ಹಂಪಿ ಉತ್ಸವ ಮತ್ತು ವಿವಾದಗಳು!

ನಂತರದ ಉತ್ಸವಗಳಲ್ಲಿ ಉತ್ಸವ ಆಚರಿಸುವವರನ್ನು ತೀವ್ರವಾಗಿ ಕಾಡಿದ್ದು, ಬರ - ನೆರೆ, ಆರ್ಥಿಕ ಮುಗ್ಗಟ್ಟು. ಅಲ್ಲದೇ, ಸಂವಿಧಾನವಾಗಿ ರಾಜಕೀಯ ವ್ಯವಸ್ಥೆಯನ್ನೇ ಏರುಪೇರು ಮಾಡಿದ್ದು ಎಸ್.ಆರ್. ಬೊಮ್ಮಾಯಿ ಅವರ ಆಡಳಿತಾವಧಿಯಲ್ಲಿ ರಾಷ್ಟ್ರಪತಿ ಆಡಳಿತ. ಎಸ್.ಎಂ. ಕೃಷ್ಣ ಆಡಳಿತಾವಧಿಯಲ್ಲಿ ಜನವರಿ 26ರ ಸಂಜೆ ಉತ್ಸವ ಉದ್ಘಾಟನೆಗೊಳ್ಳಬೇಕಿತ್ತು. ಆದರೆ, ಹೊಸಪೇಟೆ ತಾಲೂಕು ಪಂಚಾಯಿತಿ ಅಧ್ಯಕ್ಷ ಸೂರ್ಯನಾರಾಯಣ ಧ್ವಜವಂದನೆ ಸ್ವೀಕರಿಸುವಾಗಲೇ ಆಗುಂತಕನ ಗುಂಡಿನ ಗುರಿಗೆ ಕೊಲೆ ಆಗಿದ್ದರು. ಉತ್ಸವ ರದ್ದಾಯಿತು.
ಪ್ರತಿವರ್ಷದ ನವೆಂಬರ್ ತಿಂಗಳಲ್ಲಿ ಈ ಉತ್ಸವ ಆಚರಿಸಲ್ಪಡುತ್ತಿತ್ತು. ದೇಶ - ವಿದೇಶಗಳ ಯಾತ್ರಾರ್ಥಿಗಳು ಕೂಡ ನವೆಂಬರ್ನಲ್ಲಿ ಹಂಪಿಗೆ ಭೇಟಿ ನೀಡಲು ಅತೀವ ಆಸಕ್ತಿ ತೋರುತ್ತಿದ್ದರು. ಸುಗ್ಗಿಯ ಮಾಗಿ ಛಳಿಯ ಆಸುಪಾಸಿನಲ್ಲಿ ಹಿಗ್ಗಿನಿಂದ ಇರುತ್ತಿದ್ದ ಸುತ್ತಲಿನ ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಉತ್ಸವದಲ್ಲಿ ಪಾಲ್ಗೊಂಡು ಹಂಪಿ ಉತ್ಸವವನ್ನು ಗ್ರಾಮೀಣ ಉತ್ಸವವವಾಗಿ, ಹಳ್ಳಿಗರ ಹಬ್ಬವಾಗಿ, ಜನೋತ್ಸವವಾಗಿ ಆಚರಿಸುತ್ತಿದ್ದರು. ನವೆಂಬರ್ ನಿಂದ ಜನವರಿಗೆ ಉತ್ಸವಾಚರಣೆ ಮುಂದೂಡಿದ್ದರಿಂದ ಉತ್ಸವ ಕಾಟಾಚಾರಕ್ಕಷ್ಟೇ ನಡೆಯುತ್ತಿದೆ.
ಇದಕ್ಕೆ ಪೂರಕವಾಗಿ ತೆಲುಗರ ರಾಜ ಶ್ರೀಕೃಷ್ಣದೇವರಾಯರ ಪಟ್ಟಾಭಿಷೇಕದ 500ನೇ ಉತ್ಸವವನ್ನು ಬಿಜೆಪಿ ಆಚರಿಸಿ ವಿವಾದವನ್ನು ಮೈಮೇಲೆ ಎಳೆದುಕೊಂಡಿತು. ಇದೇ ಸಂದರ್ಭದಲ್ಲಿ ಕಳೆದ ವರ್ಷ ಬಳ್ಳಾರಿಯಲ್ಲಿ ಜನವರಿ 26ರಂದೇ ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ ಕುಸಿತು 30 ಜನರು ಮೃತಪಟ್ಟರು. ಹಂಪಿ ಕನ್ನಡ ವಿಶ್ವವಿದ್ಯಾಲಯದ 80 ಎಕರೆ ಭೂಮಿಯನ್ನು ಥೀಮ್ಪಾರ್ಕ್'ಗಾಗಿ ಸರ್ಕಾರ ವಶಕ್ಕೆ ತೆಗೆದುಕೊಂಡು ಮತ್ತೊಂದು ರೀತಿಯಲ್ಲಿ ವಿವಾದವನ್ನೇ ಹೊದ್ದುಕೊಂಡಿತು.
ಪ್ರಸ್ತುತ ಹಂಪಿ ಉತ್ಸವ 2011ಕ್ಕೆ ರಾಜ್ಯ ಸರ್ಕಾರ, ಜಿಲ್ಲಾ ಆಡಳಿತ ಭರದಿಂದ ಸಜ್ಜುಗೊಳ್ಳುತ್ತಿದೆ. ಜನವರಿ 27, 28 ಮತ್ತು 29ರಂದು ಹಂಪಿಯಲ್ಲಿ ಉತ್ಸವ ಆಚರಣೆಗೆ ಪೂರ್ವಭಾವಿ ಸಿದ್ಧತೆ ನಡೆದಿದೆ. ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರ ಅಂಕುಶ ತಿರುಗುತ್ತಿದೆ. ಮುಖ್ಯಮಂತ್ರಿಯವರ ವಿರುದ್ಧ ಅನೇಕ ಕೇಸುಗಳನ್ನು ಜಡಿಯಲಾಗಿದೆ. ಇದರ ಛಾಯೆ ಉತ್ಸವದ ಮೇಲೆ ಬಂದರೂ ಆಶ್ಚರ್ಯವಿಲ್ಲ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications