ಬಿಬಿಎಂಪಿ ಸದಸ್ಯ ದಿವಾನ್ ಅಲಿ ಹತ್ಯೆ ಐವರ ಬಂಧನ

ಅಪ್ರೋಜ್, ಅಫ್ಜರ್, ಸಲೀಂ ಅಹ್ಮದ್, ನಜೀಂ ಮತ್ತು ಅಯಾಜ್ ಅವರನ್ನು ಬಂಧಿತರು. ದಯಾನಂದ್ ಸಾಗರ್ ಕಾಲೇಜಿನಲ್ಲಿ ಬಿಇ ಓದುತ್ತಿದ್ದ ಅಫ್ಜರ್ ಕಾರಣಾಂತರಗಳಿಂದ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿದ್ದ. ದಿವಾನ್ ಅಲಿಯ ಮನೆಯ ಸಮೀಪವೇ ವಾಸವಿದ್ದ ಆತ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಕೆಲ ದಿನಗಳ ಅಫ್ಜರ್ ಪ್ರೇಯಸಿಯನ್ನು ತನ್ನ ಮನೆಗೆ ಕರೆದುಕೊಂಡು ಬಂದಿದ್ದ.
ಇದನ್ನು ನೋಡಿದ್ದ ದಿವಾನ್ ಅಲಿ ಮತ್ತು ಆತನ ಸಹಚರರು ಅಫ್ಜರ್ ಮನೆ ನುಗ್ಗಿ ಗಲಾಟೆ ಮಾಡಿದ್ದರು. ಅಲ್ಲದೇ ದಿವಾನ್ ಅಲಿ, ಅಫ್ಜರ್ ಗೆ ಬೆದರಿಕೆ ಹಾಕಿ ಮನೆ ಖಾಲಿ ಮಾಡಿಸಿದ್ದ. ಇದರಿಂದ ಕೋಪಗೊಂಡಿದ್ದ ಅಫ್ಜರ್ ಪ್ರತೀಕಾರವಾಗಿ ಇತರೆ ಆರೋಪಿಗಳು ಸೇರಿಕೊಂಡು ಅಲಿಯನ್ನು ಕೊಲೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹೀನ್ ಕೈವಾಡ : ದಿವಾನ್ ಅಲಿ ಹತ್ಯೆ ಹಿಂದೆ ಮಾಹೀನ್ ಕೈವಾಡವಿದೆ. ದಿವಾನ್ ಅಲಿ ಕೊಲೆ ನಡೆದ ಸಮಯದಲ್ಲಿ ಮಾಹೀನ್ ಇದ್ದ ಎಂದು ಅಲಿ ಸಹೋದರ ಅಕ್ಬರ್ ಆರೋಪಿಸಿದ್ದಾರೆ. ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅಕ್ಬರ್, ಪೊಲೀಸರು ಮಾಹೀನ್ ರಕ್ಷಣೆಗೆ ನಿಂತಿದ್ದಾರೆ. ಘಟನೆ ವೇಳೆ ಮಾಹೀನ್ ಸ್ಥಳದಲ್ಲಿದ್ದ ಎಂದು ಸ್ಥಳೀಯರ ಹೇಳಿದರೂ ಪೊಲೀಸರು ಆತನನ್ನು ಬಂಧಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications