ಸರಕಾರಕ್ಕೆ ಕೇಳುವುದೆ ತಿಮ್ಮಕ್ಕನ ಮೊರೆ?

90ರ ಇಳಿವಯಸ್ಸಿನ ರಾಷ್ಟ್ರೀಯ ನಾಗರಿಕ ಪ್ರಶಸ್ತಿ, ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಮುಂತಾದ ಪ್ರಶಸ್ತಿ ಪಡೆದಿರುವ 'ನಾಡೋಜ' ಸಾಲುಮರದ ತಿಮ್ಮಕ್ಕ ಈಡೇರಿಸದೇ ಇರುವ ತಮ್ಮ ಕೆಲ ಬೇಡಿಕೆಗಳನ್ನು ಆಗ್ರಹಿಸಿ ಇಂದು ಗಾಂಧಿ ರಸ್ತೆಯಲ್ಲಿರುವ ಗಾಂಧಿ ಪ್ರತಿಮೆ ಬಳಿ ಬಿರುಬಿಸಿಲಿನಲ್ಲಿ ಉಪವಾಸ ಸತ್ಯಾಗ್ರಹಕ್ಕೆ ಕುಳಿತಿದ್ದಾರೆ.
ಅವರ ಬೇಡಿಕೆಗಳು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದಲ್ಲಿ ಹೆರಿಗೆ ಆಸ್ಪತ್ರೆ ಕಟ್ಟಿಸಬೇಕು. ಅನಾರೋಗ್ಯದಿಂದ ಬಳಲುತ್ತಿರುವ ತಮಗೆ ಬದುಕು ಸಾಗಿಸಲು ಜೀವನಾಂಶ ನೀಡಬೇಕು. ಬೆಂಗಳೂರಿನಲ್ಲಿ ನೆಲೆಸಲೊಂದು ನಿವೇಶನ ಕೊಡಬೇಕು.
ಹುಲಿಕಲ್ ನಲ್ಲಿ ಆಸ್ಪತ್ರೆ ಮತ್ತು ಬದುಕಿನ ಬಂಡಿ ಸಾಗಲು ತಿಂಗಳಿಗೆ ಹತ್ತು ಸಾವಿರ ರು. ನೀಡಬೇಕೆಂದು ತಿಮ್ಮಕ್ಕ ಹಿಂದೆಯೇ ಆಗ್ರಹಿಸಿದ್ದರು. ನಮ್ಮಂಥ ಬಡಬಗ್ಗರನ್ನು ಸರಕಾರ ಕಾಪಾಡಲಿ. ಜೀವನಾಂಶಕ್ಕೆ ಹಣ ಕೊಡಿ, ಕೆಲಸ ಕೊಟ್ಟು ಕಾಪಾಡಲಿ ಎಂದು ತಿಮ್ಮಕ್ಕ ಸರಕಾರಕ್ಕೆ ಕೇಳಿಕೊಂಡಿದ್ದಾರೆ. ಕೆಲ ಸವಲತ್ತುಗಳನ್ನು ಕೂಡ ರಾಜ್ಯ ಸರಕಾರ ನೀಡಿದೆ.
ಹುಲಿಕಲ್ ನಲ್ಲಿ ರಸ್ತೆಯ ಎರಡೂ ಬದಿಗಳಲ್ಲಿ ನಾಲ್ಕು ಕಿ.ಮೀ. ಉದ್ದಕ್ಕೂ 300ಕ್ಕೂ ಹೆಚ್ಚು ಮರಗಳನ್ನು ನೆಟ್ಟು ಪೋಷಿಸಿ, ಮಕ್ಕಳಂತೆ ಬೆಳೆಸಿ, ಜನತೆಗೆ ನೆರಳಾದ ತಿಮ್ಮಕ್ಕ ಅವರ ಮೇಲಿನ ಬೇಡಿಕೆಗಳನ್ನು ಸರಕಾರ ಈಡೇರಿಸುವುದೆ? ಸಂಕಷ್ಟದ ದಿನಗಳಲ್ಲಿ ಅವರಿಗೆ ಆಸರೆಯಾಗುವುದೆ? [ಸಾಲುಮರದ ತಿಮ್ಮಕ್ಕ]
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications