ಮೈಸೂರಿನಲ್ಲಿ ವಿಕಿಪೀಡಿಯ 10ರ ಸಂಭ್ರಮ

ಪ್ರಪಂಚಾದ್ಯಂತ ಮುಕ್ತಜ್ಞಾನಹಂಚಿಕೆಯ ವಿಕಿಪೀಡಿಯ ಬಳಕೆದಾರರು ಇದರ ಹತ್ತನೆಯ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಲು ತಯಾರಿ ನಡೆಸಿದ್ದಾರೆ. ಭಾರತದಲ್ಲೂ ಕೆಲವು ನಗರಗಳಲ್ಲಿ ಈ ಆಚರಣೆ ನಡೆಯಲಿದೆ. ಮೈಸೂರು ನಗರವೂ ಈ ಪಟ್ಟಿಯಲ್ಲಿದೆ.
ಮೈಸೂರಿನ ಮಾನಸಗಂಗೋತ್ರಿಯ ಪಕ್ಕದಲ್ಲಿರುವ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿರುವ ಜೆಎಸ್ಎಸ್ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್ ಕಟ್ಟಡದಲ್ಲಿ ಜನವರಿ 16ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆ ತನಕ ಈ ಕಾರ್ಯಕ್ರಮ ಜರುಗಲಿದೆ. ವಿವಿಧ ಕ್ಷೇತ್ರಗಳ ಹಲವು ಮಂದಿ ವಿಕಿಪೀಡಿಯ ಮತ್ತು ಅದರ ಬಳಕೆ ಬಗ್ಗೆ ಮಾತನಾಡಲಿದ್ದಾರೆ ಮತ್ತು ಪ್ರಾತ್ಯಕ್ಷಿಕೆ ನೀಡಲಿದ್ದಾರೆ. ಕನ್ನಡ ವಿಕಿಪೀಡಿಯ ಬಗ್ಗೆ ಕೂಡ ಪ್ರತ್ಯೇಕ ಭಾಷಣ ಮತ್ತು ಪ್ರಾತ್ಯಕ್ಷಿಕೆ ಏರ್ಪಾಡು ಮಾಡಲಾಗಿದೆ.
ವಿಕಿಪೀಡಿಯಾ ಬಳಸುವುದು ಹೇಗೆ, ಅದಕ್ಕೆ ಮಾಹಿತಿ ಸೇರಿಸುವುದು ಹೇಗೆ, ಇತರರು ಸೇರಿಸಿದ ಮಾಹಿತಿಯನ್ನು ತಿದ್ದುವುದು ಹೇಗೆ, ಕನ್ನಡದಲ್ಲಿ ಮಾಹಿತಿ ಸೇರಿಸುವುದು ಹೇಗೆ - ಈ ಎಲ್ಲ ಪ್ರಶ್ನೆಗಳಿಗೆ ಪರಿಣತರು ಪ್ರಾತ್ಯಕ್ಷಿಕೆ ಮೂಲಕ ಉತ್ತರ ನೀಡಲಿದ್ದಾರೆ.
ಮೈಸೂರು ವಿಕಿ ಕಾರ್ಯಕ್ರಮ ವಿವರಗಳು:
ಸ್ಥಳ: ಜೆಎಸ್ಎಸ್ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್ ಕಟ್ಟಡ, ಮಾನಸ ಗಂಗೋತ್ರಿ ಬಳಿ
ದಿನಾಂಕ : ಜನವರಿ 16, 2011
ಕಾರ್ಯಕ್ರಮಕ್ಕೆ ಪ್ರವೇಶ ಉಚಿತ. ನೋಂದಣಿಗಾಗಿ ಸಂಪರ್ಕಿಸಿ : ವಿನಯ್ (96320 44188) ಅಥವಾ ರಾಕೇಶ್ (93421 19667)
ಕಾರ್ಯಕ್ರಮದಲ್ಲಿ ಬಾಗವಹಿಸುವ ಖ್ಯಾತನಾಮರು: ಪ್ರೊ.ಚಿದಾನಂದ ಗೌಡ, ಪ್ರೊ. ಯೋಗಾನಂದ, ಪ್ರೊ. ಎಂ.ಎಸ್. ಶ್ರೀಧರ್, ಪ್ರೊ. ಓ.ಎಲ್.ಎನ್. ಸ್ವಾಮಿ, ಡಾ. ಯು.ಬಿ. ಪವನಜ
ಹೆಚ್ಚಿನ ವಿವರಗಳಿಗೆ ಮೈಸೂರು ವಿಕಿ ತಾಣ ವೀಕ್ಷಿಸಿ
ವಿಕಿಪೀಡಿಯ ಬಗ್ಗೆ :ವಿಕಿಮೀಡಿಯಾ ಫೌಂಡೇಶನ್ನ ಸಹಾಯದಿಂದ ನಡೆಯುತ್ತಿರುವ ವಿಕಿಪೀಡಿಯ ಒಂದು ಮುಕ್ತ ಸಹಯೋಗಿ ಬಹುಭಾಷಾ ವಿಶ್ವಕೋಶ. ಸುಮಾರು 17 ಮಿಲಿಯ ಲೇಖನಗಳು ಇದರಲ್ಲಿವೆ. ಇಂಗ್ಲಿಶ್ ಭಾಷೆ ಒಂದರಲ್ಲೇ ಸುಮಾರು 3.5 ಮಿಲಿಯ ಲೇಖನಗಳಿವೆ.
ಈ ಎಲ್ಲ ಲೇಖನಗಳನ್ನು ಪ್ರಪಂಚಾದ್ಯಂತ ಚೆದುರಿಹೋಗಿರುವ ಸ್ವಯಂಸೇವಕರು ಬರೆದಿರುವುದು ಮಾತ್ರವಲ್ಲ ಈ ಲೇಖನಗಳನ್ನು ಯಾರು ಬೇಕಾದರು ತಿದ್ದಬಹುದು ಮತ್ತು ನವೀಕರಿಸಬಹುದು. ವಿಕಿಪೀಡಿಯವನ್ನು ಜಿಮ್ಮಿ ವೇಲ್ಸ್ ಮತ್ತು ಲ್ಯಾರಿ ಸಾಂಗರ್ ಅವರುಗಳು 2001 ರಲ್ಲಿ ಪ್ರಾರಂಭಿಸಿದರು. ಈಗ ಇದು ಅಂತರಜಾಲದ ಎಲ್ಲ ತಾಣಗಳಲ್ಲಿ ಜನಬಳಕೆಯಲ್ಲಿ ಎಂಟನೆಯ ಸ್ಥಾನದಲ್ಲಿದೆ. ಅಂತರಜಾಲದಲ್ಲಿರುವ ಮಾಹಿತಿ ಆಕರವಾಗಿ ಇದು ಪ್ರಥಮ ಸ್ಥಾನದಲ್ಲಿದೆ. [ಮೈಸೂರು]
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications