ಅನಂತ್ ಗೆ ಸಿಎಂ ಹುದ್ದೆ ತಪ್ಪಿಸಿದ್ದೇ ಯಡ್ಡಿ : ಬೇಳೂರು

ಬುಧವಾರ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಎರಡು ವರ್ಷಗಳ ಹಿಂದೆಯೇ ಅನಂತ್ ಕುಮಾರ್ಗೆ ನಿರಾಯಸವಾಗಿ ಮುಖ್ಯಮಂತ್ರಿ ಹುದ್ದೆ ಒಲಿದು ಬಂದಿತ್ತು. ಆದರೆ ಅವರಿಗೆ ಆ ಹುದ್ದೆ ಸಿಗದಂತೆ ಯಡಿಯೂರಪ್ಪ ಕುತಂತ್ರ ನಡೆಸಿದರು. ಹಲವು ವರ್ಷಗಳಿಂದ ಬ್ರಾಹ್ಮಣ ಸಮಾಜ ಬಿಜೆಪಿಯನ್ನು ಬೆಂಬಲಿಸಿಕೊಂಡು ಬಂದಿದೆ. ಆದರೆ ಅದೇ ಸಮುದಾಯಕ್ಕೆ ಸೇರಿದ ಅನಂತ್ ಕುಮಾರ್ರವರಿಗೆ ಸಿಎಂ ಹುದ್ದೆ ಸಿಗದಂತೆ ಮಾಡುವ ಮೂಲಕ, ಬ್ರಾಹ್ಮಣ ಸಮುದಾಯಕ್ಕೆ ಯಡಿಯೂರಪ್ಪ ದ್ರೋಹ ಎಸಗಿದ್ದಾರೆ. ಈ ಮೂಲಕ ತಮ್ಮ ನಿಲುವು ಏನೆಂಬುವುದನ್ನು ಸಾಬೀತು ಪಡಿಸಿದ್ದಾರೆಂದು ಆರೋಪಗಳ ಸುರಿಮಳೆಗೈದರು.
ಯಡಿಯೂರಪ್ಪರವರು ಜಿ.ಪಂ., ತಾ.ಪಂ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋತ ಗ್ರಾಮಗಳಿಗೆ ಕಾಲಿಡುವುದಿಲ್ಲವೆಂದು ಹೇಳಿದ್ದಾರೆ. ಇವರ ಆಡಳಿತ ವೈಖರಿ ಕಂಡಿರುವ ಮತದಾರರು ಇನ್ನು ಮುಂದೆ ಜಿಲ್ಲೆಗೇ ಕಾಲಿಡಬೇಡಿ ಎಂದು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ ಎಂದು ಲೇವಡಿ ಮಾಡಿದರು.
ಯಡಿಯೂರಪ್ಪ ಅವರು ರಾಜ್ಯ ಕಂಡ ಅತೀ ಭ್ರಷ್ಟ ಮುಖ್ಯಮಂತ್ರಿ. ಎಲ್ಲ ರಂಗಗಳಲ್ಲಿಯೂ ಇವರು ವಿಫಲರಾಗಿದ್ದು, ಸ್ವಜನ ಪಕ್ಷಪಾತ, ಹಗರಣಗಳಲ್ಲಿ ಮುಳಗಿದ್ದಾರೆ. ಈಗಾಗಲೇ ಕರ್ನಾಟಕದ ಆಸ್ತಿಯನ್ನು ಗುಳುಂ ಮಾಡಿದ್ದಾರೆ. ದಿಲ್ಲಿಯಲ್ಲಿಯೂ ಆಸ್ತಿ ಗುಳುಂ ಮಾಡಲು ರಾಷ್ಟ್ರ ರಾಜಕಾರಣದತ್ತ ಮುಖ ಮಾಡಿದ್ದಾರೆ ಎಂದು ಗೋಪಾಲಕೃಷ್ಣ ವ್ಯಂಗ್ಯವಾಡಿದರು.
ಜಿ.ಪಂ., ತಾ.ಪಂ. ಚುನಾವಣೆಯಲ್ಲಿ ಸಾಗರ ಕ್ಷೇತ್ರದಲ್ಲಿ ಬಿಜೆಪಿ ಧೂಳೀಪಟವಾಗಿದೆ. ಬಿಜೆಪಿಯವರು ಹಂಚಿದ ಹಣ-ಹೆಂಡಕ್ಕೆ ಮತದಾರರು ಯಾವುದೇ ಬೆಲೆ ನೀಡಿಲ್ಲ. ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪ್ರಭಾವ ಹಾಗೂ ತಮ್ಮ ಬೆಂಬಲದಿಂದ ಉತ್ತಮ ಸಾಧನೆಯನ್ನು ಕಾಂಗ್ರೆಸ್ ಪಕ್ಷ ಮಾಡಿದೆ ಎಂದರು.
ಜಯ ನಮ್ಮ ಪರ : ಬಿಜೆಪಿ ಪಕ್ಷದ 11 ಶಾಸಕರ ಅನರ್ಹತೆ ಪ್ರಕರಣದ ವಿಚಾರಣೆ ಗುರುವಾರ ಸುಪ್ರೀಂ ಕೋರ್ಟ್ನಲ್ಲಿ ನಡೆಯಲಿದೆ. ಜಯ ತಮ್ಮ ಪರವಾಗಿರಲಿದೆ ಎಂದು ಅನರ್ಹ ಶಾಸಕ ಬೇಳೂರು ಗೋಪಾಕೃಷ್ಣರವರು ವಿಶ್ವಾಸ ವ್ಯಕ್ತಪಡಿಸಿದರು. [ಪಂಚಾಯಿತಿ ಚುನಾವಣೆ]
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications