216 ಮತಗಟ್ಟೆಗಳನ್ನು ಅತಿಸೂಕ್ಷ್ಮ ಎಂದು ಗುರುತಿಸಲಾಗಿದೆ. ಒಟ್ಟು 86,900 ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
12 ಜಿಲ್ಲೆಗಳಲ್ಲಿ ಮತಗಾನ ಆರಂಭವಾಗಿದ್ದು, ನಿಧಾನಗತಿಯಲ್ಲಿ ಮತದಾರರು ಮತಗಟ್ಟೆ ಕಡೆಗೆ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕು ವ್ಯಾಪ್ತಿಯಲ್ಲಿ ಅಕ್ರಮ ಮತದಾನ ಮಾಡಲು ಬಂದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ತಾಲ್ಲೂಕಿನ ತಾರಾ ನಗರ ಜಿಪಂ ವ್ಯಾಪ್ತಿಯಲ್ಲಿ ಭುಜಂಗನಗರ ಮತಕ್ಷೇತ್ರದಲ್ಲಿ ಅಭ್ಯರ್ಥಿಗಳ ಚಿಹ್ನೆ ಅದಲು ಬದಲಾಗಿದ್ದರಿಂದ ಚುನಾವಣೆಯನ್ನು ಡಿ 31ಕ್ಕೆ ಮುಂದೂಡಲಾಗಿದೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಬಿ ಶಿವಪ್ಪ ತಿಳಿಸಿದ್ದಾರೆ.
ಗೆಲುವು ನಮ್ಮದೇ : ಜಿಪಂ ತಾಪಂ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ದೊರೆಯಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇನ್ನು ಮೂರು ತಿಂಗಳಲ್ಲಿ ಸರಕಾರ ಪತನಗೊಳ್ಳಲಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಅವರು, ನಿಜ ಮೂರು ತಿಂಗಳಲ್ಲಿ ಕೇಂದ್ರ ಸರಕಾರ ಪತನಗೊಳ್ಳಲಿದೆ ಎಂದು ಲೇವಡಿ ಮಾಡಿದರು.(ಮತದಾನ)
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications