ಅಜ್ಮೇರ್ ಸ್ಫೋಟದಲ್ಲಿ ಹಿಂದು ಮುಸ್ಲಿಂ ಕೈವಾಡ

ಸ್ಫೋಟಕ್ಕೆ ದರ್ಗಾವನ್ನೇ ಏಕೆ ಆಯ್ಕೆ ಮಾಡಿಕೊಂಡಿವೆ ಎಂಬ ಸಂಗತಿಯನ್ನು ವಿವರಿಸಿದ ಅಸೀಮಾನಂದ ಸ್ವಾಮಿ, ಅಜ್ಮೇರ್ ಷರೀಫ್ ದರ್ಗಾಕ್ಕೆ ಹಿಂದೂಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಇದನ್ನು ತಡೆಯಬೇಕು ಎಂಬ ಏಕೈಕ ಕಾರಣದಿಂದ ಬಾಂಬ್ ಸ್ಫೋಟಿಸಲು ಸಂಚು ರೂಪಿಸಲಾಯಿತು ಎಂದು ಹೇಳಿದ್ದಾರೆ.
42 ಪುಟಗಳ ತಪ್ಪೊಪ್ಪಿಗೆ ವಿವರದಲ್ಲಿ ಅಸೀಮಾನಂದ ಸ್ವಾಮಿ, ಸ್ಫೋಟದಲ್ಲಿ ಪಾಲ್ಗೊಂಡವರ ಹೆಸರುಗಳನ್ನು ಬಹಿರಂಗಪಡಿಸಿದ್ದಾರೆ. ಆರ್ಎಸ್ಎಸ್ ಪ್ರಮುಖ ಕಾರ್ಯಕರ್ತ ಇಂದ್ರೇಶ್ ಕುಮಾರ್ ಅವರು ಅಜ್ಮೇರ್ ದರ್ಗಾ, ಮಾಲೇಗಾಂವ್ ಸ್ಫೋಟ, ಹೈದರಾಬಾದ್ ನ ಮೆಕ್ಕಾ ಮಸೀದಿ ಸ್ಫೋಟ ಹಾಗೂ ಸಮ್ ಜೋತಾ ರೈಲು ಸ್ಫೋಟದಲ್ಲಿ ಕೈವಾಡವಿದೆ. ಜೊತೆಗೆ ಆರ್ಎಸ್ಎಸ್ ಪ್ರಚಾರಕ ಸುನೀಲ್ ಜೋಶಿ, ಸಾಧ್ವಿ ಪ್ರಗ್ಯಾಸಿಂಗ್, ಸಂದೀಪ್ ಡಾಂಗೆ, ರಾಮಜೀ ಕಾಲಸಂಗ್ರ ಕೂಡಾ ಸ್ಫೋಟದಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ವಿವರಿಸಿದ್ದಾರೆ.
ಸಂಘದಿಂದ ಉಗ್ರರ ಅಮಾನತು : ಭಯೋತ್ಪಾದನೆಯಲ್ಲಿ ತೊಡಗಿರುವ ಸಂಘದ ತೀವ್ರಗಾಮಿಗಳಿಗೆ ಸಂಘ ಬಿಟ್ಟು ಹೊರನಡೆಯುವಂತೆ ಈಗಾಗಲೇ ಸೂಚಿಸಲಾಗಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಸ್ಪಷ್ಟಪಡಿಸಿದ್ದಾರೆ. ಭಯೋತ್ಪಾದನೆ ಆರೋಪ ಹೊತ್ತುಕೊಂಡು ಸಂಘದಲ್ಲಿ ಕೆಲಸ ಮಾಡಲು ಅವಕಾಶವಿಲ್ಲ. ತೀವ್ರಗಾಮಿಗಳಿಗೆ ಸಂಘ ಬಿಟ್ಟು ಹೋಗುವಂತೆ ಸೂಚಿಸಿ ಬಹಳ ದಿನಗಳೆ ಆಗಿವೆ ಎಂದು ಅವರು ಹೇಳಿದರು. 2007ರಲ್ಲಿ ನಡೆದ ಅಜ್ಮೇರ್ ಸ್ಫೋಟಕ್ಕೆ ಸಂಬಂಧಿಸಿದಂತೆ ಅಸೀಮಾನಂದನನ್ನು ಸಿಬಿಐ ಪೊಲೀಸರು ಇತ್ತೀಚೆಗೆ ಹರಿದ್ವಾರ್ ದಲ್ಲಿ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.(ಆರ್ಎಸ್ಎಸ್)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications