ನೆಹರೂ ಕ್ರೀಡಾಂಗಣ ದುರ್ಬಳಕೆ, ಪ್ರತಿಭಟನೆ

ಇಲ್ಲಿ ಕ್ರೀಡೇತರ ಚಟುವಟಿಕೆಗೆ ಅವಕಾಶ ನೀಡದಂತೆ ನೂರಾರು ಬಾರಿ ಕ್ರೀಡಾಪಟುಗಳು,ಕ್ರೀಡಾಭಿಮಾನಿಗಳು ಹಾಗೂ ಕ್ರೀಡಾಸಂಸ್ಥೆಗಳು ಆಗ್ರಹಿಸುತ್ತಾ ಬಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇಲ್ಲಿನ ಅಧಿಕಾರಿಗಳು ಹಾಗೂ ಜಿಲ್ಲಾ ಕ್ರೀಡಾಂಗಣ ಸಮಿತಿ ರಾತ್ರೋರಾತ್ರಿ ಯಾವುದೇ ಲೆಕ್ಕಕ್ಕಿಲ್ಲದ ವ್ಯವಹಾರಿಕ ಸಂಸ್ಥೆಗಳ ಜೊತೆ ಮರ್ಜಿಯಾಗಿ ಜಾಗವನ್ನು ನೀಡುತ್ತಾ ಕ್ರೀಡೆಗೆ ಎಳ್ಳು ನೀರು ಬಿಡುತ್ತಿದ್ದಾರೆ.
ಇಲ್ಲಿ ನೆಹರೂ ಕ್ರೀಡಾಂಗಣವನ್ನು ನೋಡಿಕೊಳ್ಳುವ ಜಿಲ್ಲಾ ಕ್ರೀಡಾಂಗಣ ಸಮಿತಿ ಹಾಗೂ ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆ ಕ್ರೀಡೆಯನ್ನು ಮರೆತು ವ್ಯವಹಾರಿಕವಾಗಿ ಹಣದ ಬೆನ್ನು ಹತ್ತಿದ್ದು, ಜಿಲ್ಲಾಡಳಿತ ಗಮನಿಸಿ ಕ್ರೀಡಾಂಗಣಸಮಿತಿಯನ್ನು ಬದಲಿಸಿ ಕಾನೂನಿನ ಪ್ರಕಾರ ಸಮಿತಿ ರಚಿಸಬೇಕು.
ಜಿಲ್ಲಾ ಓಲಂಪಿಕ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್, ಸಹ್ಯಾದ್ರಿ ಸ್ನೇಹ ಸಂಘ, ಹಾಗೂ ಎಲ್ಲಾ ಕ್ರೀಡಾ ಸಂಸ್ಥೆಗಳು ಮತ್ತು ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು ಸೇರಲಿದ್ದು ಇನ್ನು ಮುಂದೆ ನೆಹರೂ ಕ್ರೀಡಾಂಗಣ ಕೇವಲ ಕ್ರೀಡೆಗೆ ಮಾತ್ರ ಮೀಸಲಿರಬೇಕು. ಯಾವುದೇ ಕಾರಣಕ್ಕೂ ನೆಹರೂ ಕ್ರೀಡಾಂಗಣದಲ್ಲಿ ಅನ್ಯ ಚಟುಟಿಕೆಗಳಿಗೆ ಅವಕಾಶವಾಗದಂತಿರಲಿ ಹಾಗೂ ಒಳಾಂಗಣ ಕ್ರೀಡಾಂಗಣದಲ್ಲಿ ಅಳವಡಿಸಿರುವ ಮರದ ನೆಲಹಾಸು ಕಳಪೆ ಕಾಮಗಾರಿ ತನಿಖೆಗೆ ಒತ್ತಾಯಿಸುವ ಉದ್ದೇಶ ಹೊಂದಿದೆ.
ಇಲ್ಲಿರುವ ಕ್ರೀಡಾ ಹಾಸ್ಟೆಲ್ನಲ್ಲಿ ಒಟ್ಟು 40ಕ್ಕೂ ಹೆಚ್ಚು ಮಕ್ಕಳಿದ್ದು, ಅವರಿಗೆ ಕಲಿಯಲು ಕ್ರೀಡಾಂಗಣವೇ ಖಾಲಿಯಾಗುತ್ತಿಲ್ಲ. ವಾಲಿಬಾಲ್, ಫುಟ್ಬಾಲ್ , ಹಾಕಿ, ಹ್ಯಾಂಡ್ ಬಾಲ್, ಬಾಲ್ ಬ್ಯಾಡ್ಮಿಂಟನ್ ಇತ್ಯಾದಿ ಕ್ರೀಡೆ ಕಲಿಯಲು ಕಷ್ಟವಾಗುತ್ತಿದೆ.
ಕಾನೂನು ಸಮರಕ್ಕೂ ಸಿದ್ಧ: ಅದೇ ರೀತಿ ನೆಹರೂ ಕ್ರೀಡಾಂಗಣದ ಬಳಕೆ ಕುರಿತು ಸ್ಪಷ್ಟ ನಿರ್ಧಾರ ಹೊರಬೀಳುವವರೆಗೂ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಹಾಗೂ ಕಾನೂನಾತ್ಮಕ ಹೋರಾಟಕ್ಕೂ ಸಿದ್ದತೆ ನಡೆಸಿದೆ. ನಮ್ಮ ಬೇಡಿಕೆಗೆ ಜಿಲ್ಲಾ ಕ್ರೀಡಾಂಗಣ ಸಮಿತಿ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಜಿಲ್ಲಾದ್ಯಂತ ಹಾಗೂ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಜಿಲ್ಲಾ ಓಲಂಪಿಕ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಕೆ.ಎಸ್.ಶಶಿ ತಿಳಿಸಿದ್ದಾರೆ. [ಶಿವಮೊಗ್ಗ]
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications