ಭೀಕರ ಅಪಘಾತಕ್ಕೆ ಬೆಂಗಳೂರಿನ ಕುಟುಂಬ ಬಲಿ

ಗ್ರಾನೈಟ್ ಸಾಗಿಸುತ್ತಿದ್ದ ಲಾರಿಯೊಂದಕ್ಕೆ ಟೆಂಪೋಟ್ರಾವೆಲರ್(ಕಾಲ್ ಸೆಂಟರ್ ವಾಹನ) ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿದಂತೆ 7 ಮಂದಿ ಸ್ಥಳದಲ್ಲೇ ಮೃತಪಟ್ಟು, ಐವರು ತೀವ್ರವಾಗಿ ಗಾಯಗೊಂಡಿದ್ದಾರೆ. ನಗರದ ಎಚ್ಎಎಲ್ ಸಮೀಪದ ಕೋಡಿಹಳ್ಳಿ ನಿವಾಸಿಗಳಾದ ಜಯರಾಮ ರೆಡ್ಡಿ(48), ಪೃಥ್ವಿ(18), ಸುಗುಣಾ(18), ಶ್ರುತಿ(19), ವಿಜಯ್ ಕುಮಾರ್, ಅರವಿಂದ್ ಮತ್ತು ವಾಹನ ಚಾಲಕ ಪ್ರಕಾಶ್(45) ಮೃತಪಟ್ಟಿರುವ ದುರ್ದೈವಿಗಳು.
ತೀವ್ರವಾಗಿ ಗಾಯಗೊಂಡಿರುವ ಭಾಗ್ಯಲಕ್ಷ್ಮೀ(48) ಅಶೋಕ್ ಹಾಗೂ ಉಳಿದವರನ್ನು ನಗರದ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದ ವೈದ್ಯರು ತಿಳಿಸಿದ್ದಾರೆ.
ದುರ್ದೈವಿಗಳು ತಮಿಳುನಾಡಿನ ವೇಲ್ಮವತ್ತೂರು, ವೆಳಾಂಕಣ್ಣಿ, ಪುದುಚೇರಿ ಸೇರಿದಂತೆ ವಿವಿಧ ದೇವಸ್ಥಾನಗಳ ದರ್ಶನಕ್ಕೆ ತೆರಳಿದ್ದರು, ಪ್ರವಾಸ ಮುಗಿಸಿಕೊಂಡು ನಗರಕ್ಕೆ ಹಿಂದಿರುಗುತ್ತಿದ್ದ ವೇಳೆ ಅವರಿದ್ದ ವಾಹನ ತಮಿಳುನಾಡಿನ ಕಾವೇರಿಪಟ್ಟಂ ಸೇತುವೆಯ ಬಳಿ ಗ್ರಾನೈಟ್ ಸಾಗಿಸುತ್ತಿದ್ದ ಲಾರಿಯೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಈ ಭೀಕರ ದುರಂತ ಸಂಭವಿಸಿದೆ.
ಕಾಲ್ ಸೆಂಟರ್ ಕಾಲಿಂಗ್ : ಟಿಟಿ ವಾಹನ ಚಾಲಕ ಯಶವಂತಪುರ ನಿವಾಸಿ ಪ್ರಕಾಶ್ ಸೋಮವಾರ ಪೂರ್ತಿ ಬಿಡುವಿಲ್ಲದೆ ವಾಹನ ಓಡಿಸಿ, ನಿದ್ದೆಗೆಟ್ಟಿದ್ದನು. ಸೋಮವಾರ ಬೆಳಗ್ಗೆ 8:30ಕ್ಕೆ ಮತ್ತೊಂದು ಟ್ರಿಪ್ ಇರುವ ಹಿನ್ನೆಲೆಯಲ್ಲಿ ಅತಿವೇಗವಾಗಿ ಬೆಂಗಳೂರಿನ ಕಡೆಗೆ ಹೊರಟಿದ್ದನು. ಅಪಘಾತಕ್ಕೀಡಾಗಿದವರು ಎಷ್ಟು ಹೇಳಿದರೂ ಕೇಳದೆ ರಾತ್ರಿಯೇ ವಾಹನ ಚಾಲನೆ ಮಾಡಿದ್ದಾನೆ. ಮೊದಲೇ ನಿದ್ದೆ ಕೆಟ್ಟಿದ್ದ ಹಾಗೂ ಮತ್ತೊಂದು ಟ್ರಿಪ್ ಹೋಗಬೇಕೆಂಬ ಒತ್ತಡದಲ್ಲಿದ್ದ ಚಾಲಕ, ಎದುರಿನಿಂದ ಬರುತ್ತಿದ್ದ ಲಾರಿ ಢಿಕ್ಕಿ ಈ ವೇಳೆ ನಿಯಂತ್ರಣ ತಪ್ಪಿ ಲಾರಿಗೆ ಢಿಕ್ಕಿ ಹೊಡೆದಿದ್ದಾನೆ ಎಂದು ಕೃಷ್ಣಗಿರಿ ಪೊಲೀಸರು ತಿಳಿಸಿದರು. [ಅಪಘಾತ]
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications