ಬನಶಂಕರಿ ಜೆಡಿಎಸ್ ಕಾರ್ಪೋರೇಟರ್ ಕಗ್ಗೊಲೆ

ಅಲಿ ಜೊತೆಗಿದ್ದ ಖಲೀಂ ಮತ್ತು ಉಮರ್ ಎಂಬುವವರ ಮೇಲೆಯೂ ದಾಳಿ ನಡೆದಿದೆ. ಇದರಲ್ಲಿ ಉಮರ್ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ. ತಿಲಕ್ ನಗರದಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಉಮರ್ ಅವರನ್ನು ದಾಖಲಿಸಲಾಗಿದೆ. ನಾಲ್ಕು ಮಂದಿ ಬೈಕ್ ನಲ್ಲಿ ಬಂದು ಇಬ್ಬರು ಅಲಿ ಮೇಲೆ ಟಾರ್ಗೆಟ್ ಮಾಡಿದ್ದರೆ, ಇನ್ನಿಬ್ಬರು ಖಲೀಂ ಮತ್ತು ಉಮರ್ ಅವರ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಉಮರ್ ಅವರ ತಲೆಗೆ ಭಾರಿ ಪೆಟ್ಟು ಬಿದ್ದಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇತ್ತೀಚೆಗೆ ನಡೆದ ಬಿಬಿಎಂಪಿ ಚುನಾವಣೆಯಲ್ಲಿ ದಿವಾನ್ ಅಲಿ ಅವರು ಬನಶಂಕರಿ ವಾರ್ಡ್ ನಿಂದ ಜೆಡಿಎಸ್ ಪಕ್ಷದ ಮೂಲಕ ಆಯ್ಕೆಯಾಗಿದ್ದರು. ದಿವಾನ್ ಅಲಿ ಅವರ ಕೊಲೆಗೆ ಹಳೆ ವೈಷಮ್ಯವೇ ಕಾರಣ ಎನ್ನಲಾಗಿದೆ. ದಿವಾನ್ ಅಲಿ ಮಾಜಿ ರೌಡಿ ಎಂದು ಹೇಳಲಾಗಿದ್ದು, ಕಳೆದ 10 ವರ್ಷಗಳಿಂದ ಭೂಗತ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಎಂದು ಪೊಲೀಸರು ಹೇಳಿದ್ದಾರೆ. ಅಲಿ ಮೇಲೆ ಒಟ್ಟು ಕೊಲೆ, ಕೊಲೆ ಯತ್ನ, ಗಾಂಜಾ ಮಾರಾಟ ಸೇರಿದಂತೆ 27 ಕೇಸ್ ಗಳು ಇದ್ದವು.
ಬಿದರಿ ಹೇಳಿಕೆ : ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ, ದಿವಾನ್ ಅಲಿ ಗುಂಪು ಮತ್ತು ಸುಧಾಮನಗರದ ರೌಡಿ ಮಾಹಿಮ್ ನಡುವೆ ವೈಷಮ್ಯ ಇತ್ತು. ಈ ಬಗ್ಗೆ ನಮಗೆ ಮಾಹಿತಿ ಇತ್ತು. ದಿವಾನ್ ಅಲಿ ಬಿಬಿಎಂಪಿ ಸದಸ್ಯರಾದ ನಂತರವೂ ರೌಡಿ ಚಟುವಟಿಕೆಗಳನ್ನು ಮುಂದುವರಿಸಿದ್ದರು. ಇದರಿಂದ ಅಲಿ ಮತ್ತು ಮಾಹಿಮ್ ಹಗೆತನ ಮುಂದುವರಿದಿತ್ತು. ಹೀಗಾಗಿ ಕೆಲವೆ ದಿನಗಳಲ್ಲಿ ಈ ಇಬ್ಬರನ್ನು ಗೂಂಡಾ ಕಾಯ್ದೆಯಲ್ಲಿ ಬಂಧಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಈ ಘಟನೆಗೆ ಯಾರು ಕಾರಣ ಎಂಬುದು ಗೊತ್ತಿದೆ. ಶೀಘ್ರದಲ್ಲೇ ಆರೋಪಿಗಳ ಬಂಧಿಸಲಾಗುವುದು ಎಂದು ಬಿದರಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದರು.
ರಾಜಕೀಯ ದ್ವೇಷ : ದಿವಾನ್ ಅಲಿ ಕಾರ್ಪೋರೇಟರ್ ಆದ ನಂತರ ಅವರ ವರ್ತನೆ ಬದಲಾಗಿತ್ತು. ಅಲಿ ಕೊಲೆಯಲ್ಲಿ ರಾಜಕೀಯ ನಾಯಕರ ಕೈವಾಡ ಇದೆ ಎನ್ನುವ ಸಂಶಯ ಬಂದಿದೆ. ಅಲಿ ಮೇಲೆ ಕೆಲ ಪೊಲೀಸ್ ಅಧಿಕಾರಿಗಳು ದ್ವೇಷ ಸಾಧಿಸುತ್ತಿದ್ದರು. ಬೆಂಗಳೂರು ಪೊಲೀಸ್ ಆಯುಕ್ತರು ಇದರ ಬಗ್ಗೆ ಸ್ಪಷ್ಟೀಕರಕಣ ನೀಡಬೇಕು. ನಾನೀಗ ಲಂಡನ್ ನಲ್ಲಿದ್ದು ಬೆಂಗಳೂರಿಗೆ ಬಂದ ನಂತರ ವಿವರವಾಗಿ ತಿಳಿಸುವೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.(ಕ್ರೈಂ)
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications