ಸಾಲುಕೊಪ್ಪಲೆಂಬ ಶೀತಪೀಡಿತ ಗ್ರಾಮ

ಬೇಸಿಗೆಯಲ್ಲಿ ಇಲ್ಲಿಗೆ ಭೇಟಿ ನೀಡಿದವರಿಗೆ ತಂಪು ಹವೆ ಒಂದಷ್ಟು ಮಜಾ ನೀಡಿದರೆ, ಗ್ರಾಮಸ್ಥರಿಗೆ ಮಾತ್ರ ಶಾಪವಾಗಿ ಪರಿಣಮಿಸಿದೆ. ಮಳೆಗಾಲದಲ್ಲಿ ಉಕ್ಕಿ ಹರಿಯುವ ನೀರು... ಚಳಿಗಾಲದಲ್ಲಿ ಮೈಕೊರೆಯುವ ಚಳಿ... ಇದರ ನಡುವೆ ಸದಾ ತೇವದ ಭೂಮಿಯಲ್ಲಿ ಯಾವುದೇ ಕೃಷಿ ಮಾಡಲಾಗದ ದುಸ್ಥಿತಿ.
ಈ ಕುಟುಂಬಗಳಿಗೆ ಯಾರು ದಿಕ್ಕು?:ಹೀಗಿದ್ದರೂ ಈ ಗ್ರಾಮದಲ್ಲಿ ಸುಮಾರು 27 ಕುಟುಂಬಗಳು ವಾಸಿಸುತ್ತಿವೆ. ಇಲ್ಲಿನ ಪರಿಸ್ಥಿತಿಗೆ ಅನಿವಾರ್ಯವಾಗಿ ಹೊಂದಿಕೊಂಡಿವೆ. ಮೊದಲೆಲ್ಲಾ ಈ ಗ್ರಾಮವೂ ಎಲ್ಲಾ ಗ್ರಾಮಗಳಂತೆ ಇತ್ತು. ಇಲ್ಲಿನ ಜಮೀನುಗಳು ಫಲವತ್ತಾಗಿದ್ದವು. ರೈತರು ಕೃಷಿ ಮಾಡಿಕೊಂಡು ಜೀವನ ನಿರ್ವಹಿಸುತ್ತಿದ್ದರು. ಆದರೆ ಹಾರಂಗಿ ಜಲಾಶಯ ನಿರ್ಮಾಣಗೊಂಡ ಬಳಿಕ ಇಲ್ಲಿ ಸಮಸ್ಯೆ ಪ್ರಾರಂಭವಾಯಿತು. ಗ್ರಾಮ ಶೀತದಲ್ಲಿ ಮುಳುಗಿತು.
ಆರ್ಥಿಕವಾಗಿ ಸಬಲರಾಗಿದ್ದವರು ಗ್ರಾಮವನ್ನು ತೊರೆದು ಬೇರೆಡೆಗೆ ಹೋದರಾದರೂ, ಕೆಲವರು ಅಸಹಾಯಕರಾಗಿ ಇಲ್ಲಿಯೇ ಉಳಿದಿದ್ದಾರೆ. ಇವರನ್ನು ಪುನರ್ವಸತಿಗೊಳಿಸುವುದಾಗಲೀ, ಗ್ರಾಮವನ್ನು ಶೀತಮುಕ್ತಗೊಳಿಸಲು ವೈಜ್ಞಾನಿಕ ಕ್ರಮಗಳನ್ನು ಸರ್ಕಾರ ಕೈಗೊಳ್ಳದೇ ಇರುವುದರಿಂದ ಈ ಗ್ರಾಮದ ಜನ ಇನ್ನೂ ಸಮಸ್ಯೆಯಲ್ಲಿಯೇ ದಿನ ಕಳೆಯುತ್ತಿದ್ದಾರೆ.
1984ರಲ್ಲಿ ಸಾಲುಕೊಪ್ಪಲು ಗ್ರಾಮದ ನಿವಾಸಿಗಳ ಪುನರ್ವಸತಿಗಾಗಿ ಸರ್ಕಾರ ಸಮಿತಿ ರಚಿಸಿತ್ತು. ಈ ಸಮಿತಿಯು ಮಣಜೂರು ಗ್ರಾಮದಲ್ಲಿ ಜಾಗವನ್ನು ಗುರುತಿಸಿ ಅಲ್ಲಿಗೆ ಸಾಲುಕೊಪ್ಪಲಿನ ನಿವಾಸಿಗಳನ್ನು ಸ್ಥಳಾಂತರಿಸಲು ಚಿಂತನೆ ನಡೆಸಿತ್ತು. ಇದರ ಫಲವಾಗಿ 1990ಲ್ಲಿ ಮಣಜೂರು ಗ್ರಾಮದಲ್ಲಿ 5.85 ಎಕರೆ ಜಾಗವನ್ನು ಸ್ವಾಧೀನಕ್ಕೆ ತೆಗೆದುಕೊಂಡು ನಿವೇಶನವಾಗಿ ಪರಿವರ್ತಿಸುವ ಮೂಲಕ ಹುಣಸೂರಿನ ಭೂಸ್ವಾಧೀನ ಇಲಾಖೆಯು ಕಾವೇರಿ ನೀರಾವರಿ ನಿಗಮಕ್ಕೆ ಹಸ್ತಾಂತರ ಮಾಡಿತ್ತು.
ಕ್ಯಾರೆ ಎನ್ನದ ಅಧಿಕಾರಿಗಳು: ಕಾವೇರಿ ನೀರಾವರಿ ನಿಗಮವು ಪುನರ್ವಸತಿ ಕಾರ್ಯದ ಬಗ್ಗೆ ಕರಡು ತಯಾರಿಸಿ 1.20 ಕೋಟಿ ರೂ. ಮೊತ್ತದ ಪ್ರಸ್ತಾವನೆಯನ್ನು ಮುಂದಿನ ಕ್ರಮಕ್ಕಾಗಿ ಸರ್ಕಾರಕ್ಕೆ ಸಲ್ಲಿಸಿತು. ಆದರೆ ಸರ್ಕಾರ ಈ ಬಗ್ಗೆ ತಲೆಕೆಡಿಸಿಕೊಳ್ಳದ ಕಾರಣ ನೆನೆಗುದಿಗೆ ಬಿತ್ತು.
ಇದೀಗ ಮತ್ತೆ ಸಾಲುಕೊಪ್ಪಲನ್ನು ಶೀತ ಮುಕ್ತ ಗ್ರಾಮವನ್ನಾಗಿಸುವ ನಿಟ್ಟಿನಲ್ಲಿ ಕಾವೇರಿ ನೀರಾವರಿ ನಿಗಮದ ಹಾರಂಗಿ ವಿಭಾಗದ ಕಾರ್ಯಪಾಲಕ ಅಭಿಯಂತರರ ನೇತೃತ್ವದಲ್ಲಿ ತಾಂತ್ರಿಕ ಸಮಿತಿಯೊಂದನ್ನು ರಚಿಸಲಾಗಿದ್ದು, ಜನವರಿ ತಿಂಗಳೊಳಗಾಗಿ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ. ಇದು ಕೂಡ ಜಾರಿಗೆ ಬರುತ್ತಾ ಇಲ್ಲ ನೆನೆಗುದಿಗೆ ಬೀಳುತ್ತಾ ಕಾದು ನೋಡಬೇಕು. [ಕೊಡಗು]
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications