ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನನಗೆ ಜೀವಬೆದರಿಕೆಯಿದೆ : ಯಡಿಯೂರಪ್ಪ ಆತಂಕ

By * ಬಿಎಂ ಲವಕುಮಾರ್, ಮೈಸೂರು
|
Google Oneindia Kannada News

BS Yeddyurappa
ಸುತ್ತೂರು, ಜ. 31 : ನನಗೆ ಜೀವಬೆದರಿಕೆಯಿದ್ದು ವಿಧಾನಸೌಧದಿಂದ ಸುರಕ್ಷಿತವಾಗಿ ಮನೆಗೆ ತಲುಪುತ್ತೇನೆ ಎಂಬ ನಂಬಿಕೆ ನನಗಿಲ್ಲ ಎಂದು ಅಳಲು ತೋಡಿಕೊಂಡವರು ಬೇರಾರು ಅಲ್ಲ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ!

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಸುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವದ ಎರಡನೆಯ ದಿನದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಂದು ಬೆಳಿಗ್ಗೆ 9 ಗಂಟೆಗೆ ಹೆಲಿಕಾಪ್ಟರ್‌ನಲ್ಲಿ ಸುತ್ತೂರಿಗೆ ಆಗಮಿಸಿದಾಗ ಅವರನ್ನು ಮಾತನಾಡಿಸಿದ ಸಂದರ್ಭ ತಮ್ಮ ಅಳಲನ್ನು ಮಾಧ್ಯಮದವರ ಮುಂದೆ ತೋಡಿಕೊಂಡರು.

ನನ್ನ ವಿರುದ್ಧ ಮಾಟ-ಮಂತ್ರ ಮಾಡುವ ಮೂಲಕ ಮುಗಿಸುವ ಷಡ್ಯಂತ್ರ ನಡೆಯುತ್ತಿದೆ. ಆದರೆ ನಾನು ದೇವರ ಮೇಲೆ ಭಾರ ಹಾಕಿ ದಿನಕಳೆಯುತ್ತಿದ್ದೇನೆ. ಯಾರಿಂದಲೂ ನನ್ನನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಲು ಸಾಧ್ಯವಿಲ್ಲ ಮುಂದಿನ ಅವಧಿಗೂ ನಾನೇ ಸಿಎಂ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನನ್ನ ಹಾಗೂ ಸರ್ಕಾರದ ವಿರುದ್ಧ ವಿಪಕ್ಷದವರು ಮಾಡುತ್ತಿರುವ ಪಿತೂರಿ ಹೆಚ್ಚು ದಿನ ನಡೆಯಲ್ಲ. ಸದ್ಯದಲ್ಲಿಯೇ ವಿಪಕ್ಷಗಳ ಅಕ್ರಮ ಬಯಲು ಮಾಡುವುದಾಗಿ ಹೇಳಿದ ಅವರು, ರಾಜ್ಯಪಾಲರ ಕಾರ್ಯವೈಖರಿ ಬಗ್ಗೆ ಪ್ರಧಾನಿಗೆ ಪತ್ರ ಬರೆಯುವುದಾಗಿ ತಿಳಿಸಿದರು. ಬಳಿಕ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ನೂತನ ವಧು-ವರರಿಗೆ ಶುಭಹಾರೈಸಿದರು. [ನಾಗರಿಕ ಪತ್ರಕರ್ತ]

English summary
Chief minister of Karnataka BS Yeddyurappa complains of death threat to him. He has alleged that opposition parties are conspiring to finish him. BSY was in Suttur in Mysore district to attend mass marriage function.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X