ಮೈಸೂರಿನ ನಮ್ಮ ಮಹಾರಾಜರ ಶಾಲೆಗೆ 175

ನಮ್ಮ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಈ ಶಾಲೆಯಲ್ಲಿ ಕಲಿತವರನೇನಲ್ಲ. ಆದರೆ ಮೈಸೂರಿಗೆ ಅಷ್ಟೇನೂ ದೂರವಿಲ್ಲದ ಬೂಕನಕೆರೆಯಲ್ಲಿ ವಿದ್ಯಾಭ್ಯಾಸ ಮಾಡಿದವರು. ಹಾಗಾಗಿ ಶೈಕ್ಷಣಿಕ ಕ್ಷೇತ್ರದ ಸವಾಲುಗಳ ಹಿನ್ನೆಲೆಯಲ್ಲಿ ಮಹಾರಾಜಾ ಶಾಲೆಯ ಇತಿಹಾಸ, ಕೊಡುಗೆ ಮತ್ತು ಅದರ ಮಹತ್ವವನ್ನು ಅರಿತವರಾಗಿದ್ದಾರೆ.
ಜನವರಿ 27ರ ಗುರುವಾರ ಅವರು ನಮ್ಮ ಹಳೆಯ ಶಾಲೆಗೆ ಬಂದಿದ್ದರು. ಶಾಲೆಯ 175ನೇ ವರ್ಷದ ಹುಟ್ಟುಹಬ್ಬ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯನ್ನು ಗಮನದಲ್ಲಿ ಇಟ್ಟುಕೊಂಡು ಒಂದು ಭವ್ಯವಾದ ಸಭಾಗಂಣವನ್ನು ಶಾಲೆಗೆ ಕಟ್ಟಿಸಿಕೊಡುವ ಘೋಷಣೆ ಮಾಡಿದರು. ಇದಕ್ಕಾಗಿ 5 ಕೋಟಿ ರೂಪಾಯಿಗಳ ಅನುದಾನ ಪ್ರಕಟಿಸಿದ್ದಲ್ಲದೆ ಸಭಾಂಗಣ ನಿರ್ಮಾಣವನ್ನು ಒಂದು ವರ್ಷದೊಳಗೆ ಪೂರೈಸಬೇಕಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು. ಕಟ್ಟಡ ನಿರ್ಮಾಣ ಮುಗಿದ ನಂತರ ಮತ್ತೊಮ್ಮೆ ಇಲ್ಲಿಗೆ ಬಂದು ಸಭಾಂಗಣ ಉದ್ಘಾಟನೆಯನ್ನು ತಾವೇ ನೆರವೇರಿಸುವುದಾಗಿಯೂ ಅವರು ಭರವಸೆ ನೀಡಿದರು.
ಮುಮ್ಮಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಮಹಾರಾಜ ಶಾಲೆ ಉಚಿತ ವಿದ್ಯಾದಾನಕ್ಕೆ ಹೆಸರುವಾಸಿಯಾದ ಸಂಸ್ಥೆ. ಇಂದಿನ ಡೊನೇಷನ್ ಪ್ರಪಂಚದಲ್ಲಿ ಇಂಥ ಶಾಲೆಗಳೂ ಕರ್ನಾಟಕದಲ್ಲಿ ಇವೆ ಎಂದರೆ ಆಶ್ಚರ್ಯವಾಗುವುದು ಸಹಜ. ಈ ಶಾಲೆಯಲ್ಲಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ಇದೆ. ಮುಂದೆ ಯಾವಾಗಲಾದರೂ ನೀವು ಮೈಸೂರಿಗೆ ಬಂದಾಗ ಚಾಮುಂಡಿ ದರ್ಶನದ ಜತೆಗೆ ಮಹಾರಾಜಾ ಶಾಲೆಗೂ ಬಂದು ನೋಡಿಕೊಂಡು ಹೋಗಿ ಎಂದು ಕೋರುತ್ತೇವೆ.
ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭಾಷಣ ಮಾಡಿ ಮಹಾರಾಜರ ಆಳ್ವಕೆಯಲ್ಲಿ ಮೈಸೂರು ಪ್ರಾಂತ್ಯದಲ್ಲಿ ನಡೆದ ಶೈಕ್ಷಣಿಕ ಕಾರ್ಯಕ್ರಮಗಳನ್ನು ನೆನೆದರು. ಮೈಸೂರು ಸಾಂಸ್ಕೃತಿಕ ನಗರವಷ್ಟೇ ಅಲ್ಲ, ಶೈಕ್ಷಣಿಕ ನಗರವೂ ಹೌದು ಎಂದು ಮಹಾರಾಜರು ಸಾಬೀತು ಮಾಡಿದವರು ಎಂದು ಗತಕಾಲದ ನೆನಪುಗಳನ್ನು ಕರೆದುಕೊಂಡರು.
ಮಹಾರಾಜಾ ಉಚಿತ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ಬೆಳದವರ ಪಟ್ಟಿ ತುಂಬ ದೊಡ್ಡದಿದೆ. ಭಾರತದ ಹೆಸರಾಂತ ವ್ಯಂಗ್ಯಚಿತ್ರಕಾರ ಆರ್ ಕೆ. ಲಕ್ಷಣ್, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸ್, ಪತ್ರಕರ್ತ ಖಾದ್ರಿ ಶಾಮಣ್ಣ, ಸಮಾಜ ಸೇವಾಕರ್ತ ವೆಂಕಟಕೃಷ್ಣಯ್ಯ ಮುಂತಾದವರಿಗೆ ಇದೇ ಮೊದಲ ಪಾಠಶಾಲೆ. ಒಟ್ಟಾರೆ ಮಹಾರಾಜಾ ಶಾಲೆ ಸ್ವಾತಂತ್ರ ಪೂರ್ವ ಮತ್ತು ಸ್ವಾತಂತ್ರೋತ್ತರ ಕರ್ನಾಟಕ ಸಮಾಜಕ್ಕೆ ಒಂದು ಕೊಂಡಿಯಾಗಿ ಉಳಿದು ಬೆಳೆದು ಇತರರನ್ನು ಬೆಳೆಸುವುದರಲ್ಲಿ ಕಾರ್ಯತತ್ಪರವಾಗಿದೆ ಎನ್ನುವ ವಿಚಾರದಲ್ಲಿ ಸಂಶಯವಿಲ್ಲ. [ಮೈಸೂರು ಜಿಲ್ಲಾಸುದ್ದಿ]
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications