ಭಾರತೀಯ ವಿದ್ಯಾರ್ಥಿಗಳ ಕಾಲ್ಪಟ್ಟಿಗೆ ಕೃಷ್ಣ ಕಿಡಿಕಿಡಿ

ಬೆಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್ ಸಮಾವೇಶದ ನಂತರ ಸದಾಶಿವನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಕಷ್ಟದಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಲು ಅಮೆರಿಕದಲ್ಲಿನ ಭಾರತೀಯ ರಾಯಭಾರಿ ಕಚೇರಿಗೆ ಸೂಚನೆ ನೀಡಲಾಗಿದೆ. ರಾಯಭಾರಿ ಕಚೇರಿ ಅಧಿಕಾರಿಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಪೋಷಕರು ಅತಂಕ ಪಡಬೇಕಾಗಿಲ್ಲ ಎಂದು ಕೃಷ್ಣ ಧೈರ್ಯ ತುಂಬಿದ್ದಾರೆ.
ಭಾರತೀಯ ವಿದ್ಯಾರ್ಧಿಗಳು ಅಪರಾಧಿಗಳಲ್ಲ. ಹೀಗಾಗಿ ರೇಡಿಯೋ ಕಾಲರ್ ಗಳನ್ನು ತಕ್ಷಣವೇ ತೆಗೆದುಹಾಕುವಂತೆ ಕೋರಲಾಗಿದೆ. ಘಟನೆ ನಂತರ ಭಾರತಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೂ ಕೇಂದ್ರ ಸರಕಾರ ಅಗತ್ಯ ನೆರವು ನೀಡಲಿದೆ. ಮುಖ್ಯವಾಗಿ ಆಂಧ್ರಪ್ರದೇಶದ ವಿದ್ಯಾರ್ಥಿಗಳು ಟ್ರೈವ್ಯಾಲಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎಂದು ಕೃಷ್ಣ ವಿವರಿಸಿದರು.
ಅಮೆರಿಕ ಸ್ಪಷ್ಟನೆ : ವಲಸೆ ಇಲಾಖೆಯ ಅಧಿಕಾರಿಗಳು ತೆಗೆದುಕೊಂಡಿರುವ ನಿರ್ಣಯದ ಬಗ್ಗೆ ತನಿಖೆ ನಡೆಸಲಾಗುವುದು. ಭಾರತೀಯ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಅಮೆರಿಕ ಸರಕಾರ ಸ್ಪಷ್ಟಪಡಿಸಿದೆ.











Click it and Unblock the Notifications