Get Updates
Get notified of breaking news, exclusive insights, and must-see stories!

ಮೊಯ್ಲಿ ಕೈಗೆ ಮಾನವ ಸಂಪನ್ಮೂಲ ಖಾತೆ?

M Veerappa Moily
ನವದೆಹಲಿ, ಜ. 19 : ಕೊನೆಗೂ ಕೇಂದ್ರ ಮಂತ್ರಿ ಮಂಡಲ ಪುನರ್ ರಚನೆಗೆ ಮಹೂರ್ತ ಫಿಕ್ಸ್ ಆಗಿದೆ. ಇಂದು 5 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ಯುವ ಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಹೊಸಬರಿಗೆ ಅವಕಾಶ ನೀಡಲು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ನಿರ್ಧರಿಸಿದ್ದು, ಅದಕ್ಕೆ ಸೋನಿಯಾ ಗಾಂಧಿ ಕೂಡಾ ಹಸಿರು ನಿಶಾನೆ ತೋರಿಸಿದ್ದಾರೆ.

ಮುಖ್ಯವಾಗಿ ಕೇಂದ್ರ ಕಾನೂನು ಮಂತ್ರಿ ವೀರಪ್ಪ ಮೊಯ್ಲಿ ಅವರಿಗೆ ಖಾತೆ ಬದಲಾವಣೆಯಾಗುವುದು ಬಹುತೇಕ ಖಚಿತವಾಗಿದ್ದು, ಮೊಯ್ಲಿ ಅವರಿಗೆ ಮಾನವ ಸಂಪನ್ಮೂಲ ಖಾತೆ ದೊರೆಯುವ ನಿರೀಕ್ಷೆ ಇದೆ. ಜೊತೆಗೆ ದಕ್ಷರಲ್ಲದ 8 ಸಚಿವರನ್ನು ಸಂಪುಟದಿಂದ ಕೈಬಿಟ್ಟು ಹೊಸಬರಿಗೆ ಅವಕಾಶ ಮಾಡಿಕೊಡುವ ಎಲ್ಲ ಸಾಧ್ಯತೆಗಳು ಇವೆ.

ಹಣಕಾಸು, ಗೃಹ, ರಕ್ಷಣೆ ಮತ್ತು ವಿದೇಶಾಂಗ ಖಾತೆಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ಡಿಎಂಕೆ ಮುಖಂಡ ರಾಜಾ ನಿರ್ಗಮನದಿಂದ ಖಾಲಿಯಾಗಿರುವ ಸ್ಥಾನಕ್ಕೆ ಅದೇ ಪಕ್ಷದ ಸಂಸದರನ್ನು ಸಂಪುಟಕ್ಕೆ ತೆಗೆದುಕೊಳ್ಳುವುದು ಖಚಿತ. ಸಲ್ಮಾನ್ ಖುರ್ಷೀದ್ ಅವರನ್ನು ಕ್ಯಾಬಿನೆಟ್ ದರ್ಜೆ ಸ್ಥಾನಮಾನ ನೀಡುವುದು. ಫೃಥ್ವಿರಾಜ್ ಚೌಹಾನ್ ಮತ್ತು ಶಶಿ ತರೂರ್ ಅವರಿಂದ ತೆರವಾದ ಸ್ಥಾನಕ್ಕೆ ತೀವ್ರ ಪೈಪೋಟಿ ಉಂಟಾಗಿದೆ. ಶಶಿ ತರೂರ್ ಸ್ಥಾನಕ್ಕೆ ಜ್ಯೋತಿರಾಧಿತ್ಯ ಸಿಂಧಿಯಾ ಕಣ್ಣಿಟ್ಟಿದ್ದು, ತೆರೆಮರೆಯಲ್ಲಿ ತೀವ್ರ ಲಾಭಿ ಆರಂಭಿಸಿದ್ದಾರೆ.

ಕರ್ನಾಟಕದ ನಾಲ್ಕು ಮಂದಿ ಕೇಂದ್ರ ಮಂತ್ರಿ ಮಂಡಲದಲ್ಲಿದ್ದಾರೆ. ಎಸ್ ಎಂ ಕೃಷ್ಣ, ಮಲ್ಲಿಕಾರ್ಜನ ಖರ್ಗೆ ಮತ್ತು ವೀರಪ್ಪ ಮೊಯ್ಲಿ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ಹೊಂದಿದ್ದರೆ, ಕೆ ಎಚ್ ಮುನಿಯಪ್ಪ ರಾಜ್ಯ ಖಾತೆಯನ್ನು ಹೊಂದಿದ್ದಾರೆ. ಇದರಲ್ಲಿ ಮೊಯ್ಲಿ ಅವರ ಖಾತೆ ಬದಲಾವಣೆಯಾಗುವ ಸಾಧ್ಯತೆಗಳು ಇವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+