ಇಂದು ಭದ್ರಾವತಿ ಬಂದ್ ಅಂತೆ... ಹೌದಾ?

ಭದ್ರಾವತಿ ನಗರ ಹಾಗೂ ತಾಲ್ಲೂಕಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಸಾಕಾಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡಿದೆ. ಇದನ್ನು ಸಹಿಸದ ಕೆಲವು ಪಟ್ಟಭದ್ರ ರಾಜಕೀಯ ಹಿತಾಸಕ್ತಿಗಳು ಅನಗತ್ಯವಾಗಿ ಗೊಂದಲ ಉಂಟುಮಾಡಿ ಕಾರ್ಮಿಕರನ್ನು ಹಾಗೂ ನಾಗರೀಕರನ್ನು ದಿಕ್ಕು ತಪ್ಪಿಸಲು ಹೊರಟಿದ್ದಾರೆ ಎಂದು ಸ್ಥಳಿಯ ಶಾಸಕ ಬಿ.ಕೆ.ಸಂಮೇಶ್ವರ್ರವರನ್ನು ಪರೋಕ್ಷವಾಗಿ ಟೀಕಿಸಿದರು.
ಎಂಪಿಎಂ ಹಾಗೂ ವಿಎಸ್ ಐಎಲ್ ಕಾರಣ : ಭದ್ರಾವತಿಯ ಹಾಗೂ ರಾಜ್ಯದ ಪ್ರತಿಷ್ಠೆಯ ಕಾರ್ಖಾನೆಗಳಲ್ಲಿ ಒಂದಾದ ಎಂಪಿಎಂ ಕಾಗದ ಮತ್ತು ಸಕ್ಕರೆ ಕಾರ್ಖಾನೆಯು ರಾಜ್ಯ ಸರ್ಕಾರ ಹಾಗೂ ಎಂಪಿಎಂನ ಅಧ್ಯಕ್ಷರ ಪ್ರಯತ್ನದಿಂದಾಗಿ ಅಭಿವೃದ್ಧಿಯ ಕಡೆಗೆ ಮುನ್ನಡೆಯುತ್ತಿದೆ. ಕಾರ್ಖಾನೆಯ ನವೀಕರಣಕ್ಕೆ ರಾಜ್ಯ ಸರ್ಕಾರ ರೂ. 135 ಕೋಟಿಯ ಬ್ಯಾಂಕ್ ಗ್ಯಾರಂಟಿಯನ್ನು ನೀಡಿದೆ. ಎಂಪಿಎಂ ಕಾರ್ಖಾನೆ ಇತ್ತೀಚೆಗೆ ರೋಗಗ್ರಸ್ತ ಉದ್ದಿಮೆ ಪಟ್ಟಿಯಲ್ಲಿ ಸೇರುವ ಹಂತದಲ್ಲಿತ್ತು. ಕಾರ್ಮಿಕ ಹಿತಾರಕ್ಷಣೆಗೋಸ್ಕರ ಕಾರ್ಖಾನೆಯನ್ನು ಅಭಿವೃದ್ಧಿಪಡಿಸುವ ಎಲ್ಲಾ ಯೋಜನೆಯನ್ನು ರಾಜ್ಯಸರ್ಕಾರ ಕೈಗೊಂಡಿದೆ.
ಜೊತೆಗೆ ಭದ್ರಾವತಿ ನಗರದ ನಾಗರೀಕರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಹತ್ತು ಹಲವು ಅಭಿವೃದ್ಧಿ ಕಾರ್ಯವನ್ನು ಮಾಡುತ್ತಿದೆ. ಇದಕ್ಕಾಗಿ 5 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಒಂದು ಕೋಟಿ ರೂ. ವೆಚ್ಚದಲ್ಲಿ ಎಂಪಿಎಂ ಕಾರ್ಖಾನೆಯಿಂದ ವಿಐಎಸ್ಎಲ್ ಕಾರ್ಖಾನೆಯವರೆಗೆ ರಸ್ತೆ ಅಭಿವೃದ್ಧಿಯನ್ನು ಮಾಡಲಾಗಿದೆ. ವಿಐಎಸ್ಎಲ್ ಕಾರ್ಮಿಕರ ಹಿತಾದೃಷ್ಟಿಯಿಂದ ರಾಜ್ಯ ಸರ್ಕಾರ ಗಣಿ ಮಂಜೂರಾತಿಗೆ ಎಲ್ಲಾ ರೀತಿಯ ಪ್ರಕ್ರಿಯೆಯನ್ನು ಕೈಗೊಂಡಿದೆ. ಕೇಂದ್ರದ ಜೊತೆ ಈಗಾಗಲೇ ಪ್ರಕ್ರಿಯೆಯೂ ಕೊನೆಯ ಹಂತದಲ್ಲಿದ್ದು, 800 ರಿಂದ 1000 ಕೋಟಿ ಬಂಡವಾಳ ಹೂಡಲು ಕೇಂದ್ರ ಸರ್ಕಾರ ಮುಂದೆ ಬಂದಿದೆ.
ಕುಡಿಯುವ ನೀರಿಗಾಗಿ ವಿಶೇಷ ಯೋಜನೆಯನ್ನು ಸಿದ್ದಪಡಿಸಿದೆ. ಇಷ್ಟೆಲ್ಲ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದರೂ ಇದನ್ನು ಸಹಿಸದ ಕೆಲವು ಸ್ಥಳೀಯ ರಾಜಕೀಯ ವ್ಯಕ್ತಿಗಳು ಜನರನ್ನು ಎತ್ತಿಕಟ್ಟುವಂತಹ ಕೆಲಸಕ್ಕೆ ಕೈಹಾಕಿರುವುದು ನಿಜಕ್ಕೂ ದುರಾದೃಷ್ಟಕರ ಸಂಗತಿಯಾಗಿದೆ. ಹೀಗಾಗಿ ರಾಜಕೀಯ ಪ್ರೇರಿತ ಹೊಂದಿರುವ ಬಂದ್ಗೆ ಕಾರ್ಮಿಕರು ಹಾಗೂ ನಾಗರೀಕರು ಬೆಂಬಲ ನೀಡಬಾರದು ಎಂದರು.
ಶಾಸಕರ ಮೇಲೆ ಆಕ್ರೋಶ: ರಾಜಕೀಯ ಪಟ್ಟಭದ್ರ ಹಿತಾಸಕ್ತಿಗಳು ಎಂದರೆ ಸ್ಥಳೀಯ ಶಾಸಕ ಬಿ.ಕೆ.ಸಂಗಮೇಶ್ ರವರೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ ಅವರು ಹಾಲಿ ಶಾಸಕರಿರಬಹುದು, ಮಾಜಿ ಶಾಸಕರಿರಬಹುದು ಆದರೆ ಇಂತಹ ಪಿತೂರಿ ಕೆಲಸಕ್ಕೆ ಯಾರು ಕೈಹಾಕಬಾರದು ಎಂದು ಹೇಳಿದರಲ್ಲದೆ, ಸ್ಥಳಿಯ ಶಾಸಕರಾದ ಬಿ.ಕೆ.ಸಂಗಮೇಶ್ವರರವರಿಗೆ ಎಂಪಿಎಂ ಹಾಗೂ ವಿಐಎಸ್ಎಲ್ ಕಾರ್ಖಾನೆಯಲ್ಲಿ ಸ್ಕ್ರಾಫ್ ಮಾಡುವ ಬಯಕೆಯನ್ನು ಹೊಂದಿದ್ದಾರೆ. ಅವರಿಗೆ ಆಸಕ್ತಿ ಇರುವುದು ಅಭಿವೃದ್ಧಿಯಲ್ಲಲ್ಲ, ಬದಲಿಗೆ ರಾಜ್ಯ ಸರ್ಕಾರದ ಮೇಲೆ ಪಿತೂರಿ ನಡೆಸುವುದೇ ಅವರ ಮುಖ್ಯ ಉದ್ದೇಶವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. [ಭದ್ರಾವತಿ]
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications