ಧ್ವಜಾರೋಹಣಕ್ಕೆ ಹೊರಟವರಿಗೆ ಮಧ್ಯದಲ್ಲೇ ಕೆಂಪು ಬಾವುಟ

ಯುವಮೋರ್ಚಾ ನಾಯಕ ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ ಸುಮಾರು 2000 ಕಾರ್ಯಕರ್ತರು ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಜಮ್ಮುವಿಗೆ ತೆರಳುತ್ತಿದ್ದರು. ಕಾರ್ಯಕರ್ತರೆಲ್ಲ ಗಾಢ ನಿದ್ರೆಯಲ್ಲಿದ್ದಾಗ ಮಧ್ಯರಾತ್ರಿ 1.30ರ ಸುಮಾರಿಗೆ ಅವರಿದ್ದ ಬೋಗಿ ಕಳಚಿ ಬೆಂಗಳೂರಿಗೆ ಮರಳುತ್ತಿದ್ದ ರೈಲಿನೊಂದಿಗೆ ಜೋಡಿಸಿ ವಾಪಸ್ ಕಳಿಸಲಾಗಿದೆ.
ಬಿಜೆಪಿಯ ಅಭಿಯಾನವನ್ನು ಮಹಾರಾಷ್ಟ್ರದ ಅಹ್ಮದ್ ನಗರದ ನಿಲ್ದಾಣದಲ್ಲಿ ಕತ್ತರಿಸಲಾಗಿದ್ದು, ಸೊಲ್ಲಾಪುರದ ಅಕ್ಕಲಕೋಟೆ ಬಳಿ ರೈಲು ಇಂದು ಬೆಳಿಗ್ಗೆ ಬಂದಾಗಲೇ ಏನಾಗಿದೆ ಎಂದು ಬಿಜೆಪಿ ಕಾರ್ಯಕರ್ತರಿಗೆ ತಿಳಿದಿದೆ. ಸದ್ಯಕ್ಕೆ ಗಾಣಗಾಪುರದಲ್ಲಿ ನಿಂತಿರುವ ರೈಲು ಬೆಂಗಳೂರಿಗೆ ವಾಪಸ್ ಬರುತ್ತಿದೆ.
ಭಾರೀ ಪ್ರತಿಭಟನೆ : ವಿಷಯ ತಿಳಿಯುತ್ತಿದ್ದಂತೆ ರೊಚ್ಚಿಗೆದ್ದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗಿಳಿದಿದ್ದು, ಗಾಣಗಾಪುರದ ರೈಲು ನಿಲ್ದಾಣದಲ್ಲಿ ದಾಂಧಲೆಗೆ ಇಳಿದಿದ್ದಾರೆ. ಅಲ್ಲಿನ ರೈಲು ನಿಲ್ದಾಣದ ಗಾಜುಗಳು ಪುಡಿಪುಡಿ ಮಾಡಲಾಗಿದೆ. ಗುಲಬರ್ಗಾದಲ್ಲಿ ಕೂಡ ಬಿಜೆಪಿ ಬೆಂಬಲಿಗರು ಸೇರಿದ್ದು, ಹಿಂಸಾಚಾರ ನಡೆಯುವ ಸಾಧ್ಯಗಳಿರುವುದರಿಂದ ಗುಲಬರ್ಗಾದಲ್ಲಿ ರೈಲು ನಿಲ್ಲಿಸದೆ ಓಡಿಸಲಾಗುವುದೆಂದು ತಿಳಿದುಬಂದಿದೆ.
ಯಡಿಯೂರಪ್ಪ ಆಕ್ರೋಶ : ಇಂದು ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಹಾರಾಷ್ಟ್ರ ಸರಕಾರ ಬಿಜೆಪಿ ಕಾರ್ಯಕರ್ತರನ್ನು ವಾಪಸ್ ಕಳಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಧ್ವಜ ಹಾರಿಸುವ ಹಕ್ಕು ಪ್ರತಿ ಭಾರತೀಯನಿಗೂ ಇದೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ತಮ್ಮ ಪ್ರತಿರೋಧವನ್ನು ಪ್ರಧಾನಿಗೂ ತಲುಪಿಸುವುದಾಗಿ ಅವರು ನುಡಿದರು. [ರಾಷ್ಟ್ರಧ್ವಜ]
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications