ಭೀಮಸೇನ ಜೋಶಿ ದೊಡ್ಡ ಕುಡುಕ : ಬಿಜೆಪಿ ಸದಸ್ಯ

ಬೆಂಗಳೂರು ಮಹಾನಗರ ಪಾಲಿಕೆ ಚಿಕ್ಕಪೇಟೆ ವಾರ್ಡ್ ನ ಬಿಜೆಪಿ ಜನಪ್ರತಿನಿಧಿ ಶಿವಕುಮಾರ್ ಅವರು, ಭೀಮಸೇನ ಜೋಶಿಯವರು ಬಹುದೊಡ್ಡ ಗಾಯಕರಾಗಿದ್ದರು. ಅವರು ಹಾಡಲು ವೇದಿಕೆ ಏರುವ ಮುನ್ನ ಮದ್ಯಪಾನ ಮಾಡುತ್ತಿದ್ದರು. ಮದ್ಯಪಾನ ಮಾಡದೆ ಅವರೂ ಎಂದೂ ಹಾಡುತ್ತಿರಲಿಲ್ಲ. ಈ ಸಂತಾಪ ಸೂಚಕ ಸಭೆಯಲ್ಲಿ ನಾವು "ಕುಡುಕರಿಗೂ ಗೌರವ ನೀಡಲೇಬೇಕು" ಎಂಬ ಅಸಂಬದ್ದ ಪದವನ್ನು ಬಳಸಿದರು.
ಶಿವಕುಮಾರ್ ಹೇಳಿಕೆಗೆ ಪಕ್ಷಾತೀತವಾಗಿ ಎಲ್ಲರೂ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಶಿವಕುಮಾರ್ ಅವರ ಮಾತಿನಿಂದ ಸಭೆಯಲ್ಲಿದ್ದ ಬಿಜೆಪಿಯ ಹಿರಿಯ ಸದಸ್ಯರು ತೀವ್ರ ಮುಜುಗರ ಅನುಭವಿಸಬೇಕಾಯಿತು. ಪ್ರತಿಪಕ್ಷ ಸದಸ್ಯರು, ಪ್ರಜ್ಞಾವಂತ, ಬುದ್ಧಿವಂತರ ಪಕ್ಷ ಎಂದು ಕರೆಸಿಕೊಳ್ಳುವ ನೀವು ಈ ನಾಡಿನ ಬಹುದೊಡ್ಡ ವಿದ್ವಾಂಸನಿಗೆ ಶ್ರದ್ಧಾಂಜಲಿ ಸಲ್ಲಿಸುವುದು ಇದೇ ರೀತಿಯೇ ಎಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ಸಭೆಯಲ್ಲಿ ಇನ್ನೇನು ಗದ್ದಲ ಶುರುವಾಗುತ್ತದೆ ಅನ್ನುವಷ್ಟರಲ್ಲಿ ಮೇಯರ್ ನಟರಾಜ್ ಸಭೆಯನ್ನು ಮುಂದೂಡಿದರು.
ಸಭೆ ಮುಂದೂಡಿದ ನಂತರ ಮೇಯರ್ ಎಸ್ ಕೆ ನಟರಾಜ್ ಹಾಗೂ ಆಡಳಿತ ಪಕ್ಷದ ನಾಯಕ ಸತ್ಯನಾರಾಯಣ ಅವರು ಶಿವಕುಮಾರ್ ಅವರನ್ನು ತಮ್ಮ ಕಚೇರಿಗೆ ಕರೆಸಿಕೊಂಡು ತರಾಟೆಗೆ ತೆಗೆದುಕೊಂಡರು ಎನ್ನಲಾಗಿದೆ. 'ಯಾವ ಸಂದರ್ಭದಲ್ಲಿ ಏನು ಮಾಡಬೇಕು ಎಂಬುದು ಗೊತ್ತಿಲ್ವಾ ನಿನಗೆ, ಮಾತನಾಡುವುದಕ್ಕಿಂತ ಸುಮ್ಮನೆ ಇದ್ದಿದ್ದರೆ ಪಕ್ಷದ ಗೌರವ ಉಳಿಯುತ್ತಿತ್ತು' ಎಂದು ಛೀಮಾರಿ ಹಾಕಿದ್ದಾರೆಂದು ತಿಳಿದು ಬಂದಿದೆ. ಶಿವಕುಮಾರ್ ಅವರು ಈ ರೀತಿ ಮಾತನಾಡಬಾರದಿತ್ತು. ನಾಳಿನ ಸಭೆಯಲ್ಲಿ ಅವರ ಮಾತುಗಳನ್ನು ಕಡತದಿಂದ ತೆಗೆದುಹಾಕಲಾಗುವುದು ಎಂದು ಮೇಯರ್ ಸ್ಪಷ್ಟನೆ ನೀಡಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications