ಮುಂಬೈ : ಉಗ್ರರ ದಾಳಿ, ಹೈಅಲರ್ಟ್

ಗುಪ್ತಚರ ಇಲಾಖೆ ನೀಡಿರುವ ಮಾಹಿತಿಯಿಂದ ಪ್ರಕಾರ, ಲಷ್ಕರ್ ಇ ತೊಯ್ಬಾ ಸಂಘಟನೆಯ ಪ್ರಾಂತೀಯ ಮುಖ್ಯಸ್ಥ ಮೆಹಪೂಜ್ ಅಲಂ ಎಂಬುವವನು ಅಕ್ರಮವಾಗಿ ಮುಂಬೈ ನಗರ ಪ್ರವೇಶಿಸಿದ್ದಾನೆ. ನಂತರ ಇದೀಗ ದೇಶದಿಂದ ಪರಾರಿಯಾಗಲು ಯತ್ನಿಸುತ್ತಿರುವುದರಿಂದ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಭದ್ರತೆ ಒದಗಿಸಲಾಗಿದೆ.
ವಿಮಾನ ನಿಲ್ದಾಣದಲ್ಲಿ ಹದ್ದಿನ ಕಣ್ಣಿನ ಕಾವಲು ಇರಿಸಲಾಗಿದ್ದು, ಪ್ರತಿಯೊಬ್ಬ ಪ್ರಯಾಣಿಕರನ್ನು ತಪಾಸಣೆ ಮಾಡಲಾಗುತ್ತಿದೆ. ಅಲಂ ಸೇರಿದಂತೆ ನಾಲ್ಕು ಉಗ್ರರು ಭಾರತದೊಳಗೆ ನುಸುಳಿದ್ದಾರೆ. ಕ್ರಿಸ್ ಮಸ್ ಗಿಂತ ಮುಂಚೆ ಮುಂಬೈ ಸೇರಿಕೊಂಡಿರುವ ಉಗ್ರರು, ಜನಜಂಗುಳಿ ಇರುವ ಪ್ರದೇಶಗಳ ಮೇಲೆ ಗುರಿ ಇರಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಹೊಸ ವರ್ಷ ಆಚರಣೆ ವೇಳೆ ಭಯೋತ್ಪಾದನೆ ನಡೆಸುವ ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ.
ಮುಂಬೈ ನಗರದಲ್ಲಿರುವ ಪ್ರತಿಯೊಂದು ಪಾರ್ಕ್, ಹೊಸ ವರ್ಷ ಆಚರಿಸುವ ವಿಶೇಷ ಸ್ಥಳಗಳಲ್ಲಿ ಬಾಂಬ್ ನಿಷ್ಕ್ರೀಯ ದಳವನ್ನು ನಿಯೋಜಿಸಿಲಾಗಿದೆ ಎಂದು ಮುಂಬೈ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಉಗ್ರನ ರೇಖಾಚಿತ್ರ ಬಿಡುಗಡೆಗೊಳಿಸಿರುವ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ಸೂಚನೆ ನೀಡಿದ್ದಾರೆ. ಉಗ್ರರ ಸುಳಿವು ದೊರೆತಲ್ಲಿ ಕೂಡಲೇ 022-2263 3333 ತಿಳಿಸಬೇಕೆಂದು ಮುಂಬೈ ಭಯೋತ್ಪಾದನಾ ನಿಗ್ರಹ ದಳ ತಿಳಿಸಿದೆ.
ರಾಜ್ಯದಲ್ಲೂ ಕಟ್ಟೆಚ್ಚರ : ಲಷ್ಕರ್ ಇ ತೊಯ್ಬಾ ಸಂಘಟನೆ ಉಗ್ರರು ಮುಂಬೈ ಪ್ರವೇಶದಿಂದ ಮುಂಜಾಗ್ರತಾ ಕ್ರಮಗಳನ್ನು ಕರ್ನಾಟಕದಲ್ಲೂ ತೆಗೆದುಕೊಳ್ಳಲಾಗಿದ್ದು, ಕರಾವಳಿ ಪ್ರದೇಶದಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಪೊಲೀಸ್ ಇಲಾಖೆ ಸೂಚನೆ ನೀಡಿದ್ದಾರೆ. (ಭಯೋತ್ಪಾದನೆ)
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications