ವಿಧಾನಸೌಧದಲ್ಲಿ ಶಂಖ, ಜಾಗಟೆಗಳ ಗಲಾಟೆ!

ಇಲ್ಲ, ಕರ್ನಾಟಕದ ಆಡಳಿತ ಕಚೇರಿಯಲ್ಲಿ ಯಾವುದೇ ಮಂಗಳ ಕಾರ್ಯ ಜರುಗುತ್ತಿರಲಿಲ್ಲ. ಬದಲಿಗೆ ಆಡಳಿತ ಪಕ್ಷವನ್ನು ವಿರೋಧಿಸಿ ವಿರೋಧ ಪಕ್ಷದವರು ಮಾಡುತ್ತಿರುವ ಗದ್ದಲದ ಜೊತೆ ಜಾಗಟೆ, ಶಂಖಗಳೂ ಸೇರಿಕೊಂಡು ಗದ್ದಲಕ್ಕೂ ಒಂದು ಇಂಪನ್ನು ತಂದಿದ್ದವು.
ಎರಡು ಸೂಟ್ ಕೇಸುಗಳನ್ನು ಹಿಡಿದುಕೊಂಡು ಶಂಖ, ಜಾಗಟೆಯನ್ನು ಬಾರಿಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು ವಿಧಾನಸಭೆಯನ್ನು ಪ್ರವೇಶಿಸಿದರು. ಬಿಜೆಪಿಯ ನಾಯಕ ಮತ್ತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಎಲ್ಲಾ ಹಗರಣಗಳನ್ನು ಸೂಟ್ ಕೇಸ್ ನಲ್ಲಿನ ದಾಖಲೆಗಳು ಬಯಲಿಗೆಳೆಯಲಿವೆ ಎಂದು ಕೂಗುತ್ತಲೇ ಪ್ರವೇಶ ಮಾಡಿದರು.
ಶಂಖ, ಜಾಗಟೆಗಳ ನಿನಾದಕ್ಕೆ ಮೈಮರೆಯದ ಮಾರ್ಷಲ್ ಗಳು ಸೂಟ್ ಕೇಸನ್ನು ತೆಗೆಯಲು ಅವಕಾಶವನ್ನೇ ನೀಡದೆ ಬಾಗಿಲಿನ ದಾರಿ ತೋರಿಸಿದರು. ಸೂಟ್ ಕೇಸುಗಳ ಹಿಂದೆಯೇ ಸದನದ ಬಾವಿಗೆ ನುಗ್ಗಿ ಯಡಿಯೂರಪ್ಪ ಮತ್ತು ಬಿಜೆಪಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದ ವಿರೋಧ ಪಕ್ಷದವರು ಸಭಾತ್ಯಾಗ ಮಾಡಿದರು. ಅಧಿವೇಶನವನ್ನು ಬಹಿಷ್ಕರಿಸುವುದಾಗಿ ಹೇಳುತ್ತ ಸಾಗಿದ ವಿಪಕ್ಷಗಳು ಮತ್ತು ಸದನಕ್ಕೆ ಹಿಂದುರುಗಲೇ ಇಲ್ಲ.
ಬಿಜೆಪಿ ಸರಕಾರ ಭಾಗಿಯಾಗಿರುವ ಎಲ್ಲ ಹಗರಣಗಳ ಕುರಿತು ಮುಕ್ತ ಚರ್ಚೆಯಾಗಬೇಕು ಎಂಬ ವಿರೋಧ ಪಕ್ಷಗಳ ಬೇಡಿಕೆಗೆ ಇಂದು ಕೂಡ ಸ್ಪೀಕರ್ ಕೆಜಿ ಬೋಪಯ್ಯ ಸೊಪ್ಪು ಹಾಕಲಿಲ್ಲ. ಚರ್ಚೆಗೆ ಅವಕಾಶ ನೀಡದ್ದನ್ನು ವಿರೋಧಿಸಿ ವಿರೋಧ ಪಕ್ಷದವರು ಸಭಾತ್ಯಾಗ ಮಾಡಿದರು. ಬಂಧುಬಾಂಧವರಿಗೆಲ್ಲ ನಿವೇಶನಗಳನ್ನು ಹಂಚಿ ಭ್ರಷ್ಟಾಚಾರದ ಆರೋಪಕ್ಕೆ ಗುರಿಯಾಗಿರುವ ಯಡಿಯೂರಪ್ಪ ಅವರ ವಿರುದ್ಧ ವಿರೋಧ ಪಕ್ಷಗಳು ಕತ್ತಿಹಿರಿದು ನಿಂತಿವೆ. ಈ ಹಗರಣಗಳ ಕುರಿತು ಚರ್ಚೆಗೆ ಅವಕಾಶ ನೀಡದಿದ್ದರೆ ಕಲಾಪ ನಡೆಸಲೂ ಅವಕಾಶ ನೀಡುವುದಿಲ್ಲ ಎಂಬ ಏಕಧ್ವನಿಗೆ ಕಟ್ಟುಬಿದ್ದಿವೆ.
ಚರ್ಚೆಗೆ ಅವಕಾಶ ನೀಡದ್ದಕ್ಕೆ ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ, ಸಂಸದ ಎಚ್ ಡಿ ಕುಮಾರಸ್ವಾಮಿ ಅವರು, ಹಕ್ಕುಬಾಧ್ಯತಾ ಸಮಿತಿಗೆ ವಿರೋಧಿಗಳ ಅಹವಾಲು ಸಲ್ಲಿಸಲು ಅವಕಾಶ ನೀಡಿದ್ದಕ್ಕೆ ಸ್ಪೀಕರ್ ಅವರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ. ಸೂಕ್ತ ಸಮಯದಲ್ಲಿ ಎಲ್ಲ ಭ್ರಷ್ಟಾಚಾರಗಳನ್ನು ಬಯಲಿಗೆಳೆಯಲಿದ್ದೇನೆ ಎಂದು ಅವರು ನುಡಿದಿದ್ದಾರೆ. [ಜಂಟಿ ಅಧಿವೇಶನ]
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications