ತೆಲಂಗಾಣ, ರಾಯಲಸೀಮೆಗೆ ದಕ್ಕದ ಕೃಷ್ಣಾ

ನೀರಾವರಿ ಯೋಜನೆಗಳಿಗೆ ಹಾನಿ: ನ್ಯಾಯಾಧೀಕರಣದ ತೀರ್ಪಿನಲ್ಲಿ ಸ್ಪಷ್ಟತೆ ಇಲ್ಲ. ಆಂಧ್ರ 1001 ಟಿಎಂಸಿ ನೀರು ಏನೇನು ಸಾಲದು. ವಿವಿಧ ಋತುಗಳಲ್ಲಿ ಜಲಾಶಯದಿಂದ ಎಷ್ಟೆಷ್ಟು ನೀರು ಬಿಡಬೇಕು ಎಂದು ಸೂಚಿಸಲಾಗಿದೆ. ಆದರೆ, ಈಗಾಗಲೇ ಅನೇಕ ನೀರಾವರಿ ಯೋಜನೆಗಳನ್ನು ಆಂಧ್ರ ಸರ್ಕಾರ ಹಮ್ಮಿಕೊಂಡಿದ್ದು, ಎಲ್ಲವೂ ನಾಶವಾಗಲಿದೆ.
ಪ್ರಕಾಶಂ, ವಿಜಯವಾಡ, ರಾಯಲಸೀಮಾ ಹಾಗೂ ತೆಲಂಗಾಣ ಪ್ರಾಂತ್ಯಗಳಿಗೆ ಜೀವನಾಡಿಯಾಗಿರುವ ಕೃಷ್ಣಾ ನೀರನ್ನು ಈ ರೀತಿ ಹಂಚುವುದು ಸರಿಯಲ್ಲ. ಈಗಾಗಲೇ ಚಾಲ್ತಿಯಲ್ಲಿರುವ ಹಾಗೂ ಉದ್ದೇಶಿತ ಭಾರಿ ನೀರಾವರಿ ಯೋಜನೆಗಳಿಗೆ ಸುಮಾರು 50,000 ಕೋಟಿ ರು ಬಂಡವಾಳ ಹೂಡಲಾಗಿದೆ. ಈ ತೀರ್ಪಿನಿಂದ ಯೋಜನೆಗಳು ಹಾಳಾಗುತ್ತದೆ ಎಂದು ಮಾಜಿ ಸಂಸದ ವೈ ಶಿವಾಜಿ ಹೇಳಿದ್ದಾರೆ.
ತೆಲಂಗಾಣ ವಿವಾದ, ಜಗನ್ ಮೋಹನ್ ರೆಡ್ಡಿ ಕಾಂಗ್ರೆಸ್ ಜಟಾಪಟಿ ನಡುವೆ ಕೃಷ್ಣಾ ನದಿ ನೀರನ್ನು ಜನ ಮರೆತ್ತಿದ್ದಾರೆ ಎಂದು ಪಿಆರ್ ಪಿಯ ಹಿರಿಯ ನಾಯಕ ರಾಮಚಂದ್ರ ಪ್ರತಿಕ್ರಿಯಿಸಿದ್ದಾರೆ. ಅಣೆಕಟ್ಟು ಎತ್ತರ ಹೆಚ್ಚಿಸುವುದರಿಂದ ಆಂಧ್ರದ ಹಲವಾರು ಫಲವತ್ತಾದ ಭೂಮಿ ಬರಡಾಗುವುದು ಇದು ಅನ್ಯಾಯ ಎಂದು ಸಿಪಿಐ(ಎಂ) ಮುಖ್ಯಸ್ಥ ಕೆ ನಾರಾಯಣ ಹೇಳಿದ್ದಾರೆ.
ಬಚಾವತ್ ಆಯೋಗದ 1974ರ ನಿರ್ದೇಶನದಲ್ಲಿ ಮಹಾರಾಷ್ಟ್ರಕ್ಕೆ 560 ಟಿಎಂಸಿ, ಕರ್ನಾಟಕಕ್ಕೆ 734 ಟಿಎಂಸಿ ಹಾಗೂ ಅಂಧ್ರಕ್ಕೆ 800 ಟಿಎಂಸಿ ನೀರು 2000 ಇಸವಿ ತನಕ ಲಭ್ಯವಾಗಿತ್ತು. ಈಗ ಬಿ ಸ್ಕೀಮ್ ನ ಪ್ರಕಾರ ಕರ್ನಾಟಕಕ್ಕೆ 117 ಟಿಎಂಸಿ, ಆಂಧ್ರಕ್ಕೆ 190 ಟಿಎಂಸಿ ಹಾಗೂ ಮಹಾರಾಷ್ಟ್ರಕ್ಕೆ 81 ಟಿಎಂಸಿ ಲಭ್ಯವಾಗಲಿದೆ. ಖಾರಿಫ್ ಋತುವಿನಲ್ಲಿ 8ರಿಂದ 9 ಟಿಎಂಸಿ ನೀರನ್ನು ಆಂಧ್ರಕ್ಕೆ ಕರ್ನಾಟಕ ಬಿಡಬೇಕು ಎಂದು ನ್ಯಾಯಾಧೀಕರಣ ಸೂಚಿಸಿದೆ. [ಅಣೆಕಟ್ಟು]
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications