ಮೇಲುಕೋಟೆ ಅಭಿವೃದ್ಧಿಗೆ 5 ಕೋಟಿ : ಯಡಿಯೂರಪ್ಪ

ಮೇಲುಕೋಟೆ ದೇವಸ್ಥಾನಕ್ಕೆ ಭೇಟಿ ನೀಡಿ, ಚೆಲುವ ನಾರಾಯಣಸ್ವಾಮಿ ದರ್ಶನ ಪಡೆದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಮೇಲುಕೋಟೆ ಕ್ಷೇತ್ರದ ಅಭಿವೃದ್ಧಿಗೆ ಕಳೆದ ಬಜೆಟ್ ನಲ್ಲಿ 2 ಕೋಟಿ ರುಪಾಯಿಗಳನ್ನು ನೀಡಲಾಗಿದೆ. ಇನ್ನೂ 10 ಕೋಟಿ ರುಪಾಯಿಗಳ ವೆಚ್ಚದಲ್ಲಿ ಈ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ಮುಂದಿನ ಬಜೆಟ್ ನಲ್ಲಿ 5 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಮೇಲುಕೋಟೆಯಲ್ಲಿರುವ ದೇವಾಲಯಗಳು ಹಾಗೂ ಸ್ಮಾರಕಗಳ ಸಂರಕ್ಷಣೆಗೆ ಯೋಜನೆ ರೂಪಿಸಿ ಅಭಿವೃದ್ಧಿಪಡಿಸಬೇಕು. ಪ್ರವಾಸಿಗಳ ಅನುಕೂಲಕ್ಕಾಗಿ ಯಾತ್ರಿ ನಿವಾಸ ನಿರ್ಮಾಣ, ಅನ್ನ ದಾಸೋಹ ಛತ್ರ ಮುಂತಾದವುಗಳ ನಿರ್ಮಾಣಕ್ಕೆ ಕ್ರಮ ವಹಿಸಬೇಕು ಎಂದು ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು.(ದೇಗುಲ)












Click it and Unblock the Notifications