ಅಪ್ಪಾಜಿ ಪುತ್ಥಳಿಯಲ್ಲಿ ಜೀವಕಳೆಯಿದೆ: ಶಿವರಾಜ್

ಹೊಸಪೇಟೆಯಿಂದ ಬಳ್ಳಾರಿಗೆ ಆಗಮಿಸಿದ ಚಿತ್ರತಂಡವನ್ನು ಕನ್ನಡಪರ ವಿವಿಧ ಸಂಘಟನೆಗಳ ಮುಖಂಡರು, ಶಾಸಕ ಜಿ. ಸೋಮಶೇಖರರೆಡ್ಡಿ ಹಾಗೂ ಕಾರ್ಪೊರೇಟರ್ಗಳು ಆಹ್ವಾನಿಸಿದ ನಂತರ, ಶ್ರೀ ಕನಕದುರ್ಗಮ್ಮ ದೇವಸ್ಥಾನಕ್ಕೆ ಎಲ್ಲರೂ ಹೊರಟರು.
ಶ್ರದ್ಧೆ - ಭಕ್ತಿಯಿಂದ ಶ್ರೀ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ - ಪ್ರಾರ್ಥನೆ ಸಲ್ಲಿಸಿದ ಚಿತ್ರ ತಂಡ, ದೇವಿಯ ಮಹಾತ್ಮೆಯನ್ನು ಕೇಳಿ ತಿಳಿದುಕೊಂಡರು. ಬಳ್ಳಾರಿ ಮಹಾನಗರ ಪಾಲಿಕೆ ನಿರ್ವಹಿಸುತ್ತಿರುವ ಡಾ. ರಾಜಕುಮಾರ್ ಪಾರ್ಕ್ಗೆ ಆಗಮಿಸಿದ ಚಿತ್ರತಂಡ, ಡಾ. ರಾಜಕುಮಾರ್ ಅವರ ಪುತ್ಥಳಿಗೆ ಹೂಮಾಲೆ ಹಾಕಿ ಗೌರವ ನಮನ ಸಲ್ಲಿಸಿತು.
ಪುತ್ಥಳಿ ಜೀವಂತವಾಗಿದೆ:ಈ ಸಂದರ್ಭದಲ್ಲಿ ಮಾತನಾಡಿದ ಶಿವರಾಜಕುಮಾರ್ ಅವರು, 'ಪುತ್ಥಳಿ ಜೀವಂತವಾಗಿದೆ. ಆಕರ್ಷಕವಾಗಿದೆ. ಈ ಪುತ್ಥಳಿಯನ್ನು ನೋಡಿ ಖುಷಿ ಆಯಿತು. ನನ್ನ ತಂದೆಯವರ ಮುಂದೆಯೇ ನಿಂತಂತೆ ಅನುಭವ ಆಗುತ್ತಿದೆ" ಎಂದು ಹರ್ಷ ವ್ಯಕ್ತಪಡಿಸಿದರು.
'ಮೈಲಾರಿ" ಚಿತ್ರವನ್ನು ಕೆಲ ಹೊತ್ತು ವೀಕ್ಷಿಸಿದ ಶಿವರಾಜಕುಮಾರ್ ಅವರು, ಸಿನಿಮಾ ಥಿಯೇಟರ್ನ ಮುಂಭಾಗದಲ್ಲಿ ಜಮಾವಣೆ ಆಗಿದ್ದ ಸಾವಿರಾರು ಸಂಖ್ಯೆಯ ಅಭಿಮಾನಿಗಳನ್ನು ಉದ್ದೇಶಿಸಿ 'ಮೈಲಾಪುರ ಮೈಲಾರಿ..." ಹಾಡನ್ನು ಹಾಡಿ ಕಲಾಸಕ್ತರು, ಕಲಾ ಪೋಷಕರನ್ನು ರಂಜಿಸಿದರು.
ನಂತರ ಬಳ್ಳಾರಿಯ ಎಪಿಎಂಸಿಯ ಕ್ರಿಯಾಶೀಲ ಕನ್ನಡಿಗರ ವಿವಿಧ ಸಂಘಟನೆಗಳ ಆಹ್ವಾನದ ಮೇರೆಗೆ ಎಪಿಎಂಸಿ ಆವರಣಕ್ಕೆ ಭೇಟಿ ನೀಡಿ ಅಲ್ಲಿಯ ಕನ್ನಡ ಧ್ವಜಾರೋಹಣ ನಡೆಸಿ ಸಂಘಟನೆಗಳು ಹಾಗೂ ಪದಾಧಿಕಾರಿಗಳಿಗೆ ಶುಭ ಹಾರೈಸಿ ಅಭಿನಂದಿಸಿದರು.
ಗ್ಯಾಲರಿ: ಅಪ್ಪಾಜಿ ಪುತ್ಥಳಿಗೆ ನಮಿಸಿದ ಶಿವಣ್ಣ
ಗಡಿನಾಡಾಗಿರುವ ಬಳ್ಳಾರಿಯಲ್ಲಿ ಕನ್ನಡವನ್ನು ಬೆಳೆಸಲಿಕ್ಕೆ ಅಗತ್ಯ ಸಹಕಾರವನ್ನು ನೀಡಲು ಡಾ. ರಾಜಕುಮಾರ್ ಕುಟುಂಬ ಸದಾ ಸಿದ್ಧ. ಈ ನಿಟ್ಟಿನಲ್ಲಿ ಸ್ಥಳೀಯ ಸಂಘಟನೆಗಳು ಕ್ರಿಯಾಶೀಲ ಚಟುವಟಿಕೆಗಳ ಮೂಲಕ ಭಾಷೆಯನ್ನು ಬೆಳೆಸಲು, ಪ್ರತಿಭೆಗಳನ್ನು ಉಳಿಸಲು ಮುಂದಾಗಬೇಕು ಎಂದು ಹೇಳಿದರು.
ಬಳ್ಳಾರಿಯ ರೆಡ್ಡಿ ಸಹೋದರರ ಬ್ಯಾನರ್ನಲ್ಲಿ ಅಪ್ಪು ಪ್ರಸ್ತುತ ದಿನಗಳಲ್ಲಿ ನಟಿಸುವ ಸಾಧ್ಯತೆಗಳಿವೆ. ಮುಂದಿನ ದಿನಗಳಲ್ಲಿ ನಾನು ಕೂಡ ನಟಿಸಬಹುದು ಎಂದ ಅವರು, ಕನ್ನಡಿಗರ ಭಾಷಾ ಸೌಹಾರ್ದತೆಯನ್ನು ಕೊಂಡಾಡಿದರು. ಈ ಸಂದರ್ಭದಲ್ಲಿ ಶಾಸಕ ಜಿ. ಸೋಮಶೇಖರರೆಡ್ಡಿ, ವಿ.ಕೆ. ಬಸಪ್ಪ, ಚಿತ್ರ ತಂಡದ ಕಲಾವಿದರು ಹಾಗೂ ಇನ್ನಿತರರು ಉಪಸ್ಥಿತರಿದ್ದರು. [ಬಳ್ಳಾರಿ]
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications