ಕರ್ತವ್ಯ ನಿರತ ಜಿಲ್ಲಾಧಿಕಾರಿಯ ಸಜೀವ ದಹನ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ 10 ಕಿ.ಮೀ. ದೂರದಲ್ಲಿರುವ ಮನಮಾದ್ ನಲ್ಲಿ ಈ ದುರಂತ ಸಂಭವಿಸಿದೆ. ಹತರಾಗಿರುವವರು ಮಾಲೆಗಾಂವ್ ನ ಹೆಚ್ಚುವರಿ ಜಿಲ್ಲಾಧಿಕಾರಿ ಯಶವಂತ್ ಸೋನಾವಾನೆ. ಅಕ್ರಮವಾಗಿ ಪೆಟ್ರೋಲ್ ಮತ್ತು ಡೀಸೆಲ್ ದಂಧೆಯಲ್ಲಿ ತೊಡಗಿದ್ದ ಪಾತಕಿಗಳು ಈ ನಿರ್ಮಾನುಷ ಕೃತ್ಯವೆಸಗಿದ್ದಾರೆ.
ತಹಸೀಲ್ದಾರ್ ಭೇಟಿಗೆಂದು ಯಶವಂತ್ ಅವರು ನಂದಗಾಂವ್ ಗೆ ಹೊರಟಿದ್ದ ಸಂದರ್ಭದಲ್ಲಿ ಐಓಸಿ, ಎಚ್ ಪಿಸಿಎಲ್ ಪೆಟ್ರೋಲ್ ಬಂಕ್ ಬಳಿ ಕೆಲ ಟ್ರಕ್ ಗಳನ್ನು ನಿಲ್ಲಿಸಿದ್ದನ್ನು ವೀಕ್ಷಿಸಿದ್ದಾರೆ. ಅನುಮಾನ ಬಂದು ಕಾರಿನಿಂದ ಇಳಿದು ವಿಚಾರಣೆಗೆ ಯಶವಂತ್ ತೊಡಗಿದ್ದಾರೆ. ಆಗ ಪೆಟ್ರೋಲ್ ಕಾಳಸಂತೆಗೆ ಕುಖ್ಯಾತನಾಗಿರುವ ಪೋಪಟ್ ಶಿಂಧೆ ಮತ್ತಿತರರು ದಾಳಿ ನಡೆಸಿ ಯಶವಂತ್ ರನ್ನು ಸಜೀವವಾಗಿ ಸುಟ್ಟಹಾಕಿದ್ದಾರೆ. ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ.
ಅತ್ಯಂತ ದಕ್ಷ ಅಧಿಕಾರಿಯೆಂದು ಹೆಸರು ಪಡೆದಿದ್ದ ಯಶವಂತ್ ಅವರ ಜೊತೆ ಒಬ್ಬ ಸಹಾಯಕ ಮತ್ತು ಸಿಬ್ಬಂದಿಯೊಬ್ಬರಿದ್ದರೆಂದು ತಿಳಿದುಬಂದಿದೆ. ಕೆಲ ಮಾಹಿತಿಯ ಪ್ರಕಾರ ಪೆಟ್ರೋಲ್ ಕಾಳಸಂತೆಯ ಬಗ್ಗೆ ಒಂದು ವಾರದ ಹಿಂದೆಯೇ ಅವರಿಗೆ ಮಾಹಿತಿ ಲಭಿಸಿತ್ತು. ಇಂಥ ದಂಧೆಗೆ ಕುಖ್ಯಾತಿ ಪಡೆದ ಆ ಪ್ರದೇಶಕ್ಕೆ ಹೋಗುವಾಗ ಪೊಲೀಸ್ ರಕ್ಷಣೆಯನ್ನು ಪಡೆಯದಿರುವುದು ಯಶವಂತ್ ಅವರಿಗೆ ಮುಳುವಾಗಿದೆ.
ಈ ಭೀಕರ ಪ್ರಕರಣದ ತನಿಖೆ ನಡೆಸಬೇಕೆಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಪೃಥ್ವಿರಾಜ್ ಚಹ್ವಾಣ್ ಆದೇಶಿಸಿದ್ದಾರೆ. ಪೊಲೀಸರು ದುಷ್ಕರ್ಮಿಗಳ ಹುಡುಕಾಟದಲ್ಲಿ ತೊಡಗಿದ್ದಾರೆ. [ದುರಂತ]
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications