ಅಲಿ ಕೊಲೆಯಲ್ಲಿ ಮಾಹಿಮ್ ಇಲ್ಲ, ಮತ್ತ್ಯಾರು...?

ದಿವಾನ್ ಅಲಿಯ ವೈರಿ ಮಾಹಿಮ್ ತಂಡದ ಸದಸ್ಯರು ಈ ಕೊಲೆ ಮಾಡಿರಬಹುದೆಂದು ಅಂದಾಜಿಸಲಾಗಿತ್ತು. ಆದರೆ, ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಉಂಟಾದ ಭಿನ್ನಭಿಪ್ರಾಯದಲ್ಲಿ ಇನ್ನೊಂದು ತಂಡ ಅಲಿಯನ್ನು ಮುಗಿಸಿ ಹಾಕಿದೆ ಎಂದು ಹೇಳಲಾಗಿದೆ. ಆರೋಪಿಗಳು ಇತ್ತೀಚೆಗೆ ಯಾರಬ್ ನಗರಕ್ಕೆ ಆಗಾಗ ಬರುತ್ತಿದ್ದರು. ಬೈಕ್ ನಲ್ಲಿ ಬರುತ್ತಿದ್ದ ಅವರು ಯಾರಬ್ ನಗರವನ್ನು ಸುತ್ತಾಡಿ ನಂತರ ಹಿಂದಿರುಗುತ್ತಿದ್ದರು.
ಆರೋಪಿಗಳಲ್ಲಿ ಕೆಲವರು ಈ ಹಿಂದೆ ಯಾರಬ್ ನಗರದಲ್ಲಿ ವಾಸಿಸುತ್ತಿದ್ದರು. ಇತ್ತೀಚೆಗೆ ಈ ನಗರ ಬಿಟ್ಟು ಕಲ್ಲಹಳ್ಳಿಯಲ್ಲಿ ವಾಸಿಸುತ್ತಿದ್ದರು. ದಿವಾನ್ ಅಲಿ ಹತ್ಯೆ ಸಂಚು ರೂಪಿಸಿದ್ದ ಅವರು ಬೈಕ್ ಗಳಲ್ಲಿ ಬಂದು ಸುತ್ತಾಡಿ ಹೋಗುತ್ತಿದ್ದರು. ಕೊಲೆಯ ನಂತರ ಎಲ್ಲಿಂಗ ಹೇಗೆ ಪರಾರಿಯಾಗಬೇಕು ಎಂದು ಬಗ್ಗೆ ಸಿದ್ದತೆ ನಡೆಸಿಕೊಂಡಿದ್ದರು ಎನ್ನಲಾಗಿದೆ. ಅಷ್ಟೇ ಅಲ್ಲ ಆರೋಪಿಗಳು ಅಲಿಯ ದಿನಚರಿಯನ್ನು ಸ್ಥಳೀಯರಿಂದ ಕಲೆ ಹಾಕುತ್ತಿದ್ದರು ಎಂಬ ಸುದ್ದಿಯೂ ಇದೆ.
ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಉಮರ್ ಮತ್ತು ಖಲೀಂ ಚೇತರಿಸಿಕೊಳ್ಳುತ್ತಿದ್ದಾರೆ. ಅವರಿಬ್ಬರ ವಿಚಾರಣೆ ನಡೆಸಿ ಮಾಹಿತಿ ತೆಗೆದುಕೊಳ್ಳುವುದಾಗಿ ಪೊಲೀಸರು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕೆ ತನಿಖೆ ಶುರುವಾಗಿದೆ. ಇದುವರೆಗೂ ಯಾರನ್ನೂ ಬಂಧಿಸಿಲ್ಲ. ಆರೋಪಿಗಳು ಪತ್ತೆಯಾಗಿದ್ದು, ಶೀಘ್ರದಲ್ಲಿ ಬಂಧಿಸುತ್ತೇವೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರಿ ಬಿದರಿ ಹೇಳಿದ್ದಾರೆ. ಕಳೆದ ಭಾನುವಾರ ಮಧ್ಯಾಹ್ನ ದಿವಾನ್ ಅಲಿ ಅವರನ್ನು ಯಾರಬ್ ನಗರದಲ್ಲಿ ಕೊಲೆ ಮಾಡಲಾಗಿತ್ತು.(ಬಿಬಿಎಂಪಿ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications