ಬಳ್ಳಾರಿ : ಹೊಂಡಕ್ಕೆ ಬಿದ್ದು ಶಾಲಾ ಬಾಲಕನ ಸಾವು

ಬಳ್ಳಾರಿ ಕಾರ್ಪೊರೇಷನ್ ವ್ಯಾಪ್ತಿಯಲ್ಲಿ ಬರುವ ಬಂಡಿಹಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 1ನೇ ತರಗತಿ ವಿದ್ಯಾರ್ಥಿ ಅಶೋಕ್ (7) ಆ ದುರ್ದೈವಿ. ಗುರುವಾರ ಎಂದಿನಂತೆ ಶಾಲೆಗೆ ಆಗಮಿಸಿದ್ದ ಈ ವಿದ್ಯಾರ್ಥಿ ಸಹಪಾಠಿಗಳ ಜೊತೆಯಲ್ಲಿ ಇಂಟರ್ವೆಲ್ ಸಮಯದಲ್ಲಿ ತರಗತಿಯಿಂದ ಹೊರ ಹೋಗಿ, ಸಮೀಪದ ಕಲ್ಲುಕ್ವಾರಿ ಕುಂಟೆ(ಹೊಂಡ)ದಲ್ಲಿ ಕಾಲು ತೊಳೆಯಲು ಮುಂದಾಗಿದ್ದಾನೆ.
ಅಶೋಕ್ ಆಕಸ್ಮಿಕವಾಗಿ ಪಾಚಿಯ ಮೇಲೆ ಕಾಲಿರಿಸಿ ಜಾರಿ ಬಿದ್ದು ನೀರಿನಲ್ಲಿ ಮುಳುಗಿದ್ದಾನೆ. ಅಶೋಕ್ ಹೊಂಡಕ್ಕೆ ಬಿದ್ದ ಸುದ್ದಿಯನ್ನು ಸಹಪಾಠಿಗಳು ತಿಳಿಸಿದ ಕೂಡಲೇ ಆಸುಪಾಸಿನವರು ಆತನನ್ನು ರಕ್ಷಿಸಲು ಮುಂದಾದರು. ಆದರೆ, ಅವರ ಯತ್ನ ಫಲಕಾರಿಯಾಗದೆ ಅಶೋಕ್ ಮೃತಪಟ್ಟನು.
ಕರ್ತವ್ಯ ನಿರ್ಲಕ್ಷ್ಯ : ಆಂಧ್ರದ ಗೂಳ್ಯಂ ನಿವಾಸಿಗಳಾಗಿದ್ದು ಕೆಲಸಕ್ಕಾಗಿ ಬಂಡಿಹಟ್ಟಿ ಸೇರಿದ್ದ ಮೃತನ ಪೋಷಕರು, ಸಂಬಂಧಿಗಳು ಮತ್ತು ಗ್ರಾಮಸ್ಥರು ಕೂಡಲೇ ಸ್ಥಳಕ್ಕೆ ಆಗಮಿಸಿ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದರು. ಈ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ತರಗತಿ ಶಿಕ್ಷಕರನ್ನು ಕೂಡಲೇ ಅಮಾನತು ಮಾಡಬೇಕು. ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಈ ಶಾಲೆಯಲ್ಲೇ ಶೌಚಾಲಯ ಇದ್ದರೂ ಅದಕ್ಕೆ ಆವರಣ ಇಲ್ಲ. ಶಾಲೆಯ ಸುತ್ತಲೂ ಮನೆಗಳಿವೆ. ಹಾಗಾಗಿ, ಪ್ರತಿನಿತ್ಯವೂ ವಿದ್ಯಾರ್ಥಿಗಳು ಬಹಿರ್ದೆಸೆಗೆಂದು ಹೊಂಡದ ಬಳಿ ಹೋಗಿ, ದುರಂತ ನಡೆದ ಕುಂಟೆಯಲ್ಲಿ ಕೈಕಾಲು ತೊಳೆಯುತ್ತಾರೆ. ದುರದೃಷ್ಟವಶಾತ್ ಎಂದೂ ನಡೆಯದ ಘಟನೆ ಗುರುವಾರ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. [ಜಿಲ್ಲಾಸುದ್ದಿ]
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications