ರಾಜ್ಯಪಾಲರು ಹಂಸರಾಜ್ ಅಲ್ಲ ಕಂಸರಾಜ್!

ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಚಾರಿತ್ರ್ಯಹೀನ ರಾಜ್ಯಪಾಲರು. ಬಿಜೆಪಿ ಸರಕಾರವನ್ನು ಬೀಳಿಸುವ ಉದ್ದೇಶದಿಂದಲೇ ಕಾಂಗ್ರೆಸ್ ಜೊತೆಗೂಡಿ ಷಡ್ಯಂತ್ರ ನಡೆಸುತ್ತಿದ್ದಾರೆ. ಅವರ ಯತ್ನಕ್ಕೆ ಖಂಡಿತ ಜಯ ಸಿಗದು ಎಂದು ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.
ಹಂಸರಾಜ್ ಅಲ್ಲ, ಕಂಸರಾಜ್ : ರಾಜ್ಯಪಾಲ ಎಚ್.ಆರ್. ಭಾರದ್ವಜ್ ಅವರು ಹಂಸರಾಜ್ ಅಲ್ಲ, ಕಂಸರಾಜ್' ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ಅವರು ಟೀಕಿಸಿದರು. ಇತಿಹಾಸದಲ್ಲಿ ಕಂಸರಾಜನಿಗೆ ಆದ ಗತಿಯೇ ಹಂಸರಾಜ್ ಅವರಿಗೂ ಆಗಲಿದೆ. ಇದೇ ಫಲಿತಾಂಶ ಕಾಂಗ್ರೆಸ್ಗೂ ಸಿಗಲಿದೆ ಎಂದು ಅವರು ವ್ಯಂಗ್ಯವಾಡಿದರು.
ರಾಜ್ಯಪಾಲರನ್ನು ಕಂಸ ಎಂದು ಜರಿದಿರುವ ಜನಾರ್ದನ ರೆಡ್ಡಿ ಅವರು, ಯಡಿಯೂರಪ್ಪ ಅವರ ವಿರುದ್ಧ ಬಂಡಾಯವೆದ್ದು ಭಿನ್ನಮತೀಯರನ್ನು ಹೈದರಾಬಾದಿನಲ್ಲಿ ಕೂಡಿಹಾಕಿದ್ದ ಸಮಯದಲ್ಲಿ ಇದೇ ಯಡಿಯೂರಪ್ಪನವರನ್ನು ಕಂಸ ಎಂದು 'ಕೊಂಡಾಡಿದ್ದರು'.
ರಾಜ್ಯಪಾಲ ಎಚ್.ಆರ್. ಭಾರಧ್ವಜ್ ಅವರು ಕರ್ನಾಟಕಕ್ಕೆ ಬಂದಾಗಿನಿಂದಲೂ ಒನ್ ಸೈಡೆಡ್ ಆಗಿದ್ದಾರೆ. ಅವರ ಮಾತು, ಭಾಷೆ, ಯೋಚನಾ ದಿಕ್ಕುಗಳು ಎಲ್ಲವೂ ಒಂದು ಪಕ್ಷದ ಪರವಾಗಿವೆ. ಜನತೆ ರಾಜ್ಯಪಾಲರ ಈ ಎಲ್ಲಾ ನಡವಳಿಕೆಗಳನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.
ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕೇವಲ ನಾಲ್ಕು ಜಿಲ್ಲೆಗಳಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಜನರಿಂದ ಸಂಪೂರ್ಣ ನಿರ್ಣಾಮಗೊಳ್ಳಲಿದೆ. ಯಡಿಯೂರಪ್ಪ ಮತ್ತು ಬಿಜೆಪಿ ಪಕ್ಷವನ್ನೇ ಟಾರ್ಗೆಟ್ ಮಾಡಿ ಕಾಂಗ್ರೆಸ್ಸಿಗರು ರಾಜ್ಯಪಾಲರನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಡಿಯೂರಪ್ಪ ಅವರು ನಾಯಕತ್ವ ಬದಲಾವಣೆ ಕುರಿತು ಪ್ರಶ್ನಿಸಿದಾಗ, ನಾಯಕತ್ವ ಪಕ್ಷದ ಆಂತರಿಕ ವಿಚಾರ. ಕಳೆದ ಚುನಾವಣೆಗಳನ್ನು ಬಿಎಸ್ವೈ ಯಕತ್ವದಲ್ಲೇ ನಡೆಸಿ, ಅಧಿಕಾರಕ್ಕೆ ಬಂದಿದ್ದೇವೆ. ಈ ಎಲ್ಲಾ ರಾಜಕೀಯ ಬೆಳವಣಿಗೆಗಳಿಂದ ಕಾಂಗ್ರೆಸ್ ಪಕ್ಷಕ್ಕೇ ನಷ್ಟವಾಗಲಿದೆ ಎಂದು ಹೇಳಿದರು. [ಯಡಿಯೂರಪ್ಪ]
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications