ಶಬರಿಮಲೆಗೆ ಶೋಭಾ ಕರಂದ್ಲಾಜೆ, ಉಮೇಶ್ ಕತ್ತಿ ದೌಡು

Sabarimala Stampede
ಇಡುಕ್ಕಿ/ತಿರುವನಂತಪುರಂ, ಜ.15: ಶಬರಿಮಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದಕಾಲ್ತುಳಿತದ ದುರಂತದಲ್ಲಿ ಕರ್ನಾಟಕದ 20ಕ್ಕೂ ಅಧಿಕ ಮಂದಿ ಅಯ್ಯಪ್ಪ ಸ್ವಾಮಿ ಭಕ್ತರು ಮೃತಪಟ್ಟಿದ್ದಾರೆ. ಮೃತಪಟ್ಟ ಭಕ್ತರಲ್ಲಿ ಇಬ್ಬರು ಮೈಸೂರು,ಇಬ್ಬರು ಬೆಂಗಳೂರಿನವರಾಗಿದ್ದು ಉಳಿದ ಒಂಭತ್ತು ಮಂದಿ ಬೆಳಗಾವಿ ಜಿಲ್ಲೆಯ ಗೋಕಾಕ್ ನವರು.

ಸಚಿವರಾದ ಉಮೇಶ್ ಕತ್ತಿ ಹಾಗೂ ಶೋಭಾ ಕರಂದ್ಲಾಜೆ ಅವರು ಪರಿಹಾರ ಕ್ರಮಗಳಿಗಾಗಿ ಅಧಿಕಾರಿಗಳೊಂದಿಗೆ ಕೊಚ್ಚಿಗೆ ಪ್ರಯಾಣ ಬೆಳೆಸಿದ್ದಾರೆ (ಮೃತರ ದೇಹಗಳನ್ನು ಸಂಬಂಧಪಟ್ಟವರಿಗೆ ತಲುಪಿಸಲು). ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಮೃತರ ಕುಟುಂಬಕ್ಕೆ ತಲಾ ರು.1 ಲಕ್ಷ ಪರಿಹಾರ ಧನ ಘೋಷಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರಿಗೆ ರು.25 ಸಾವಿರ ಪರಿಹಾರ ಧನವನ್ನೂ ಮುಖ್ಯಮಂತ್ರಿಗಳು ಘೋಷಿಸಿದ್ದು, ಘಟನೆ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಸಂಸದ ರಾಜೀವ್ ಚಂದ್ರಶೇಖರ್ ಕೂಡ ಘಟನೆ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದು ವಿಷಾದಿಸಿದ್ದಾರೆ. ದೇಶದ ಮೂಲೆಮೂಲೆಗಳಿಂದಸಂತಾಪ ವ್ಯಕ್ತವಾಗಿದೆ.

ಬೆಂಗಳೂರು ಸಹಾಯವಾಣಿ : 080-2221 1177

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+