Get Updates
Get notified of breaking news, exclusive insights, and must-see stories!

ಶಿಕಾರಿಪುರದ ಫೈನಾನ್ಸಿಯರ್ ನಿಗೂಢ ಸಾವು

Shikaripura Financier Murder
ಶಿವಮೊಗ್ಗ, ಜ.6: ಜಿಲ್ಲೆಯ ಶಿಕಾರಿಪುರ ಪಟ್ಟಣದ ಫೈನಾನ್ಸಿಯರ್‌ರೊಬ್ಬರು ನಿಗೂಢವಾಗಿ ಸಾವನ್ನಪ್ಪಿದ ಘಟನೆ ಬುಧವಾರ ತಡರಾತ್ರಿ ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯ ಚಿನ್ನಕಟ್ಟೆ-ಜೋಗ ಗ್ರಾಮದ ಸಮೀಪ ನಡೆದಿದೆ. ಮೃತರನ್ನು ಶಿಕಾರಿಪುರ ಪಟ್ಟಣದ ಸುಬೇದಾರ ಬೀದಿ ನಿವಾಸಿ ಶ್ರೀನಿವಾಸ್(30) ಎಂದು ಗುರುತಿಸಲಾಗಿದೆ. ಇವರು ಬಡ್ಡಿ ವ್ಯವಹಾರದ ಜೊತೆಗೆ, ಬೀಡಿ ಅಂಗಡಿಯೊಂದನ್ನು ಇಟ್ಟುಕೊಂಡು ವ್ಯವಹಾರ ನಡೆಸುತ್ತಿದ್ದರು.

ನಿನ್ನೆ ರಾತ್ರಿ ಅಂಗಡಿ ವ್ಯವಹಾರ ಮುಗಿಸಿಕೊಂಡು ವ್ಯಕ್ತಿಯೊಬ್ಬರೊಂದಿಗೆ ತಮ್ಮ ಬೈಕ್‌ನಲ್ಲಿ ಹೊರಟಿದ್ದಾರೆ. ಆದರೆ ಅವರು ಚಿನ್ನಕಟ್ಟೆ-ಜೋಗ ಸಮೀಪದ ರಸ್ತೆಯಲ್ಲಿ ಬೈಕ್ ಸಮೇತ ಬಿದ್ದಿದ್ದರು. ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಅಂಬ್ಯುಲೈನ್ಸ್ ಚಾಲಕರೊಬ್ಬರು ಅವರನ್ನು ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆದರೆ ತಲೆಗೆ ತೀವ್ರವಾಗಿ ಹೊಡೆತ ಬಿದ್ದ ಕಾರಣ, ತೀವ್ರ ರಕ್ತಸ್ರಾವದಿಂದ ಮಾರ್ಗಮಧ್ಯದಲ್ಲಿಯೇ ಶ್ರೀನಿವಾಸ್ ಸಾವನ್ನಪ್ಪಿದ್ದಾರೆ. ಅವರ ಬಳಿಯಿದ್ದ ಮೊಬೈಲ್ ಮೂಲಕ ಅಂಬ್ಯುಲೈನ್ಸ್ ಚಾಲಕ ಅವರ ಪತ್ನಿಗೆ ಮಾಹಿತಿ ನೀಡಿದ್ದಾರೆ ಎಂದು ಸಂಬಂಧಿಗಳು ಹೇಳಿದ್ದಾರೆ.

ಮೇಲ್ನೋಟಕ್ಕೆ ಇದು ರಕ್ತ ಅಪಘಾತದಿಂದ ಸಂಭವಿಸಿದ ಘಟನೆಯಲ್ಲವೆಂದು ಸಂಬಂಧಿಗಳು ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಇವರ ಸಾವಿನ ಸುತ್ತ ಹಲವು ಅನುಮಾನಗಳ ಹುತ್ತ ನಿರ್ಮಾಣವಾಗುತ್ತಿದ್ದು, ಪೊಲೀಸರ ತನಿಖೆಯಿಂದ ಸತ್ಯ ಹೊರಬರಬೇಕಾಗಿದೆ. [ಕೊಲೆ]

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+