ಶಬರಿಮಲೆ ಮಕರ ಜ್ಯೋತಿ ಮಾನವ ನಿರ್ಮಿತ!
ಈ ವಿಷಯ ಅವರವರ ನಂಬಿಕೆಗೆ ಬಿಟ್ಟ ವಿಚಾರ. ಇದರ ಬಗ್ಗೆ ಹೆಚ್ಚಿನ ಚರ್ಚೆ ಅಗತ್ಯವಿಲ್ಲ. ಪೊನ್ನಂಬಳಮೇಡುನಲ್ಲಿ ಹತ್ತುವ ಮಕರ ಜ್ಯೋತಿ ಮಾನವನೇ ಹಚ್ಚುವ ದೀಪ. ಇದನ್ನು ಟಿಡಿಬಿ ಕೂಡ ಅನುಮೋದಿಸುತ್ತದೆ. ಇದಕ್ಕೆ ಹೆಚ್ಚಿನ ಪ್ರಚಾರ ನೀಡಲೂ ಮಂಡಳಿ ಬಯಸುವುದಿಲ್ಲ ಎಂದು ಟಿಡಿಬಿಯ ಅಧ್ಯಕ್ಷ ಎಂ ರಾಜಗೋಪಾಲನ್ ನಾಯರ್ ಪತ್ರಕರ್ತರಿಗೆ ಸೋಮವಾರ ತಿಳಿಸಿದರು. ಶಬರಿಮಲೆ ದೇವಸ್ಥಾನ ಹಿರಿಯ ಅರ್ಚಕರು, ಆಡಳಿತ ಮಂಡಳಿಯ ಜೊತೆ ಚರ್ಚೆ ನಡೆಸಿದ ನಂತರ ಈ ಸಂಗತಿಯನ್ನು ನಾಯರ್ ಬಹಿರಂಗಪಡಿಸಿದ್ದಾರೆ.
ಜನವರಿ 14ರ ಸಂಕ್ರಾಂತಿಯಂದು ಮಕರ ಜ್ಯೋತಿ ಹತ್ತಿಕೊಂಡ ಕೆಲವೇ ಕ್ಷಣಗಳ ನಂತರ ನಡೆದ ಭೀಕರ ಕಾಲ್ತುಳಿತದಲ್ಲಿ ನೂರಕ್ಕೂ ಹೆಚ್ಚು ಜನ ಪ್ರಾಣ ತೆತ್ತಿದ್ದರು. ಈ ಹಿನ್ನೆಲೆಯಲ್ಲಿ ಕೇರಳ ಹೈಕೋರ್ಟ್ ಟ್ರಾವಂಕೋರ್ ದೇವಸ್ಥಾನದ ಮಂಡಳಿಯಿಂದ, ಮಕರ ಜ್ಯೋತಿಯು ಮಾನವ ನಿರ್ಮಿತವೋ ಅಥವಾ ದೈವ ಸೃಷ್ಟಿಯೋ ಎಂದು ವಿವರಣೆ ಕೇಳಿತ್ತು.
ಮಕರ ಜ್ಯೋತಿಯ ಸೃಷ್ಟಿ ಚರ್ಚೆಯ ಪ್ರಮುಖ ವಿಚಾರವಾಗಿರಲಿಲ್ಲ. ವಿಪರೀತ ಜನದಟ್ಟಣೆಯನ್ನು ತಪ್ಪಿಸಲು ನವೆಂಬರ್ ನಿಂದ ಆರಂಭವಾಗುವ ಶಬರಿಮಲೆ ಯಾತ್ರೆಯ ಬದಲಿಗೆ ಇಡೀ ವರ್ಷ ಭಕ್ತರಿಗೆ ದೇವಸ್ಥಾನಕ್ಕೆ ಬರಲು ಅವಕಾಶ ನೀಡುವ ಕುರಿತೂ ಚರ್ಚಿಸಲಾಯಿತು. ಆದರೆ, ಇಡೀ ವರ್ಷ ತೆರೆದಿರುವುದು ಸಂಪ್ರದಾಯಕ್ಕೆ ವಿರುದ್ಧವಾದುದು ಎಂಬ ಅಭಿಪ್ರಾಯ ಮೂಡಿಬಂತು ಎಂದು ಅವರು ತಿಳಿಸಿದರು.
ಅಯ್ಯಪ್ಪ ಸ್ವಾಮಿಯ ದರ್ಶನಕ್ಕಾಗಿ ಭಕ್ತಾದಿಗಳಿಗೆ ದೇವಸ್ಥಾನವನ್ನು ಇಡೀ ವರ್ಷ ಯಾಕೆ ತೆರೆದಿರಬಾರದು ಎಂದು ಪ್ರಶ್ನೆಯನ್ನೂ ಕೇರಳ ಹೈಕೋರ್ಟ್ ಮಂಡಳಿಗೆ ಕೇಳಿತ್ತು. ಹಾಗೆಯೆ, ಹದಿನೆಂಟು ಮೆಟ್ಟಿಲುಗಳನ್ನು ಅಗಲೀಕರಿಸುವ ಬಗ್ಗೆಯೂ ಚಿಂತನೆ ನಡೆಸಲು ಹೇಳಿತ್ತು. ಈ ಎರಡೂ ಕೋರಿಕೆಗೆ ದೇವಸ್ಥಾನದ ಆಡಳಿತ ಮಂಡಳಿ ನಕಾರಾತ್ಮಕ ಧೋರಣೆ ತಾಳಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO













Click it and Unblock the Notifications