ಜಿಪಂ ಫಲಿತಾಂಶ:11 ಕ್ಷೇತ್ರಗಳಲ್ಲಿ 10 ಬಿಜೆಪಿ ಪಾಲು

ಸದ್ಯದ ವರದಿ ಹೀಗಿದೆ: ಬೆಂಗಳೂರು ಜಿಪಂ: 34 ಕ್ಷೇತ್ರಗಳಲ್ಲಿ 3 ಸೀಟುಗಳ ಫಲಿತಾಂಶ ಪ್ರಕಟ. ಕಾಂಗ್ರೆಸ್ 2, ಜೆಡಿಎಸ್ 1 ರಲ್ಲಿ ಗೆಲುವು. ತಾಪ: ಚಾಮರಾಜನಗರ ಜಿಲ್ಲೆಯಲ್ಲಿ 12 ಕ್ಷೇತ್ರದಲ್ಲಿ ಬಿಜೆಪಿ 7, ಕಾಂಗ್ರೆಸ್ 5ರಲ್ಲಿ ಗೆಲುವು. ಬೆಂಗಳೂರು ತಾಪಂ 4 ರಲ್ಲಿ ಬಿಜೆಪಿ 2, ಜೆಡಿಎಸ್ 1, ಎನ್ ಸಿಪಿ 1 ರಲ್ಲಿ ಗೆಲುವು.
ಉತ್ತರ ಕನ್ನಡ ತಾಪಂ 12 ಕ್ಷೇತ್ರದಲ್ಲಿ ಕಾಂಗ್ರೆಸ್ 7ರಲ್ಲಿ ಜಯ.
ಉಡುಪಿ ತಾಪಂ 4 ಕ್ಷೇತ್ರದಲ್ಲಿ ಬಿಜೆಪಿಗೆ 3ರಲ್ಲಿ ಜಯ
ತುಮಕೂರು 6 ಕ್ಷೇತ್ರದಲ್ಲಿ 6 ಕೂಡಾ ಬಿಜೆಪಿಗೆ ಒಲಿದಿದೆ.
ಒಟ್ಟಾರೆ 9.30 ಸಮಯಕ್ಕೆ 11 ಕ್ಷೇತ್ರಗಳ ಫಲಿತಾಂಶದಲ್ಲಿ 10 ಬಿಜೆಪಿ ಪಾಲಾಗಿದೆ.
ಗುಲ್ಬರ್ಗಾ, ಗದಗ ಜಿಪಂ ಬಿಜೆಪಿ ಮುನ್ನಡೆ. ಬೀದರ್ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಮುನ್ನಡೆ. ರಾಯಚೂರು ಯರಗೆರೆ ಜಿಪಂ ಕಾಂಗ್ರೆಸ್ ಮುನ್ನಡೆ. ಮೈಸೂರು ಜಿಪಂ ಇಣಕಲ್ ಕಾಂಗ್ರೆಸ್ ಮುನ್ನಡೆ. ಉಡುಪಿ ಜಿಪಂ 5 ಕಡೆ ಬಿಜೆಪಿ ಮುನ್ನಡೆ. ಕೊಡಗು ಜಿಪಂ ಬಿಜೆಪಿ 7, ಕಾಂಗ್ರೆಸ್ 6, ಜೆಡಿಎಸ್ 1 ಕಡೆ ಮುನ್ನಡೆ.
ಕಣದಲ್ಲಿರುವ 16,634 ಅಭ್ಯರ್ಥಿಗಳ ಭವಿಷ್ಯವನ್ನು ಅಷ್ಟೇ ಅಲ್ಲದೆ, ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ನ ಮುಂದಿನ ಹೋರಾಟದ ದಿಕ್ಸೂಚಿಯಾಗಲಿದೆ ಎಂದೇ ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.
ಬಹುತೇಕ ಎಲ್ಲ ಕಡೆ ಇಂದು ಬೆಳಗ್ಗೆ 8ಕ್ಕೆ ಮತ ಎಣಿಕೆ ಆರಂಭವಾಗಿದೆ. ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಬಳಸಿರುವುದರಿಂದ ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ. 171 ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆಗಳನ್ನು ಮಾಡಲಾಗಿದ್ದು, ಆಯೋಗದ ಅಧಿಕೃತ ವೆಬ್ಸೈಟ್ನಲ್ಲೂ ಫಲಿತಾಂಶವನ್ನು ಪ್ರಕಟಿಸಲು ವ್ಯವಸ್ಥೆ ಮಾಡಲಾಗಿದೆ.
30 ಜಿಲ್ಲಾ ಪಂಚಾಯಿತಿಗಳ 1,012 ಕ್ಷೇತ್ರಗಳು ಮತ್ತು 176 ತಾಲ್ಲೂಕು ಪಂಚಾಯಿತಿಗಳ 3,650 ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಅಂದರೆ ಡಿ.26 ಮತ್ತು 31, ಜನವರಿ ಒಂದರಂದು ಚುನಾವಣೆ ನಡೆದಿದ್ದು, ಒಂದು ಜಿಲ್ಲಾ ಪಂಚಾಯಿತಿ ಕ್ಷೇತ್ರ ಮತ್ತು ಎಂಟು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳಲ್ಲಿ ಅವಿರೋಧ ಆಯ್ಕೆ ನಡೆದಿದೆ.
ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿಯ ತಿಪ್ಪಾಪುರ ತಾಲ್ಲೂಕು ಪಂಚಾಯಿತಿ ಕ್ಷೇತ್ರಕ್ಕೆ ಇದೇ 16ರಂದು ಚುನಾವಣೆ ನಡೆಯಲಿದ್ದು, 19ಕ್ಕೆ ಮತ ಎಣಿಕೆ ನಡೆಯಲಿದೆ. [ಜಿಲ್ಲಾ ಪಂಚಾಯತಿ ಚುನಾವಣೆ]
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications