ರಾಜ್ಯಪಾಲರನ್ನು ವಾಪಸ್ ಕರೆಸಲು ರಾಷ್ಟ್ರಪತಿಗೆ ಆಗ್ರಹ

ಭೂ ಹಗರಣ ಮತ್ತಿತರ ಆರೋಪಗಳಿಗೆ ಸಂಬಂಧಿಸಿದಂತೆ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ 15 ಪ್ರಕರಣಗಳಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಲು ಹಂಸರಾಜ್ ಭಾರದ್ವಾಜ್ ಅನುಮತಿ ನೀಡಿದ ಮೇಲೆ ರಾಜ್ಯದಲ್ಲಿ ಹೊತ್ತಿಕೊಂಡ ಹೊಗೆ ಈಗ ನವದೆಹಲಿ ತಲುಪಿ, ರಾಷ್ಟ್ರಪತಿ ಅಂಗಳವನ್ನೂ ತಲುಪಿದೆ.
ಭಾರತೀಯ ಜನತಾ ಪಕ್ಷದ ಹಿರಿಯ ನಾಯಕರುಗಳಾದ ಲಾಲ್ ಕೃಷ್ಣ ಅಡ್ವಾಣಿ, ಸುಷ್ಮಾ ಸ್ವರಾಜ್, ವೆಂಕಯ್ಯ ನಾಯ್ಡು, ಅರುಣ್ ಜೇಟ್ಲಿ ಮತ್ತಿತರ ನಾಯಕರು, ಕರ್ನಾಟಕದ ಸಂಸದರು ಮತ್ತು ಬಿಎಸ್ ಯಡಿಯೂರಪ್ಪ ಅವರೊಡಗೂಡಿ ಹಂಸರಾಜ್ ಅವರ ವಿರುದ್ಧ ದೂರು ಸಲ್ಲಿಸಿದರು.
ವಿಡಿಯೋ : ರಾಜ್ಯಪಾಲರ ಕಿತ್ತೊಗೆಯಲು ಬಿಜೆಪಿ ಆಗ್ರಹ
ಹಂಸರಾಜ್ ಭಾರದ್ವಾಜ್ ಅವರು ರಾಜ್ಯಪಾಲ ಹುದ್ದೆಯಲ್ಲಿರುವುದೇ ಅವಮಾನ. ಅವರೆಂದೂ ಸಂವಿಧಾನಕ್ಕೆ ಬದ್ಧರಾಗಿ ವರ್ತಿಸಿಲ್ಲ. ಕಾಂಗ್ರೆಸ್ ಪಕ್ಷಪಾತಿಯಂತೆ ವರ್ತಿಸಿ ಕರ್ನಾಟಕಕ್ಕೆ ಭಾರವಾಗಿರುವ ಭಾರದ್ವಾಜ್ ಅವರನ್ನು ಕೂಡಲೆ ವಾಪಸ್ ಕರೆಸಿಕೊಳ್ಳಬೇಕು ಎಂದು ಲಾಲ್ ಕೃಷ್ಣ ಅಡ್ವಾಣಿ ಅವರು ಪ್ರತಿಭಾ ಪಾಟೀಲ್ ಅವರನ್ನು ಕೋರಿದ್ದಾರೆ.
ವೆಂಕಯ್ಯ ನಾಯ್ಡು ಅವರು ಕೂಡ ಹಂಸರಾಜ್ ಭಾರದ್ವಾಜ್ ಅವರ ಕಾರ್ಯ ವೈಖರಿಯನ್ನು, ನಂತರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದರಲ್ಲದೆ ಹಂಸರಾಜ್ ಅವರು ಮೊದಲಿನಿಂದಲೂ ಕಾಂಗ್ರೆಸ್ ನ ದಾಳವಾಗಿ ಆಡಳಿತ ನಡೆಸುತ್ತಿದ್ದಾರೆ. ಅಭಿವೃದ್ಧಿಯನ್ನು ಸಹಿಸದೆ ಬಿಜೆಪಿ ಸರಕಾರವನ್ನು ಕೆಳಗಿಳಿಸುವ ಏಕೈಕ ಉದ್ದೇಶದಿಂದ ನಿಮಯ ಮೀರಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ನಾಯಕರು ರಾಷ್ಟ್ರಪತಿಯನ್ನು ಭೇಟಿ ಮಾಡಿ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಲು ಆಗ್ರಹಿಸಿರುವುದು ಕಾಂಗ್ರೆಸ್ ಮೇಲೆ ಒತ್ತಡ ಹೇರುವ ತಂತ್ರದ ಒಂದು ಭಾಗವಾಗಿದೆಯಷ್ಟೆ. ಕಾಂಗ್ರೆಸ್ ನ ರಬ್ಬರ್ ಸ್ಟಾಂಪ್ ಆಗಿರುವ ಪ್ರತಿಭಾ ಪಾಟೀಲ್ ಅವರನ್ನು ಭೇಟಿಯಾಗಿರುವುದು ಕಾಂಗ್ರೆಸ್ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡಬೇಕಿದೆ. [ಯಡಿಯೂರಪ್ಪ]
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications