ಮೈಸೂರಿನ ನಮ್ಮ ಮಹಾರಾಜರ ಶಾಲೆಗೆ 175

ನಮ್ಮ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಈ ಶಾಲೆಯಲ್ಲಿ ಕಲಿತವರನೇನಲ್ಲ. ಆದರೆ ಮೈಸೂರಿಗೆ ಅಷ್ಟೇನೂ ದೂರವಿಲ್ಲದ ಬೂಕನಕೆರೆಯಲ್ಲಿ ವಿದ್ಯಾಭ್ಯಾಸ ಮಾಡಿದವರು. ಹಾಗಾಗಿ ಶೈಕ್ಷಣಿಕ ಕ್ಷೇತ್ರದ ಸವಾಲುಗಳ ಹಿನ್ನೆಲೆಯಲ್ಲಿ ಮಹಾರಾಜಾ ಶಾಲೆಯ ಇತಿಹಾಸ, ಕೊಡುಗೆ ಮತ್ತು ಅದರ ಮಹತ್ವವನ್ನು ಅರಿತವರಾಗಿದ್ದಾರೆ.
ಜನವರಿ 27ರ ಗುರುವಾರ ಅವರು ನಮ್ಮ ಹಳೆಯ ಶಾಲೆಗೆ ಬಂದಿದ್ದರು. ಶಾಲೆಯ 175ನೇ ವರ್ಷದ ಹುಟ್ಟುಹಬ್ಬ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯನ್ನು ಗಮನದಲ್ಲಿ ಇಟ್ಟುಕೊಂಡು ಒಂದು ಭವ್ಯವಾದ ಸಭಾಗಂಣವನ್ನು ಶಾಲೆಗೆ ಕಟ್ಟಿಸಿಕೊಡುವ ಘೋಷಣೆ ಮಾಡಿದರು. ಇದಕ್ಕಾಗಿ 5 ಕೋಟಿ ರೂಪಾಯಿಗಳ ಅನುದಾನ ಪ್ರಕಟಿಸಿದ್ದಲ್ಲದೆ ಸಭಾಂಗಣ ನಿರ್ಮಾಣವನ್ನು ಒಂದು ವರ್ಷದೊಳಗೆ ಪೂರೈಸಬೇಕಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು. ಕಟ್ಟಡ ನಿರ್ಮಾಣ ಮುಗಿದ ನಂತರ ಮತ್ತೊಮ್ಮೆ ಇಲ್ಲಿಗೆ ಬಂದು ಸಭಾಂಗಣ ಉದ್ಘಾಟನೆಯನ್ನು ತಾವೇ ನೆರವೇರಿಸುವುದಾಗಿಯೂ ಅವರು ಭರವಸೆ ನೀಡಿದರು.
ಮುಮ್ಮಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಮಹಾರಾಜ ಶಾಲೆ ಉಚಿತ ವಿದ್ಯಾದಾನಕ್ಕೆ ಹೆಸರುವಾಸಿಯಾದ ಸಂಸ್ಥೆ. ಇಂದಿನ ಡೊನೇಷನ್ ಪ್ರಪಂಚದಲ್ಲಿ ಇಂಥ ಶಾಲೆಗಳೂ ಕರ್ನಾಟಕದಲ್ಲಿ ಇವೆ ಎಂದರೆ ಆಶ್ಚರ್ಯವಾಗುವುದು ಸಹಜ. ಈ ಶಾಲೆಯಲ್ಲಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ಇದೆ. ಮುಂದೆ ಯಾವಾಗಲಾದರೂ ನೀವು ಮೈಸೂರಿಗೆ ಬಂದಾಗ ಚಾಮುಂಡಿ ದರ್ಶನದ ಜತೆಗೆ ಮಹಾರಾಜಾ ಶಾಲೆಗೂ ಬಂದು ನೋಡಿಕೊಂಡು ಹೋಗಿ ಎಂದು ಕೋರುತ್ತೇವೆ.
ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭಾಷಣ ಮಾಡಿ ಮಹಾರಾಜರ ಆಳ್ವಕೆಯಲ್ಲಿ ಮೈಸೂರು ಪ್ರಾಂತ್ಯದಲ್ಲಿ ನಡೆದ ಶೈಕ್ಷಣಿಕ ಕಾರ್ಯಕ್ರಮಗಳನ್ನು ನೆನೆದರು. ಮೈಸೂರು ಸಾಂಸ್ಕೃತಿಕ ನಗರವಷ್ಟೇ ಅಲ್ಲ, ಶೈಕ್ಷಣಿಕ ನಗರವೂ ಹೌದು ಎಂದು ಮಹಾರಾಜರು ಸಾಬೀತು ಮಾಡಿದವರು ಎಂದು ಗತಕಾಲದ ನೆನಪುಗಳನ್ನು ಕರೆದುಕೊಂಡರು.
ಮಹಾರಾಜಾ ಉಚಿತ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ಬೆಳದವರ ಪಟ್ಟಿ ತುಂಬ ದೊಡ್ಡದಿದೆ. ಭಾರತದ ಹೆಸರಾಂತ ವ್ಯಂಗ್ಯಚಿತ್ರಕಾರ ಆರ್ ಕೆ. ಲಕ್ಷಣ್, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸ್, ಪತ್ರಕರ್ತ ಖಾದ್ರಿ ಶಾಮಣ್ಣ, ಸಮಾಜ ಸೇವಾಕರ್ತ ವೆಂಕಟಕೃಷ್ಣಯ್ಯ ಮುಂತಾದವರಿಗೆ ಇದೇ ಮೊದಲ ಪಾಠಶಾಲೆ. ಒಟ್ಟಾರೆ ಮಹಾರಾಜಾ ಶಾಲೆ ಸ್ವಾತಂತ್ರ ಪೂರ್ವ ಮತ್ತು ಸ್ವಾತಂತ್ರೋತ್ತರ ಕರ್ನಾಟಕ ಸಮಾಜಕ್ಕೆ ಒಂದು ಕೊಂಡಿಯಾಗಿ ಉಳಿದು ಬೆಳೆದು ಇತರರನ್ನು ಬೆಳೆಸುವುದರಲ್ಲಿ ಕಾರ್ಯತತ್ಪರವಾಗಿದೆ ಎನ್ನುವ ವಿಚಾರದಲ್ಲಿ ಸಂಶಯವಿಲ್ಲ. [ಮೈಸೂರು ಜಿಲ್ಲಾಸುದ್ದಿ]
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications