ಗಾನದಲ್ಲಿ ಲೀನವಾದ ಗಂಧರ್ವ ಭೀಮಸೇನ ಜೋಶಿ

ಪುಣೆಯಲ್ಲಿರುವ ಅವರ ನಿವಾಸದ ಮುಂದೆ ಬೆಳಗಿನಿಂದಲೇ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದು ಅಂತಿಮ ದರ್ಶನ ಪಡೆದರು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ಎಸ್.ಎಂ.ಕೃಷ್ಣ ಮತ್ತು ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಹಾರಾಷ್ಟ್ರದ ಮುಖ್ಯಮಂತ್ರಿ ಅಶೋಕ್ ಚವ್ಹಾಣ್ ಮೊದಲಾದವರು ಅಂತಿಮ ದರ್ಶನ ಪಡೆದು ಗಾನಗಂಧರ್ವರನ್ನು ನೆನೆದರು.
ಗಣ್ಯರ ಕಂಬನಿ : ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಅದ್ಭುತ ಸಂಗೀತ ಸುಧೆ ಹರಿಸಿದ ಗದಗದ ಮಣ್ಣಿನ ಮಗ ಜೋಶಿ ಅವರನ್ನು ಕಳೆದುಕೊಂಡಿದ್ದಕ್ಕೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಅವರ ಗೌರವಾರ್ಥವಾಗಿ ಇಂದು ಶೋಕಾಚರಣೆ ಮಾಡುತ್ತಿರುವುದಾಗಿ ಕರ್ನಾಟಕ ಸರಕಾರ ತಿಳಿಸಿದೆ.
ರಾಜ್ಯಪಾಲ ಹಂಸರಾಜ್ ಅವರು, 'ಜೋಶಿ ಅವರ ನಿಧನದಿಂದಾಗಿ ಸರ್ವಸ್ವವನ್ನೂ ಕಳೆದುಕೊಂಡಂತೆ ಭಾಸವಾಗುತ್ತಿದೆ. ಕಿರಾಣಾ ಘರಾಣಾದ ಬಾದಷಾ ಅವರಾಗಿದ್ದರು. ತಮ್ಮ ಗಂಧರ್ವಸ್ವರೂಪಿ ಕಂಠದಿಂದ ವಿಶ್ವದಾದ್ಯಂತ ಪಂಡಿತರು ಮತ್ತು ಪಾಮರರನ್ನು ಮೂಕವಿಸ್ಮಿತರನ್ನಾಗಿ ಮಾಡುತ್ತಿದ್ದರು' ಎಂದು ಕಂಬನಿ ಮಿಡಿದಿದ್ದಾರೆ.
ದೆಹಲಿಯಲ್ಲಿ ಪ್ರತಿಭಾ ಪಾಟೀಲರನ್ನು ಭೇಟಿಯಾಗಿ ರಾಜ್ಯಪಾಲರ ವಿರುದ್ಧ ತಮ್ಮ ಅಹವಾಲು ಸಲ್ಲಿಸಿದ ನಂತರ, ಜೋಶಿ ಅವರ ಅಂತ್ಯಕ್ರಿಯೆಗಾಗಿ ಪುಣೆಗೆ ತೆರಳುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಇಡೀ ದೇಶ ಕಂಡ ಅತ್ಯಂತ ಪ್ರತಿಭಾನ್ವಿತ ಗಾಯಕನನ್ನು ಕಳೆದುಕೊಂತಾಗಿದೆ ಎಂದು ಶೋಕ ವ್ಯಕ್ತಪಡಿಸಿದ್ದಾರೆ.
ಜೋಶಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿರುವ ವಾರ್ತಾ ಇಲಾಖೆಯ ನಿರ್ದೇಶಕ ಮುದ್ದುಮೋಹನ್ ಅವರು, ಭಾರತೀಯ ಸಂಗೀತ ಲೋಕದ ಧ್ರುವತಾರೆ, ಭಾರತರತ್ನ ಭೀಮಸೇನ ಜೋಶಿ ಅವರ ನಿಧನದಿಂದ ಸಂಗೀತದ ಉಸಿರೇ ನಿಂತಂತಾಗಿದೆ ಎಂದು ಅಂಜಲಿ ಸುರಿಸಿದ್ದಾರೆ. ಜೋಶಿ ಅವರ ಅಂತ್ಯದಿಂದಾಗಿ ಸಂಗೀತ ಲೋಕದ ಕಂಠವೇ ಬಿಗಿದುಕೊಂಡಂತಾಗಿದೆ. ಪ್ರಧಾನಿ ಡಾ. ಮನಮೋಹನ ಸಿಂಗ್, ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಕೂಡ ವಿಶ್ವ ಸಂಗೀತ ಲೋಕಕ್ಕೆ ಭೀಮಸೇನ ಜೋಶಿ ಅವರು ನೀಡಿರುವ ಕೊಡುಗೆಯನ್ನು ಕೊಂಡಾಡಿದ್ದಾರೆ.
ಖ್ಯಾತ ಸಿತಾರ ವಾದಕ ಪಂಡಿತ ರವಿಶಂಕರ್ ಅವರು, 'ಜೋಶಿ ಅವರು ನಿರ್ವಿವಾದವಾಗಿ ದೇಶದ ಅತ್ಯಂತ ಜನಪ್ರಿಯ ಸಂಗೀತಗಾರರಾಗಿದ್ದರು. ದೇಶದಲ್ಲಿ ಮಾತ್ರವಲ್ಲ ವಿದೇಶದಲ್ಲಿಯೂ ಅಪಾರ ಅಭಿಮಾನಿಗಳ ಪ್ರೀತಿ ಗಳಿಸಿದ್ದರು. ಅವರು ಅನಾರೋಗ್ಯದಿಂದ ಬಳಲುತ್ತಿರುವುದು ತಿಳಿದಿದ್ದರೂ ಅವರ ಸಾವು ಅನಿರೀಕ್ಷಿತವಾಗಿದೆ ಮತ್ತು ತೀವ್ರ ಆಘಾತ ತಂದಿದೆ' ಎಂದು ಶೋಕ ಸಂದೇಶ ಕಳಿಸಿದ್ದಾರೆ.
ಬಹುಮುಖ ವ್ಯಕ್ತಿತ್ವ : ಭಾವಲೋಕದಲ್ಲಿ ತೇಲಾಡುವಂತೆ ಸಂಗೀತಸುಧೆ ಹರಿಸುವುದರ ಜೊತೆಗೆ ಭೀಮಸೇನ ಜೋಶಿ ಅವರು ಬಹುಮುಖ ವ್ಯಕ್ತಿತ್ವದವರಾಗಿದ್ದರು. ನಿರಂತರ ಸಂಗೀತ ತಾಲೀಮಿನ ಜೊತೆಗೆ ದೇಹದಾರ್ಧ್ಯ ಬೆಳೆಸುವ ತಾಲೀಮು ಕೂಡ ನಡೆಸುತ್ತಿದ್ದರು. ವೇಗವಾಗಿ ಸಾಗುವ ಕಾರುಗಳೆಂದರೆ ಅವರಿಗೆ ಎಲ್ಲಿಲ್ಲದ ಪ್ರೀತಿ. ಕಣ್ಣುಚ್ಚಿ ಸಂಗೀತದಲ್ಲಿ ಮುಳುಗುವಂತೆ ಕಾರು ಓಡಿಸುವಾಗ ಕೂಡ ಯರ್ರಾಬಿರ್ರಿ ಓಡಿಸುತ್ತಿದ್ದರು. ಒಂದೆರಡು ಬಾರಿ ಭಾರೀ ಅಪಘಾತದಿಂದ ಕೂಡ ಪಾರಾಗಿದ್ದರು.
ಜೊತೆಗೆ ಉತ್ತಮ ಈಜುಪಟುವೂ ಆಗಿದ್ದರು ಜೋಶಿಯವರು. ಯೋಗ ಮತ್ತು ಫುಟ್ಬಾಲ್ ಆಟದಲ್ಲಿ ಅಪಾರ ಆಸಕ್ತಿ ಬೆಳೆಸಿಕೊಂಡಿದ್ದರು. ಕುಡಿತ ತಮ್ಮ ವಿಕ್ನೆಸ್ಸು ಎಂದು ಒಪ್ಪಿಕೊಂಡಿದ್ದ ಅವರು ಮತ್ತಿನಲ್ಲಿದ್ದಾಗ ಅಷ್ಟೇ ಅದ್ಭುತವಾಗಿ ಹಾಡುತ್ತಿದ್ದರೆಂಬುದು ಕೂಡ ಅಷ್ಟೇ ಸತ್ಯ. [ಭೀಮಸೇನ ಜೋಶಿ]
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications