ಇಂದು ಕೃಷ್ಣಾ ನೀರು ಹಂಚಿಕೆ ನ್ಯಾಯಾಧೀಕರಣ ತೀರ್ಪು

ಆಲಮಟ್ಟಿ ಆಣೆಕಟ್ಟು ಎತ್ತರ ಆಗುವುದೋ ಅಥವಾ ಈಗಿರುವಂತೆಯೇ 519.6 ಮೀಟರ್ ಗೆ ಸೀಮಿತವಾಗುವುದೋ ಎಂಬ ಚರ್ಚೆ ಈ ಭಾಗದ ಜನರಲ್ಲಿ ಮನೆ ಮಾಡಿದೆ. ಈ ವಿವಾದಕ್ಕೆ ಸಂಬಂಧಿಸಿದಂತೆ ಇಂದು ತೀರ್ಪಿನಲ್ಲಿ ಸ್ಪಷ್ಟ ಚಿತ್ರಣ ದೊರೆಯಲಿದೆ. ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶ ಬ್ರಿಜೇಶ್ ಮಿಶ್ರಾ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಡಿ ಕೆ ಶೇಟ್, ನ್ಯಾ. ಎಸ್ ಪಿ ಶ್ರೀವಾಸ್ತವ ನೇತೃತ್ವದ ನ್ಯಾಯಾಧೀಕರಣ 2004ರ ಎಪ್ರಿಲ್ 2 ರಿಂದ ಕಾರ್ಯಾರಂಭ ಮಾಡಿದೆ.
ಈ ನ್ಯಾಯಾಧೀಕರಣ ಅವಧಿ ಮುಗಿದರೂ, ವಾದ-ವಿವಾದ ಇನ್ನೂ ಪೂರ್ಣಗೊಂಡಿಲ್ಲ ಎಂಬ ಹಿನ್ನೆಲೆಯಲ್ಲಿ ನಾಲ್ಕು ಬಾರಿ ಇದರ ಅವಧಿಯನ್ನು ಮುಂದೂಡಲಾಗಿದೆ. ಕೇಂದ್ರ ಸರಕಾರವು ಅಂತಿಮ ಗಡುವು ವಿಧಿಸಿರುವುದರಿಂದ ಡಿ.30ರಂದು ಅಂತಿಮ ತೀರ್ಪು ಹೊರಬರಲಿದೆ. ನೀರು ಹಂಚಿಕೆ ಸಂಬಂಧಿಸಿದಂತೆ ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದ ನಡುವೆ1969ರಿಂದ ತಿಕ್ಕಾಟವಿದೆ.












Click it and Unblock the Notifications