ಇನ್ಫೋಸಿಸ್ ಸೇರಿದವರಿಗಿಂತ ಬಿಟ್ಟವರೆ ಜಾಸ್ತಿ

ಬಾಂಬೆ ಸ್ಟಾಕ್ ಎಕ್ಸ್ ಜೇಂಜ್ ಗೆ ಇನ್ಫೋಸಿಸ್ ಸಲ್ಲಿಸಿರುವ ತನ್ನ ತ್ರೈಮಾಸಿಕ ವರದಿಯಲ್ಲಿ ಇದನ್ನು ಪ್ರಸ್ತಾಪಿಸಿದೆ. ತ್ರೈಮಾಸಿಕ ಅವಧಿ 2010 ರ ಅಕ್ಟೋಬರ್ ನಿಂದ ಡಿಸೆಂಬರ್ ಅವಧಿಯಲ್ಲಿ ಕಂಪನಿಯೂ ಸುಮಾರು 11,067 ಉದ್ಯೋಗಿಗಳನ್ನು ನೇಮಕ ಮಾಡಿಕೊಂಡಿದೆ. ಇದರಲ್ಲಿ 5,756 ಉದ್ಯೋಗಿಗಳು ಕೆಲಸ ಬಿಟ್ಟು ಹೋಗಿದ್ದು, ಖಾಲಿ ಇರುವ ಹುದ್ದೆಗಳ ಜೊತೆಗೆ 5,311 ಉದ್ಯೋಗಿಗಳನ್ನು ಹೆಚ್ಚುವರಿಯಾಗಿ ಕೆಲಸಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಇನ್ಫೋಸಿಸ್ ಮಾನವ ಸಂಪನ್ಮೂಲ ವಿಭಾಗ ಮುಖ್ಯಸ್ಥರಾದ ಟಿವಿ ಮೋಹನ್ ದಾಸ್ ಪೈ ತಿಳಿಸಿದ್ದಾರೆ.
ಆರ್ಥಿಕ ಕುಸಿತದಿಂದ ಉದ್ಯಮ ಚೇತರಿಸಿಕೊಂಡಿದೆ. ಕಂಪನಿಗೆ ಅನೇಕ ನೂತನ ಯೋಜನೆಗಳು ಬರುತ್ತಿವೆ. ಮೂರನೇ ತ್ರೈಮಾಸಿಕ ಅವಧಿಯಲ್ಲಿ 11,067 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಕಂಪನಿಯ ಇತ್ತೀಚೆಗಿನ ದಿನಗಳಲ್ಲಿ ಇದೊಂದು ದೊಡ್ಡ ಮಟ್ಟದ ನೇಮಕಾತಿ ಎಂದೇ ಹೇಳಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಆರಂಭಿಕ ಹಂತದಲ್ಲಿ ಉದ್ಯೋಗಿಗಳ ನೇಮಕಾತಿಯಲ್ಲಿ ಯಾವುದೇ ತೊಂದರೆಯಾಗುತ್ತಿಲ್ಲ. ಆದರೆ, ಅನುಭವಿಗಳನ್ನು ಕಂಪನಿಯಲ್ಲಿ ಇಟ್ಟುಕೊಳ್ಳುವುದು ದೊಡ್ಡ ಸಾಹಸದ ಕೆಲಸವಾಗಿದೆ ಇನ್ಫೋಸಿಸ್ ಸಿಇಓ ಎಸ್ ಗೋಪಾಲಕೃಷ್ಣ ಹೇಳಿದ್ದಾರೆ. ಇನ್ಫೋಸಿಸ್ ನಲ್ಲಿ ಒಟ್ಟು 1,27,779 ಮಂದಿ ಕೆಲಸ ಮಾಡುತ್ತಿದ್ದಾರೆ. ಇದೇ ಅವಧಿ 2009 ರಲ್ಲಿ 1,09,882 ಮಂದಿ ಕೆಲಸ ಮಾಡುತ್ತಿದ್ದರು ಎಂದು ಅವರು ಹೇಳಿದ್ದಾರೆ.
ಇನ್ಫಿ ಮೂರನೇ ತ್ರೈಮಾಸಿಕ : ಇನ್ಫೋಸಿಸ್ ಮೂರನೇ ತ್ರೈಮಾಸಿಕ ಘೋಷಣೆಯಾಗಿದ್ದು, ಕಂಪನಿ ಎರಡನೇ ತ್ರೈಮಾಸಿಕಕ್ಕಿಂತ ಶೇ. 4 ರಷ್ಟು ಹಣಕಾಸು ವ್ಯವಹಾರ ಕಡಿಮೆಯಾಗಿದೆ. ಅಗಸ್ಟ್ ನಿಂದ ಸೆಪ್ಟೆಂಬರ್ ವರೆಗಿನ ತ್ರೈಮಾಸಿಕದಲ್ಲಿ ಕಂಪನಿಯೂ 15,401 ಕೋಟಿ ರುಪಾಯಿ ವ್ಯವಹಾರ ನಡೆಸಿದ್ದರೆ, ಅಕ್ಟೋಬರ್ ನಿಂದ ಡಿಸೆಂಬರ್ ವರೆಗೆ 14,819 ಕೋಟಿ ರುಪಾಯಿ ವ್ಯವಹಾರ ನಡೆಸಿದೆ. ಒಟ್ಟಾರೆ ವಹಿವಾಟಿನಲ್ಲಿ ಶೇ.14 ರಷ್ಟು ಹೆಚ್ಚಳವಾಗಿದೆ ಎಂದು ಕಂಪನಿ ತಿಳಿಸಿದೆ. (ಇನ್ಫೋಸಿಸ್)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications