ನಾಯಕತ್ವ ಬದಲಾಯಿಸಲು ರಾಜ್ಯಪಾಲ ಯಾರು?

ಮುಖ್ಯಮಂತ್ರಿ ವಿರುದ್ಧ ಮೊಕದ್ದಮೆ ಹೂಡಲು ಅನುಮತಿ ನೀಡಿದ್ದಕ್ಕಾಗಿ ರಾಜ್ಯಪಾಲರ ವಿರುದ್ಧ ದೂರು ನೀಡಲು ದೆಹಲಿಗೆ ಬಂದಿರುವ ಬಿಎಸ್ ಯಡಿಯೂರಪ್ಪ ಅವರು ಹಂಸರಾಜ್ ಭಾರದ್ವಾಜ್ ಅವರನ್ನು ಭಾನುವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಸರಕಾರ ಉಳಿಯಬೇಕಿದ್ದರೆ ನಾಯಕನನ್ನು ಬದಲಾಯಿಸಿ ಎಂದು ಹೇಳಲು ರಾಜ್ಯಪಾಲರು ಯಾರು ಎಂದು ಕೆಂಡಾಮಂಡಲರಾದ ಯಡಿಯೂರಪ್ಪ, ನಾಯಕತ್ವ ಬದಲಾವಣೆ ಮಾಡುವುದು ಬಿಡುವುದು ಬಿಜೆಪಿ ಹೈಕಮಾಂಡಿಗೆ ಬಿಟ್ಟ ವಿಚಾರ. ಈ ವಿಚಾರದಲ್ಲಿ ಮೂಗು ತೂರಿಸಲು ರಾಜ್ಯಪಾಲರು ಯಾರು? ಅವರು ಕರ್ತವ್ಯ ಮೀರಿ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಶುಕ್ರವಾರ ಬಿಜೆಪಿ ಶಾಸಕರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿದಾಗ, ಸರಕಾರ ಉಳಿಯಬೇಕಿದ್ದರೆ ಯಡಿಯೂರಪ್ಪನವರನ್ನು ಕೆಳಗಿಳಿಸಿ ಬೇರೆಯವರನ್ನು ಪಟ್ಟಕ್ಕೇರಿಸಿ ಎಂದು ರಾಜ್ಯಪಾಲರು ಹೇಳಿದ್ದರು.
'ಚೋರ್' ಬಳಕೆ ಇತಿಹಾಸದಲ್ಲೇ ಮೊದಲು : ನ್ಯಾಯಾಂಗ ತನಿಖೆ ನಡೆದಿರುವಾಗ ಮುಖ್ಯಮಂತ್ರಿ ವಿರುದ್ಧ ಮೊಕದ್ದಮೆ ಹೂಡದಂತೆ ಅವರಿಗೆ ತಿಳಿಸಿತ್ತು. ಅದಕ್ಕೆ ರಾಜ್ಯಪಾಲರು, 'ಕಳ್ಳನೊಬ್ಬ ಪೊಲೀಸರಿಗೆ ದೂರು ನೀಡಿದಂತೆ' ಎಂದು ಹೇಳಿ ಮುಖ್ಯಮಂತ್ರಿಗೆ ಮಾತ್ರವಲ್ಲ ಇಡೀ ನಾಡಿಗೆ ಅವಮಾನ ಮಾಡಿದ್ದಾರೆ. ಮುಖ್ಯಮಂತ್ರಿಯೊಬ್ಬರನ್ನು 'ಚೋರ್' ಎಂಬ ಪದ ಬಳಸಿರುವುದು ಭಾರತದ ಇತಿಹಾಸದಲ್ಲೇ ಇಲ್ಲ. ಇದರಿಂದ ರೊಚ್ಚಿಗೆದ್ದ ನಾಡಿನ ಜನತೆಯೇ ಸ್ವಯಂಪ್ರೇರಿತರಾಗಿ ಬಂದ್ ಆಚರಿಸಿದ್ದರು ಎಂದು ಅವರು ತಿಳಿಸಿದರು.
ಸಂಪುಟದ ನಿರ್ಣಯದ ವಿರುದ್ಧ ನಿರ್ಣಯ ತೆಗೆದುಕೊಂಡಿರುವ ಭಾರದ್ವಾಜ್ ಅವರು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದು, ಅವರ ವಿರುದ್ಧ ಕೇಂದ್ರ ಗೃಹ ಸಚಿವ ಪಿ. ಚಿದಂಬರಂ ಅವರಿಗೆ ಸೋಮವಾರ ದೂರು ಸಲ್ಲಿಸುವುದಾಗಿ ಅವರು ಹೇಳಿದರು. ರಾಜ್ಯಪಾಲರನ್ನು ಚಿದಂಬರಂ ಬೆಂಬಲಿಸಿದ್ದರೂ, ಅವರ ಕಾರ್ಯವೈಖರಿ ಬಗ್ಗೆ ವಿವರ ನೀಡುವುದು ನನ್ನ ಕರ್ತವ್ಯ ಎಂದು ಯಡಿಯೂರಪ್ಪ ನುಡಿದರು.
ಶಿವಮೊಗ್ಗದ ಸಂಸದ, ಮಗ ರಾಘವೇಂದ್ರ ಮತ್ತಿತರ ರಾಜ್ಯದ ಬಿಜೆಪಿ ನಾಯಕರ ಜೊತೆಗೆ ದೆಹಲಿಗೆ ಬಂದಿರುವ ಯಡಿಯೂರಪ್ಪನವರು ಸೋಮವಾರ ಪಕ್ಷದ ಹಿರಿಯ ನಾಯಕರು ಮತ್ತು ಸಂಸತ್ ಸದಸ್ಯರನ್ನು ಭೇಟಿ ಮಾಡಿ ನಂತರ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರನ್ನೂ ಭೇಟಿ ಮಾಡಿ ರಾಜ್ಯಪಾಲರ ವಿರುದ್ಧ ದೂರು ನೀಡಲಿರುವುದಾಗಿ ಹೇಳಿದರು. [ಯಡಿಯೂರಪ್ಪ]
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications