ಧ್ವಜಾರೋಹಣಕ್ಕೆ ಹೊರಟವರಿಗೆ ಮಧ್ಯದಲ್ಲೇ ಕೆಂಪು ಬಾವುಟ

ಯುವಮೋರ್ಚಾ ನಾಯಕ ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ ಸುಮಾರು 2000 ಕಾರ್ಯಕರ್ತರು ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಜಮ್ಮುವಿಗೆ ತೆರಳುತ್ತಿದ್ದರು. ಕಾರ್ಯಕರ್ತರೆಲ್ಲ ಗಾಢ ನಿದ್ರೆಯಲ್ಲಿದ್ದಾಗ ಮಧ್ಯರಾತ್ರಿ 1.30ರ ಸುಮಾರಿಗೆ ಅವರಿದ್ದ ಬೋಗಿ ಕಳಚಿ ಬೆಂಗಳೂರಿಗೆ ಮರಳುತ್ತಿದ್ದ ರೈಲಿನೊಂದಿಗೆ ಜೋಡಿಸಿ ವಾಪಸ್ ಕಳಿಸಲಾಗಿದೆ.
ಬಿಜೆಪಿಯ ಅಭಿಯಾನವನ್ನು ಮಹಾರಾಷ್ಟ್ರದ ಅಹ್ಮದ್ ನಗರದ ನಿಲ್ದಾಣದಲ್ಲಿ ಕತ್ತರಿಸಲಾಗಿದ್ದು, ಸೊಲ್ಲಾಪುರದ ಅಕ್ಕಲಕೋಟೆ ಬಳಿ ರೈಲು ಇಂದು ಬೆಳಿಗ್ಗೆ ಬಂದಾಗಲೇ ಏನಾಗಿದೆ ಎಂದು ಬಿಜೆಪಿ ಕಾರ್ಯಕರ್ತರಿಗೆ ತಿಳಿದಿದೆ. ಸದ್ಯಕ್ಕೆ ಗಾಣಗಾಪುರದಲ್ಲಿ ನಿಂತಿರುವ ರೈಲು ಬೆಂಗಳೂರಿಗೆ ವಾಪಸ್ ಬರುತ್ತಿದೆ.
ಭಾರೀ ಪ್ರತಿಭಟನೆ : ವಿಷಯ ತಿಳಿಯುತ್ತಿದ್ದಂತೆ ರೊಚ್ಚಿಗೆದ್ದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗಿಳಿದಿದ್ದು, ಗಾಣಗಾಪುರದ ರೈಲು ನಿಲ್ದಾಣದಲ್ಲಿ ದಾಂಧಲೆಗೆ ಇಳಿದಿದ್ದಾರೆ. ಅಲ್ಲಿನ ರೈಲು ನಿಲ್ದಾಣದ ಗಾಜುಗಳು ಪುಡಿಪುಡಿ ಮಾಡಲಾಗಿದೆ. ಗುಲಬರ್ಗಾದಲ್ಲಿ ಕೂಡ ಬಿಜೆಪಿ ಬೆಂಬಲಿಗರು ಸೇರಿದ್ದು, ಹಿಂಸಾಚಾರ ನಡೆಯುವ ಸಾಧ್ಯಗಳಿರುವುದರಿಂದ ಗುಲಬರ್ಗಾದಲ್ಲಿ ರೈಲು ನಿಲ್ಲಿಸದೆ ಓಡಿಸಲಾಗುವುದೆಂದು ತಿಳಿದುಬಂದಿದೆ.
ಯಡಿಯೂರಪ್ಪ ಆಕ್ರೋಶ : ಇಂದು ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಹಾರಾಷ್ಟ್ರ ಸರಕಾರ ಬಿಜೆಪಿ ಕಾರ್ಯಕರ್ತರನ್ನು ವಾಪಸ್ ಕಳಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಧ್ವಜ ಹಾರಿಸುವ ಹಕ್ಕು ಪ್ರತಿ ಭಾರತೀಯನಿಗೂ ಇದೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ತಮ್ಮ ಪ್ರತಿರೋಧವನ್ನು ಪ್ರಧಾನಿಗೂ ತಲುಪಿಸುವುದಾಗಿ ಅವರು ನುಡಿದರು. [ರಾಷ್ಟ್ರಧ್ವಜ]
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications