ಇನ್ಫಿ ಸಮಾಜಸೇವೆಗೆ ಭಲೇ ಎಂದ ಯಡಿಯೂರಪ್ಪ

BS Yeddyurappa
ಮೈಸೂರು, ಜ. 17 : ಕಾರ್ಪೋರೇಟ್ ಸಂಸ್ಥೆಗಳು ಸಾಮಾಜಿಕ ಜವಾಬ್ದಾರಿ ಹೊರಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.

ನಗರದ ಹೆಬ್ಬಾಳು ಕೈಗಾರಿಕೆ ಪ್ರದೇಶದಲ್ಲಿ ಇನ್ಫೋಸಿಸ್ ನಿರ್ಮಿಸಿರುವ ಅಧುನಿಕ ಅಗ್ನಿಶಾಮಕ ಠಾಣೆ ಮತ್ತು 14 ವಸತಿಗೃಹಗಳನ್ನು ಉದ್ಘಾಟಿಸಿದ ಬಳಿಕ ಅವರು ಮಾತನಾಡುತ್ತಿದ್ದರು. ದೇಶದ ಸಾಫ್ಟ್ ವೇರ್ ಉದ್ಯಮದಲ್ಲಿ ಉನ್ನತಮಟ್ಟದಲ್ಲಿರುವ ಇನ್ಫೋಸಿಸ್ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ. ಹೆಬ್ಬಾಳು ಕೈಗಾರಿಕೆ ಪ್ರದೇಶದಲ್ಲಿ 5 ಕೋಟಿ ರುಪಾಯಿ ವೆಚ್ಚದಲ್ಲಿ ಸೇವೆಗೆ ಸಮರ್ಪಿಸಿದ ಆಧುನಿಕ ಅಗ್ನಿಶಾಮಕ ಠಾಣೆ ಹಾಗೂ 14 ವಸತಿಗಳು ಗೃಹಗಳು ಇನ್ಫೋಸಿಸ್ ನ ಕೊಡುಗೆಯಾಗಿದ್ದು, ಸಾಮಾಜಿಕ ಜವಾಬ್ದಾರಿಗೆ ಸಾಕ್ಷಿಯಾಗಿದೆ ಎಂದರು.

ದೇಶದ ಎಲ್ಲ ಕಾರ್ಪೋರೇಟ್ ಸಂಸ್ಥೆಗಳು ಇನ್ಫೋಸಿಸ್ ಮಾದರಿಯಲ್ಲೇ ಸಾಮಾಜಿಕ ಕಾರ್ಯಕ್ಕೆ ಮುಂದೆ ಬರಬೇಕು. ರಾಜ್ಯಗಳು ಅಭಿವೃದ್ಧಿಯಾಗಬೇಕಾದರೆ ಇಂತಹ ಕಾರ್ಪೋರೇಟ್ ಸಂಸ್ಥೆಗಳ ಸಹಕಾರ ಅಗತ್ಯ ಎಂದು ಯಡಿಯೂರಪ್ಪ ಅಭಿಪ್ರಾಯಪಟ್ಟರು. ಸಾಮಾಜಿಕ ಕಾರ್ಯಗಳನ್ನು ತೊಡಗಿಸಿಕೊಳ್ಳುವ ಕಾರ್ಪೋರೇಟ್ ಸಂಸ್ಥೆಗಳಿಗೆ ಸರಕಾರ ಎಲ್ಲ ರೀತಿ ಸಹಾಯ ಸಹಕಾರ ನೀಡಲಿದೆ ಎಂದು ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+