ಜೆಡಿಎಸ್ ಗೆ ಯೋಗೀಶ್ವರ್ ಅವಶ್ಯಕತೆ ಇಲ್ಲ

ಠುಸ್ ಆಗುವ ಬಲೂನ್ ಬಿಜೆಪಿ : 8 ವಿಧಾನಸಭಾ ಸದಸ್ಯರನ್ನ ರಾಜೀನಾಮೆ ಕೊಡಿಸಿದ ಬಿಜೆಪಿ ನಾಯಕರು ಆಪರೇಷನ್ ಕಮಲವೆಂಬ ಹೆಸರು ನೀಡಿದ್ದಾರೆ. ನಂತರ ಗ್ರಾಮಪಂಚಾಯಿತಿ ತಾಲ್ಲೂಕ್ ಪಂಚಾಯ್ತಿ ಜಿಲ್ಲಾ ಪಂಚಾಯ್ತಿ ಮಟ್ಟದಲ್ಲೂ ಕೂಡ ಆಪರೇಷನ್ ಕಮಲ ಆರಂಭಿಸಿದ್ದಾರೆ.
ಬಿಜೆಪಿ ಸರ್ಕಾರ ಆರಂಭಿಸಿರುವ ಆಪರೇಷನ್ ಕಮಲ ಬಹಳ ದಿನ ಮುಂದುವರೆಯಲು ಸಾಧ್ಯವಾಗುವುದಿಲ್ಲ. ಅವೆಲ್ಲಾ ತಾತ್ಕಾಲಿಕವಾದಂತಹ ಸಂತೋಷ ಪಡುತ್ತಿದ್ದಾರೆ. ಗಾಳಿ ತುಂಬಿದ ಬಲೂನ್ನಂತಿರುವ ಬಿಜೆಪಿ ಸರ್ಕಾರ ಯಾವಾಗ ಬೇಕಾದ್ರು ಠುಸ್ ಆಗಬಹುದು ಎಂದು ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಸರ್ಕಾರ ಶೀಘ್ರ ಪತನದ ಬಗ್ಗೆ ಮಾರ್ಮಿಕವಾಗಿ ನುಡಿದರು.
ಚರ್ಚೆ : ರಾಮನಗರ ಜಿಲ್ಲೆಯ ಜಿಲ್ಲಾ ಮತ್ತು ತಾಲ್ಲೂಕ್ ಪಂಚಾಯ್ತಿ ಚುನಾವಣೆ ಸೋಲು ಗೆಲುವಿನ ಬಗ್ಗೆ ನಾಲ್ಕು ಕ್ಷೇತ್ರಗಳ ಮುಖಂಡರಗಳೊಂದಿಗೆ ಸೇರಿ ಚರ್ಚೆ ನಡೆಸಲಾಗುವುದು ಎಂದು ಎಚ್ಡಿಕೆ ಹೇಳಿದರು.
ಬಿಡದಿ ಜಿಲ್ಲಾ ಪಂಚಾಯ್ತಿ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರ ಮತ್ತು ಮುಖಂಡರ ಭಿನ್ನಾಭಿಪ್ರಾಯ ಮುನಿಸಿನಿಂದ ಪಕ್ಷಕ್ಕೆ ಸೋಲಾಗಿದೆ. ಅದೇ ರೀತಿ ಕೂಟಗಲ್ ಜಿಲ್ಲಾ ಪಂಚಾಯ್ತಿ ಕ್ಷೇತ್ರದಲ್ಲಿ ರೈತರ ಭೂಮಿಯನ್ನ ಕೊಳ್ಳೆ ಹೊಡೆದಿದ್ದ ಸರ್ಕಾರಿ ನೌಕರನೊಬ್ಬ ಅಕ್ರಮವಾಗಿ ಗಳಿಸಿದ ಹಣವನ್ನ ಚೆಲ್ಲಿ ಮತದಾರರನ್ನ ಸೆಳೆದು ತನ್ನ ಪತ್ನಿಯನ್ನ ಗೆಲ್ಲಿಸಿಕೊಂಡಿದ್ದಾರೆ.
ಎಚ್ಡಿಕೆ ಬೇಸರ: ರಾಮನಗರ ಜನರ ಮನೆಯ ಮಗನಂತಿರುವ ನನ್ನನ್ನ ಎಲ್ಲಾ ಸಂಧರ್ಭಗಳಲ್ಲಿಯೂ ಬೆಳೆಸಿ ಅತ್ಯುನ್ನತ ಮಟ್ಟಕ್ಕೆ ಬೆಳೆಸಿದ್ದಾರೆ. ನನ್ನನ್ನ ಬೆಳಿಸಿ ಪೋಷಿಸಿದ ತಂದೆ ತಾಯಂದಿರೇ ಕೂಟಗಲ್ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯನ್ನ ಸೋಲಿಸಿರುವುದಕ್ಕೆ ಬೇಸರವಾಗುತ್ತಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.
ಪಕ್ಷದ ಏಳಿಗೆ ಶ್ರೇಯಸ್ಸಿಗಾಗಿ ಅರ್ಪಣಾ ಮನೋಭಾವದಿಂದ ಶ್ರಮಿಸಿದ ಮುಖಂಡರಿಗೆ ಕಾರ್ಯಕರ್ತರಿಗೆ ಇದೇ ಸಂಧರ್ಭದಲ್ಲಿ ಹೆಚ್.ಡಿ.ಕೆ ಕೃತಜ್ಞತೆ ಅರ್ಪಿಸಿದರು. ನೂತನ ಜಿಲ್ಲಾ ಮತ್ತು ತಾಲ್ಲೂಕ್ ಪಂಚಾಯ್ತಿ ಸದಸ್ಯರೆಲ್ಲರೂ ಒಗ್ಗೂಡಿ ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆ ಮಾಡಿ ಸಮರ್ಪಣಾ ಮನೋಭಾವದಿಂದ ಜನತೆ ನೀಡಿರುವ ಅಧಿಕಾರವನ್ನ ಸದ್ಭಳಕೆ ಮಾಡಿಕೊಳ್ಳಬೇಕೆಂದು ಎಚ್ ಡಿ.ಕುಮಾರಸ್ವಾಮಿಯವರು ಕರೆ ನೀಡಿದರು. [ಸಿಪಿ ಯೋಗೀಶ್ವರ್]
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications