ಕರ್ನಾಟಕ ಹೊಸ ಡಿಜಿಪಿ ಯಾರು? ಕಾದು ನೋಡಿ

ಪ್ರಪ್ರಥಮ ಬಾರಿಗೆ ಹಂಗಾಮಿಯಾಗಿ ಹೊಸ ಡಿಜಿಪಿಯಾಗಿ ಎಸ್ ಟಿ ರಮೇಶ್ ಅವರನ್ನು ನೇಮಿಸಲಾಗಿದೆ ಎಂದು ಗೃಹಸಚಿವ ಆರ್ ಅಶೋಕ್ ಅವರು ಇಂದು ಸಂಜೆ ತಿಳಿಸಿದ್ದಾರೆ.
ಹೀಗಾಗಿ ಸರ್ಕಾರ ಡಿಜಿಪಿ ಸ್ಥಾನಕ್ಕೆ ಹಂಗಾಮಿಯಾಗಿ ಹಿರಿಯ ಅಧಿಕಾರಿಯನ್ನು ನೇಮಿಸುವುದು ಅಥವಾ ರಾಜ್ಯ ಮಹಾ ನಿರ್ದೇಶಕರ ಶ್ರೇಣಿಯಲಿರುವ ಹಿರಿಯ ಐಪಿಎಸ್ ಅಧಿಕಾರಿಗಳಾದ ಎಸ್.ಟಿ.ರಮೇಶ್, ಡಾ.ಡಿ.ವಿ.ಗುರುಪ್ರಸಾದ್ ( ಸಿಐಡಿ ಹಾಲಿ ಮಹಾನಿರ್ದೇಶಕ), ಎನ್.ಅಚ್ಯುತರಾವ್ ಅವರಲ್ಲಿ ಒಬ್ಬರಿಗೆ ಸ್ಥಾನ ನೀಡಬಹುದು.
ರೇಸ್ ನಲ್ಲಿರುವ ಇತರರು: ಡಿಜಿಪಿ ಸ್ಥಾನಕ್ಕೆ ಪ್ರಮುಖವಾಗಿ ಈಗಿರುವ ಹಿರಿಯ ಅಧಿಕಾರಿಗಳಾದ ಎಸ್.ಟಿ.ರಮೇಶ್, ಡಾ.ಡಿ.ವಿ.ಗುರುಪ್ರಸಾದ್, ಎನ್.ಅಚ್ಯುತ ರಾವ್ ಅಲ್ಲದೆ ಎ.ಆರ್.ಇನ್ಫೆಂಟ್ ಹಾಗೂ ಶ್ರೀವತ್ಸವರ ಹೆಸರು ಕೇಳಿಬರುತ್ತಿವೆ. ಆದರೆ ಸರಕಾರ ಇವರಲ್ಲಿ ಎಸ್.ಟಿ.ರಮೇಶ್, ಡಾ.ಡಿ.ವಿ.ಗುರುಪ್ರಸಾದ್, ಎನ್.ಅಚ್ಯುತರಾವ್ರಲ್ಲಿ ಒಬ್ಬರನ್ನು ನೇಮಿಸಲು ಮುಂದಾಗಿದೆ.
ಸಿಎಟಿ ತಡೆಯಾಜ್ಞೆ: ಪೊಲೀಸ್ ಮಹಾನಿರ್ದೇಶಕರ ಸ್ಥಾನಕ್ಕೆ ಎಡಿಜಿಪಿ ಶ್ರೇಣಿಯ ಅಧಿಕಾರಿಗಳನ್ನು ಪರಿಗಣಿಸಬೇಕು ಎಂದು ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಅವರು ಸಿಎಟಿ (ಕೇಂದ್ರ ಆಡಳಿತಾತ್ಮಕ ನ್ಯಾಯಾಧಿಕರಣ) ಮನವಿ ಮಾಡಿರುವುದರಿಂದ ನೇಮಕಾತಿಗೆ ಸಿಎಟಿ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ ಎಡಿಜಿಪಿ ಶ್ರೇಣಿಯಲ್ಲಿ 9ಕ್ಕೂ ಹೆಚ್ಚು ಅಧಿಕಾರಿಗಳು ಸ್ಪರ್ಧಿಗಳಾಗುತ್ತಾರೆ.
ಗೃಹ ಸಚಿವ ಆರ್ ಅಶೋಕ್ ನೇತೃತ್ವದ ಸಭೆಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್, ಗೃಹ ಇಲಾಖೆ ಕಾರ್ಯದರ್ಶಿ, ಕಾನೂನು ಇಲಾಖೆಯ ಕಾರ್ಯದರ್ಶಿ, ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಕಾರ್ಯದರ್ಶಿ ಸೇರಿದಂತೆ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಡಿಜಿ ಹಾಗೂ ಎಡಿಜಿಪಿ ಶ್ರೇಣಿಯ ಅಧಿಕಾರಿಗಳನ್ನು ಪರಿಗಣಿಸಿ ಹೆಸರು ಅಂತಿಮಗೊಳಿಸುವ ಸಾಧ್ಯತೆಯಿದೆ. ತಡೆಯಾಜ್ಞೆ ತೆರವುಗೊಂಡ ಮೇಲೆ ಹೊಸ ಡಿಜಿಪಿ ದರ್ಶನ ಭಾಗ್ಯ ಸಾಧ್ಯ. [ಅಜಯ್ ಕುಮಾರ್ ಸಿಂಗ್]
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications