ಗಣಿ ಅಕ್ರಮಕ್ಕೆ ಸಿಎಂ ಕುಮ್ಮಕ್ಕು: ಕುಮಾರಸ್ವಾಮಿ

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವುದೇ ಸಚಿವರುಗಳು ಗಣಿ ಅಕ್ರಮದಲ್ಲಿ ತೊಡಗಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯಪಾಲರಿಗೆ ಸುಳ್ಳು ವರದಿ ನೀಡಿದ್ದಾರೆ. ಆ ಮೂಲಕ ರಾಜ್ಯದ ಜನತೆಗೆ ಯಡಿಯೂರಪ್ಪ ಸುಳ್ಳು ಹೇಳಿದ್ದಾರೆ ಎಂದು ಟೀಕಿಸಿದರು.
ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ಜೊತೆಗೂಡಿ ವಿಧಾನ ಮಂಡಲದಲ್ಲಿ ಹೋರಾಟ ರೂಪಿಸಲಾಗುವುದು. ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಸಚಿವ ಜನಾರ್ದನ ರೆಡ್ಡಿ ಅವರ ರಾಜೀನಾಮೆ ಪಡೆದುಕೊಳ್ಳುವ ಧೈರ್ಯವನ್ನು ಯಡಿಯೂರಪ್ಪ ಪ್ರದರ್ಶಿಸಬೇಕು ಎಂದು ಕುಮಾರಸ್ವಾಮಿ ಸೂಚಿಸಿದರು.
ಇಂದು ನಡೆಯಲಿರುವ ಜಂಟಿ ಅಧಿವೇಶನದಲ್ಲಿ ಜನಾರ್ದನರೆಡ್ಡಿ ರಾಜೀನಾಮೆ, ಮುಖ್ಯಮಂತ್ರಿಗಳ ಮೇಲಿರುವ ಭೂಹಗರಣ ಮತ್ತು ಸ್ವೀಕರ್ ಬೋಪಯ್ಯ ಅವರ ವಿರುದ್ಧ ನಿಲುವಳಿ ಮಂಡಿಸುವ ಸಾಧ್ಯತೆ ಇದೆ. ಗಣಿಗಾರಿಕೆಗೆ ಸಂಬಂಧಿಸಿದಂತೆ ಸಿಇಸಿ ಸುಪ್ರೀಕೋರ್ಟ್ ಗೆ ನೀಡಿರುವ ವರದಿ ರಾಜ್ಯ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿರುವುದಂತೂ ನಿಜ. ಪ್ರತಿಪಕ್ಷಗಳು ರೆಡ್ಡಿ ರಾಜೀನಾಮೆಗೆ ಪಟ್ಟು ಹಿಡಿಯುವುದಾಗಿ ಈಗಾಗಲೇ ಘೋಷಣೆ ಮಾಡಿವೆ.












Click it and Unblock the Notifications