ಸಿಇಸಿ ಟೀಕೆ ನ್ಯಾಯಾಂಗಕ್ಕೆ ಮಾಡಿದ ನಿಂದನೆ

ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಸಿಇಸಿಯನ್ನು ರಚಿಸಿದೆ. ಸಿಇಸಿಗೆ ನ್ಯಾಯಿಕ ಸಮಾನ ಅಧಿಕಾರ ಇದೆ. ಜಿ. ಜನಾರ್ದನ ರೆಡ್ಡಿ ಅವರು ಸಿಇಸಿ ಮತ್ತು ಸಿಇಸಿ ತಂಡದ ಸದಸ್ಯರ ಕುರಿತು ಮಾತನಾಡಿದ್ದು ತಪ್ಪು ಎಂದು ಹೇಳಿದರು.
ಜನಾರ್ದನ ರೆಡ್ಡಿ ಅವರೇ ಹೇಳಿದಂತೆ, ವೈಎಸ್ಆರ್ ನಿಧನಾನಂತರವೇ ಅವರ ಗಣಿ ಚಟುವಟಿಕೆಗಳ ಅಕ್ರಮಗಳು ಬಯಲಾಗುತ್ತಿವೆ. ವೈಎಸ್ಆರ್ ಮತ್ತು ಜನಾರ್ದನ ರೆಡ್ಡಿ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಅಧಿಕಾರಿಗಳ ಮೇಲೆ ಒತ್ತಡ ಹೇರಿ ತಮ್ಮ ಇಷ್ಟದಂತೆ ಗಣಿ ಗುತ್ತಿಗೆಗಳನ್ನು, ಗಣಿ ನಕ್ಷೆಗಳನ್ನು ಬದಲಾವಣೆ ಮಾಡಿದ್ದಾರೆ ಎಂದು ಹೇಳಿದರು.
ವೈಎಸ್ಆರ್ ಅವರು ಜೀವಂತವಾಗಿ ಇರುವವರೆಗೂ ಕೂಡ ಓಎಂಸಿ ಮತ್ತು ಅದರ ಅಂಗಸಂಸ್ಥೆಗಳ ಅಕ್ರಮ ಚಟುವಟಿಕೆಗಳು ಅಧಿಕಾರದ ಆಶ್ರಯದಲ್ಲಿ ಮುಚ್ಚಿಹೋಗಿದ್ದವು. ಈ ವಿಷಯನ್ನು ಸಚಿವ ಜನಾರ್ದನ ರೆಡ್ಡಿ ಅವರೇ ಒಪ್ಪಿಕೊಂಡಂತೆ ಆಗಿದೆ. ಕಾರಣ ಅವರು ಸಚಿವ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಹಾಸ್ಯಾಸ್ಪದ : ಕಂದಾಯ ಸಚಿವ ಜಿ. ಕರುಣಾಕರ ರೆಡ್ಡಿ ಅವರು ಓಎಂಸಿಗೂ ತಮಗೂ ಸಂಬಂಧವೇ ಇಲ್ಲ ಎಂದು ಹೇಳಿರುವುದು ಹಾಸ್ಯಾಸ್ಪದ. ಓಎಂಸಿ ಮತ್ತು ಇತರೆ ವ್ಯವಹಾರಗಳಲ್ಲಿ ಕೌಟುಂಬಿಕ ಪಾಲುದಾರ ಸದಸ್ಯ ಮತ್ತು ನಿರ್ದೇಶಕರಾಗಿರುವ ಜಿ. ಕರುಣಾಕರ ರೆಡ್ಡಿ ಅವರು ಅಧಿಕಾರ ಹೋಗುತ್ತದೆ ಎನ್ನುವ ಭಯದಿಂದ ಈ ರೀತಿಯ ಹೇಳಿಕೆ ನೀಡುತ್ತಿರುವುದು ಸತ್ಯಾಂಶವನ್ನು ತಿಳಿಯಲು ನೆರವಾಗುತ್ತದೆ ಎಂದರು.
ಅಕ್ರಮ - ಅನಧಿಕೃತ : 2000ರ ಪೂರ್ವದಲ್ಲಿ ರಾಜ್ಯದಲ್ಲಿ ಅಥವಾ ಜಿಲ್ಲೆಯಲ್ಲಿ ಅಕ್ರಮ - ಅನಧಿಕೃತ ಗಣಿಗಾರಿಕೆಯೇ ಇರಲಿಲ್ಲ. ಸಚಿವ ಜನಾರ್ದನ ರೆಡ್ಡಿ ಮತ್ತು ಅವರ ಹಿಂಬಾಲಕರಿಂದಲೇ ಓಬಳಾಪುರಂ, ಸಂಡೂರು, ಬಳ್ಳಾರಿ ಮತ್ತು ಹೊಸಪೇಟೆಗಳಲ್ಲಿ ವ್ಯಾಪಕ ಪ್ರಮಾಣದಲ್ಲಿ ಅಕ್ರಮ - ಅನಧಿಕೃತ ಗಣಿಗಾರಿಕೆ ಪ್ರಾರಂಭ ಆಗಿದೆ. ಇದು ನೈಜ ಗಣಿ ಉದ್ಯಮಿಗಳಿಗೆ ಅವಮಾನಿಸುತ್ತಿದೆ ಎಂದು ಟಪಾಲ್ ಗಣೇಶ್ ಹೇಳಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications