ನಾಯಕತ್ವ ಬದಲಾಯಿಸಲು ರಾಜ್ಯಪಾಲ ಯಾರು?

ಮುಖ್ಯಮಂತ್ರಿ ವಿರುದ್ಧ ಮೊಕದ್ದಮೆ ಹೂಡಲು ಅನುಮತಿ ನೀಡಿದ್ದಕ್ಕಾಗಿ ರಾಜ್ಯಪಾಲರ ವಿರುದ್ಧ ದೂರು ನೀಡಲು ದೆಹಲಿಗೆ ಬಂದಿರುವ ಬಿಎಸ್ ಯಡಿಯೂರಪ್ಪ ಅವರು ಹಂಸರಾಜ್ ಭಾರದ್ವಾಜ್ ಅವರನ್ನು ಭಾನುವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಸರಕಾರ ಉಳಿಯಬೇಕಿದ್ದರೆ ನಾಯಕನನ್ನು ಬದಲಾಯಿಸಿ ಎಂದು ಹೇಳಲು ರಾಜ್ಯಪಾಲರು ಯಾರು ಎಂದು ಕೆಂಡಾಮಂಡಲರಾದ ಯಡಿಯೂರಪ್ಪ, ನಾಯಕತ್ವ ಬದಲಾವಣೆ ಮಾಡುವುದು ಬಿಡುವುದು ಬಿಜೆಪಿ ಹೈಕಮಾಂಡಿಗೆ ಬಿಟ್ಟ ವಿಚಾರ. ಈ ವಿಚಾರದಲ್ಲಿ ಮೂಗು ತೂರಿಸಲು ರಾಜ್ಯಪಾಲರು ಯಾರು? ಅವರು ಕರ್ತವ್ಯ ಮೀರಿ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಶುಕ್ರವಾರ ಬಿಜೆಪಿ ಶಾಸಕರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿದಾಗ, ಸರಕಾರ ಉಳಿಯಬೇಕಿದ್ದರೆ ಯಡಿಯೂರಪ್ಪನವರನ್ನು ಕೆಳಗಿಳಿಸಿ ಬೇರೆಯವರನ್ನು ಪಟ್ಟಕ್ಕೇರಿಸಿ ಎಂದು ರಾಜ್ಯಪಾಲರು ಹೇಳಿದ್ದರು.
'ಚೋರ್' ಬಳಕೆ ಇತಿಹಾಸದಲ್ಲೇ ಮೊದಲು : ನ್ಯಾಯಾಂಗ ತನಿಖೆ ನಡೆದಿರುವಾಗ ಮುಖ್ಯಮಂತ್ರಿ ವಿರುದ್ಧ ಮೊಕದ್ದಮೆ ಹೂಡದಂತೆ ಅವರಿಗೆ ತಿಳಿಸಿತ್ತು. ಅದಕ್ಕೆ ರಾಜ್ಯಪಾಲರು, 'ಕಳ್ಳನೊಬ್ಬ ಪೊಲೀಸರಿಗೆ ದೂರು ನೀಡಿದಂತೆ' ಎಂದು ಹೇಳಿ ಮುಖ್ಯಮಂತ್ರಿಗೆ ಮಾತ್ರವಲ್ಲ ಇಡೀ ನಾಡಿಗೆ ಅವಮಾನ ಮಾಡಿದ್ದಾರೆ. ಮುಖ್ಯಮಂತ್ರಿಯೊಬ್ಬರನ್ನು 'ಚೋರ್' ಎಂಬ ಪದ ಬಳಸಿರುವುದು ಭಾರತದ ಇತಿಹಾಸದಲ್ಲೇ ಇಲ್ಲ. ಇದರಿಂದ ರೊಚ್ಚಿಗೆದ್ದ ನಾಡಿನ ಜನತೆಯೇ ಸ್ವಯಂಪ್ರೇರಿತರಾಗಿ ಬಂದ್ ಆಚರಿಸಿದ್ದರು ಎಂದು ಅವರು ತಿಳಿಸಿದರು.
ಸಂಪುಟದ ನಿರ್ಣಯದ ವಿರುದ್ಧ ನಿರ್ಣಯ ತೆಗೆದುಕೊಂಡಿರುವ ಭಾರದ್ವಾಜ್ ಅವರು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದು, ಅವರ ವಿರುದ್ಧ ಕೇಂದ್ರ ಗೃಹ ಸಚಿವ ಪಿ. ಚಿದಂಬರಂ ಅವರಿಗೆ ಸೋಮವಾರ ದೂರು ಸಲ್ಲಿಸುವುದಾಗಿ ಅವರು ಹೇಳಿದರು. ರಾಜ್ಯಪಾಲರನ್ನು ಚಿದಂಬರಂ ಬೆಂಬಲಿಸಿದ್ದರೂ, ಅವರ ಕಾರ್ಯವೈಖರಿ ಬಗ್ಗೆ ವಿವರ ನೀಡುವುದು ನನ್ನ ಕರ್ತವ್ಯ ಎಂದು ಯಡಿಯೂರಪ್ಪ ನುಡಿದರು.
ಶಿವಮೊಗ್ಗದ ಸಂಸದ, ಮಗ ರಾಘವೇಂದ್ರ ಮತ್ತಿತರ ರಾಜ್ಯದ ಬಿಜೆಪಿ ನಾಯಕರ ಜೊತೆಗೆ ದೆಹಲಿಗೆ ಬಂದಿರುವ ಯಡಿಯೂರಪ್ಪನವರು ಸೋಮವಾರ ಪಕ್ಷದ ಹಿರಿಯ ನಾಯಕರು ಮತ್ತು ಸಂಸತ್ ಸದಸ್ಯರನ್ನು ಭೇಟಿ ಮಾಡಿ ನಂತರ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರನ್ನೂ ಭೇಟಿ ಮಾಡಿ ರಾಜ್ಯಪಾಲರ ವಿರುದ್ಧ ದೂರು ನೀಡಲಿರುವುದಾಗಿ ಹೇಳಿದರು. [ಯಡಿಯೂರಪ್ಪ]
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications