ಶಬರಿಮಲೆ ಮಕರ ಜ್ಯೋತಿ ಮಾನವ ನಿರ್ಮಿತ!
ಈ ವಿಷಯ ಅವರವರ ನಂಬಿಕೆಗೆ ಬಿಟ್ಟ ವಿಚಾರ. ಇದರ ಬಗ್ಗೆ ಹೆಚ್ಚಿನ ಚರ್ಚೆ ಅಗತ್ಯವಿಲ್ಲ. ಪೊನ್ನಂಬಳಮೇಡುನಲ್ಲಿ ಹತ್ತುವ ಮಕರ ಜ್ಯೋತಿ ಮಾನವನೇ ಹಚ್ಚುವ ದೀಪ. ಇದನ್ನು ಟಿಡಿಬಿ ಕೂಡ ಅನುಮೋದಿಸುತ್ತದೆ. ಇದಕ್ಕೆ ಹೆಚ್ಚಿನ ಪ್ರಚಾರ ನೀಡಲೂ ಮಂಡಳಿ ಬಯಸುವುದಿಲ್ಲ ಎಂದು ಟಿಡಿಬಿಯ ಅಧ್ಯಕ್ಷ ಎಂ ರಾಜಗೋಪಾಲನ್ ನಾಯರ್ ಪತ್ರಕರ್ತರಿಗೆ ಸೋಮವಾರ ತಿಳಿಸಿದರು. ಶಬರಿಮಲೆ ದೇವಸ್ಥಾನ ಹಿರಿಯ ಅರ್ಚಕರು, ಆಡಳಿತ ಮಂಡಳಿಯ ಜೊತೆ ಚರ್ಚೆ ನಡೆಸಿದ ನಂತರ ಈ ಸಂಗತಿಯನ್ನು ನಾಯರ್ ಬಹಿರಂಗಪಡಿಸಿದ್ದಾರೆ.
ಜನವರಿ 14ರ ಸಂಕ್ರಾಂತಿಯಂದು ಮಕರ ಜ್ಯೋತಿ ಹತ್ತಿಕೊಂಡ ಕೆಲವೇ ಕ್ಷಣಗಳ ನಂತರ ನಡೆದ ಭೀಕರ ಕಾಲ್ತುಳಿತದಲ್ಲಿ ನೂರಕ್ಕೂ ಹೆಚ್ಚು ಜನ ಪ್ರಾಣ ತೆತ್ತಿದ್ದರು. ಈ ಹಿನ್ನೆಲೆಯಲ್ಲಿ ಕೇರಳ ಹೈಕೋರ್ಟ್ ಟ್ರಾವಂಕೋರ್ ದೇವಸ್ಥಾನದ ಮಂಡಳಿಯಿಂದ, ಮಕರ ಜ್ಯೋತಿಯು ಮಾನವ ನಿರ್ಮಿತವೋ ಅಥವಾ ದೈವ ಸೃಷ್ಟಿಯೋ ಎಂದು ವಿವರಣೆ ಕೇಳಿತ್ತು.
ಮಕರ ಜ್ಯೋತಿಯ ಸೃಷ್ಟಿ ಚರ್ಚೆಯ ಪ್ರಮುಖ ವಿಚಾರವಾಗಿರಲಿಲ್ಲ. ವಿಪರೀತ ಜನದಟ್ಟಣೆಯನ್ನು ತಪ್ಪಿಸಲು ನವೆಂಬರ್ ನಿಂದ ಆರಂಭವಾಗುವ ಶಬರಿಮಲೆ ಯಾತ್ರೆಯ ಬದಲಿಗೆ ಇಡೀ ವರ್ಷ ಭಕ್ತರಿಗೆ ದೇವಸ್ಥಾನಕ್ಕೆ ಬರಲು ಅವಕಾಶ ನೀಡುವ ಕುರಿತೂ ಚರ್ಚಿಸಲಾಯಿತು. ಆದರೆ, ಇಡೀ ವರ್ಷ ತೆರೆದಿರುವುದು ಸಂಪ್ರದಾಯಕ್ಕೆ ವಿರುದ್ಧವಾದುದು ಎಂಬ ಅಭಿಪ್ರಾಯ ಮೂಡಿಬಂತು ಎಂದು ಅವರು ತಿಳಿಸಿದರು.
ಅಯ್ಯಪ್ಪ ಸ್ವಾಮಿಯ ದರ್ಶನಕ್ಕಾಗಿ ಭಕ್ತಾದಿಗಳಿಗೆ ದೇವಸ್ಥಾನವನ್ನು ಇಡೀ ವರ್ಷ ಯಾಕೆ ತೆರೆದಿರಬಾರದು ಎಂದು ಪ್ರಶ್ನೆಯನ್ನೂ ಕೇರಳ ಹೈಕೋರ್ಟ್ ಮಂಡಳಿಗೆ ಕೇಳಿತ್ತು. ಹಾಗೆಯೆ, ಹದಿನೆಂಟು ಮೆಟ್ಟಿಲುಗಳನ್ನು ಅಗಲೀಕರಿಸುವ ಬಗ್ಗೆಯೂ ಚಿಂತನೆ ನಡೆಸಲು ಹೇಳಿತ್ತು. ಈ ಎರಡೂ ಕೋರಿಕೆಗೆ ದೇವಸ್ಥಾನದ ಆಡಳಿತ ಮಂಡಳಿ ನಕಾರಾತ್ಮಕ ಧೋರಣೆ ತಾಳಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ













Click it and Unblock the Notifications