ಸರಕಾರಕ್ಕೆ ಕೇಳುವುದೆ ತಿಮ್ಮಕ್ಕನ ಮೊರೆ?

90ರ ಇಳಿವಯಸ್ಸಿನ ರಾಷ್ಟ್ರೀಯ ನಾಗರಿಕ ಪ್ರಶಸ್ತಿ, ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಮುಂತಾದ ಪ್ರಶಸ್ತಿ ಪಡೆದಿರುವ 'ನಾಡೋಜ' ಸಾಲುಮರದ ತಿಮ್ಮಕ್ಕ ಈಡೇರಿಸದೇ ಇರುವ ತಮ್ಮ ಕೆಲ ಬೇಡಿಕೆಗಳನ್ನು ಆಗ್ರಹಿಸಿ ಇಂದು ಗಾಂಧಿ ರಸ್ತೆಯಲ್ಲಿರುವ ಗಾಂಧಿ ಪ್ರತಿಮೆ ಬಳಿ ಬಿರುಬಿಸಿಲಿನಲ್ಲಿ ಉಪವಾಸ ಸತ್ಯಾಗ್ರಹಕ್ಕೆ ಕುಳಿತಿದ್ದಾರೆ.
ಅವರ ಬೇಡಿಕೆಗಳು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದಲ್ಲಿ ಹೆರಿಗೆ ಆಸ್ಪತ್ರೆ ಕಟ್ಟಿಸಬೇಕು. ಅನಾರೋಗ್ಯದಿಂದ ಬಳಲುತ್ತಿರುವ ತಮಗೆ ಬದುಕು ಸಾಗಿಸಲು ಜೀವನಾಂಶ ನೀಡಬೇಕು. ಬೆಂಗಳೂರಿನಲ್ಲಿ ನೆಲೆಸಲೊಂದು ನಿವೇಶನ ಕೊಡಬೇಕು.
ಹುಲಿಕಲ್ ನಲ್ಲಿ ಆಸ್ಪತ್ರೆ ಮತ್ತು ಬದುಕಿನ ಬಂಡಿ ಸಾಗಲು ತಿಂಗಳಿಗೆ ಹತ್ತು ಸಾವಿರ ರು. ನೀಡಬೇಕೆಂದು ತಿಮ್ಮಕ್ಕ ಹಿಂದೆಯೇ ಆಗ್ರಹಿಸಿದ್ದರು. ನಮ್ಮಂಥ ಬಡಬಗ್ಗರನ್ನು ಸರಕಾರ ಕಾಪಾಡಲಿ. ಜೀವನಾಂಶಕ್ಕೆ ಹಣ ಕೊಡಿ, ಕೆಲಸ ಕೊಟ್ಟು ಕಾಪಾಡಲಿ ಎಂದು ತಿಮ್ಮಕ್ಕ ಸರಕಾರಕ್ಕೆ ಕೇಳಿಕೊಂಡಿದ್ದಾರೆ. ಕೆಲ ಸವಲತ್ತುಗಳನ್ನು ಕೂಡ ರಾಜ್ಯ ಸರಕಾರ ನೀಡಿದೆ.
ಹುಲಿಕಲ್ ನಲ್ಲಿ ರಸ್ತೆಯ ಎರಡೂ ಬದಿಗಳಲ್ಲಿ ನಾಲ್ಕು ಕಿ.ಮೀ. ಉದ್ದಕ್ಕೂ 300ಕ್ಕೂ ಹೆಚ್ಚು ಮರಗಳನ್ನು ನೆಟ್ಟು ಪೋಷಿಸಿ, ಮಕ್ಕಳಂತೆ ಬೆಳೆಸಿ, ಜನತೆಗೆ ನೆರಳಾದ ತಿಮ್ಮಕ್ಕ ಅವರ ಮೇಲಿನ ಬೇಡಿಕೆಗಳನ್ನು ಸರಕಾರ ಈಡೇರಿಸುವುದೆ? ಸಂಕಷ್ಟದ ದಿನಗಳಲ್ಲಿ ಅವರಿಗೆ ಆಸರೆಯಾಗುವುದೆ? [ಸಾಲುಮರದ ತಿಮ್ಮಕ್ಕ]
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications