ಎರಡೇ ನಿಮಿಷದಲ್ಲಿ ಅಧಿವೇಶನ ಮೊಟಕು!

ಎರಡೇ ನಿಮಿಷದಲ್ಲಿ ರಾಜ್ಯಪಾಲರು ಭಾಷಣವನ್ನು ಕಾಟಾಚಾರಕ್ಕೆ ಓದಿದಂತೆ ಮಾಡಿ ಎಷ್ಟು ವೇಗದಲ್ಲಿ ಬಂದರೋ ಅಷ್ಟೇ ವೇಗದಲ್ಲಿ ವಿಧಾನಸಭೆಯಿಂದ ರಾಜಭವನಕ್ಕೆ ತೆರಳಿದರು. ನಿಗದಿಪಡಿಸಿದ 12 ಗಂಟೆಗೆ ರಾಜ್ಯಪಾಲರು ವಿಧಾನಸೌಧಕ್ಕೆ ಆಗಮಿಸಿದರು. ಆದರೆ, ನಾನಾ ಹಗರಣಗಳಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜೀನಾಮೆ ನೀಡುವವರೆಗೆ ಕಲಾಪ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಪ್ರತಿಪಕ್ಷದ ಶಾಸಕರು ರಾಜ್ಯಪಾಲರಿಗೆ ಭಾಷಣ ಮಾಡಲು ಅವಕಾಶವನ್ನೇ ನೀಡಲಿಲ್ಲ.
ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು ಎಂದು ಹೇಳಿ ಸರಕಾರ ಸಿದ್ಧಪಡಿಸಿಕೊಂಡಿದ್ದ 28 ಪುಟಗಳ ಭಾಷಣವನ್ನು 'ಮೈ ಗೌರ್ನಮೆಂಟ್' ಎಂದು ಆರಂಭ ಮಾಡುತ್ತಿದ್ದಂತೆಯೇ ಪ್ರತಿಪಕ್ಷಗಳು ರಾಜ್ಯಪಾಲರೇ ಭಾಷಣ ಮಾಡಬೇಡಿ ಎಂದು ಕೂಗಾಟ ಆರಂಭಿಸಿದರು. ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮತ್ತು ಜೆಡಿಎಸ್ ನಾಯಕ ಎಚ್ ಡಿ ರೇವಣ್ಣ ಅವರ ನೇತೃತ್ವದಲ್ಲಿ ವಿರೋಧ ಪಕ್ಷದ ನಾಯಕರು ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಲು ಪ್ರಾರಂಭಿಸಿದರು. ಬಂಧುಮಿತ್ರರಿಗೆಲ್ಲ ನಿವೇಶನ ಹಂಚಿದ ಆರೋಪ ಹೊತ್ತಿರುವ ಯಡಿಯೂರಪ್ಪ ರಾಜೀನಾಮೆ ನೀಡಲೇಬೇಕು ಎಂದು ಪಟ್ಟುಹಿಡಿದರು. ಅವರು ರಾಜೀನಾಮೆ ನೀಡುವರೆಗೆ ಹತ್ತು ದಿನವೂ ಕಲಾಪ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ಹೇಳಿದ್ದಾರೆ.
ಮೊದಲು ಶಂಕರಮೂರ್ತಿ ಅವರ ನೆರವು ಬಯಸಿದ ರಾಜ್ಯಪಾಲರು ಅನಂತರ ಸ್ಪೀಕರ್ ಸಹಕಾರ ಕೋರಿದರು. ಇಬ್ಬರೂ ಮುಖಂಡರು ಗದ್ದಲದಿಂದಾಗಿ ಭಾಷಣವನ್ನು ಸದನದಲ್ಲಿ ಮಂಡನೆ ಮಾಡಲಾಗಿದೆ ಎಂಬ ಸಲಹೆಯನ್ನು ಕೊಟ್ಟರು. ಇದಾದ ನಂತರ ರಾಜ್ಯಪಾಲರು ಭಾಷಣವನ್ನು ಮಂಡಿಸಲಾಗಿದೆ ಎಂದು ಹೇಳಿದರು. ಇದು ಮುಗಿದ ತಕ್ಷಣವೇ ರಾಷ್ಟ್ರಗೀತೆ ಮೊಳಗಿತು. ಇದೆಲ್ಲವೂ ಕೇವಲ ಎರಡೇ ನಿಮಿಷದಲ್ಲಿ ಮುಗಿದು ಹೋಯಿತು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications